ಕೇಂದ್ರ ಸರಕಾರದಿಂದ ಆರ್ಥಿಕ ವಲಯ ಸುಧಾರಣೆ


Team Udayavani, Sep 22, 2019, 3:09 AM IST

kendra

ಉಡುಪಿ: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡರು ಶನಿವಾರ “ಉದಯವಾಣಿ’ ಕಚೇರಿಗೆ ಭೇಟಿ ನೀಡಿದರು. ಮಣಿಪಾಲ್‌ ಗ್ರೂಪ್‌ನ ಆಡಳಿತ ನಿರ್ದೇಶಕ ಟಿ.ಗೌತಮ್‌ ಪೈ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಅವರು, ಸಾರ್ವಜನಿಕರ ಅಭಿಪ್ರಾಯಗಳನ್ನು ಪರಿಗಣಿಸಿ, ಕೇಂದ್ರ ಸರಕಾರ ಆರ್ಥಿಕ ವಲಯವನ್ನು ಸುಧಾರಿಸುವಲ್ಲಿ ಕ್ರಮ ಕೈಗೊಳ್ಳುತ್ತಿದೆ ಎಂದರು.

ವಾಹನೋದ್ಯಮದ ಪ್ರಗತಿಗೂ ಸರ್ಕಾರ ಪ್ರಯತ್ನಿಸುತ್ತಿದೆ ಎಂದ ಅವರು, ಸಾರ್ವಜನಿಕ ಸ್ವಾಮ್ಯದ ಬ್ಯಾಂಕುಗಳಿಂದ ಸಾಲ ಮೇಳವನ್ನು ಸಂಘಟಿಸಲಾಗುತ್ತಿದೆ. ಜಿಎಸ್‌ಟಿ ಜಾರಿಗೆ ಬರುವಾಗ ಅನೇಕ ತೊಡಕುಗಳಾದವು. ರಾಜ್ಯಗಳನ್ನು ಒಪ್ಪಿಸಬೇಕಿತ್ತು. ಅದನ್ನು ಪಾರಾಗಿ ಬಂದೆವು. ನೋಟು ನಿಷೇಧ ಮಾಡಿದಾಗಲೂ ಶೇ.7.2ರಷ್ಟು ಜಿಡಿಪಿ ಬೆಳವಣಿಗೆ ಇತ್ತು.

ಶೇ.8.2ರಷ್ಟು ಅಭಿವೃದ್ಧಿ ಕಂಡ ಜಿಡಿಪಿ, ಶೇ.5ಕ್ಕೆ ಕುಸಿದಾಗ ಅದನ್ನು ಸರಿಪಡಿಸಲು ಸುಧಾರಣಾ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ನಾವು ನಿಮ್ಮಂತಹ ಜನರಿಂದ ಮಾಹಿತಿ ಪಡೆದು ಕೇಂದ್ರ ಗೃಹ ಸಚಿವಾಲಯಕ್ಕೆ ಸಲ್ಲಿಸುತ್ತೇವೆ. ಅಲ್ಲಿಂದ ಅದು ತಿಂಕ್‌ಟ್ಯಾಂಕ್‌ (ಚಿಂತನ ಚಿಲುಮೆ) ಸಮಿತಿಗೆ ರವಾನೆಯಾಗಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಲಿದೆ ಎಂದರು.

ಪ್ರವಾಸೋದ್ಯಮ ಅಭಿವೃದ್ಧಿಗೆ ಕ್ರಮ: ಇತ್ತೀಚೆಗೆ ಶಾಸಕ ಕೆ.ರಘುಪತಿ ಭಟ್‌ ಅವರು ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಕೇಳಿದ್ದರು. ಇಲ್ಲಿ ಸಿಆರ್‌ಝಡ್‌ ವ್ಯಾಪ್ತಿಯ ಸಮಸ್ಯೆ ಇತ್ತು. ಈಗ ಇದರ ಮಾನದಂಡವನ್ನು 50 ಮೀ.ಗೆ ಇಳಿಸಲಾಗಿದೆ. ಇನ್ನು ಪ್ರವಾಸೋದ್ಯಮ ಅಭಿವೃದ್ಧಿಗೆ ತೊಂದರೆಯಾಗದು ಎಂದರು.

ಕಾಶ್ಮೀರದಲ್ಲಿ ನಾರ್ಮಲ್‌: ಕಾಶ್ಮೀರದಲ್ಲಿ ಎಲ್ಲ ನಾರ್ಮಲ್‌ ಆಗಿದೆ. ಏಳು ದಶಕಗಳಿಂದ ಇದ್ದ ಸಮಸ್ಯೆಯನ್ನು ಬಗೆಹರಿಸಿದ್ದೇವೆ. ಅಹಿತಕರ ಘಟನೆ ನಡೆಯಬಾರದೆಂದು ಸೈನಿಕರ ನಿಯೋಜನೆ, ಪ್ರತಿಭಟನೆ ಇತ್ಯಾದಿಗಳು ನಡೆಯದಂತೆ ಕೆಲವು ನಾಯಕರ ಗೃಹಬಂಧನ ನಡೆಸಿದ್ದೆವು. ಅಲ್ಲಿನವರ ಹಿತಕ್ಕಾಗಿ ಸೇಬಿಗೆ ಮೊದಲ ಬಾರಿ ಕನಿಷ್ಠ ಉತ್ತೇಜನ ಬೆಲೆ ನಿಗದಿಪಡಿಸಿ ಖರೀದಿಸುತ್ತಿದ್ದೇವೆ. ಇಡೀ ಜಗತ್ತೇ ನಮ್ಮ ಪರವಾಗಿದೆ ಎಂದರು.

ಸಚಿವರೊಂದಿಗೆ ಶಾಸಕರಾದ ಕೆ. ರಘುಪತಿ ಭಟ್‌, ಲಾಲಾಜಿ ಮೆಂಡನ್‌, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ನಾಯಕರಾದ ಕೆ. ಉದಯ ಕುಮಾರ ಶೆಟ್ಟಿ, ಕುಯಿಲಾಡಿ ಸುರೇಶ ನಾಯಕ್‌, ಮಹೇಶ್‌ ಠಾಕೂರ್‌, ದ.ಕ. ಜಿಲ್ಲೆಯ ಅಶೋಕಕುಮಾರ್‌ ರೈ ಮೊದಲಾದವರು ಇದ್ದರು.

“ತೆರಿಗೆ ಕಿರುಕುಳ ನಿಯಂತ್ರಣಕ್ಕೆ ಆನ್‌ಲೈನ್‌ ವ್ಯವಸ್ಥೆ’: ತೆರಿಗೆ ಸಂಗ್ರಹ ಕುರಿತು ಅಧಿಕಾರಿಗಳು ಕೊಡುವ ಕಿರುಕುಳದ ಬಗ್ಗೆ ನಮ್ಮ ಗಮನಕ್ಕೆ ಬಂದಿದೆ. ಮಾಲೀಕರಿಗೂ, ಅಧಿಕಾರಿಗಳಿಗೂ ನೇರ ಸಂಪರ್ಕವಿಲ್ಲದೆ ಎಲ್ಲ ವ್ಯವಹಾರಗಳೂ ಆನ್‌ಲೈನ್‌ನಲ್ಲಿ ಆಗುವಂತೆ ನೋಡಿಕೊಳ್ಳುವ ವ್ಯವಸ್ಥೆ ಅ. 1ರಿಂದ ಜಾರಿಗೊಳ್ಳಲಿದೆ. ಬಳಿಕ ಯಾರ ಹಸ್ತಕ್ಷೇಪಕ್ಕೂ ಅವಕಾಶವಿರುವುದಿಲ್ಲ ಎಂದು ಸದಾನಂದ ಗೌಡ ಹೇಳಿದರು.

ತೆರಿಗೆದಾರರ ಕ್ಷೇಮವನ್ನು ಸರಕಾರ ಕಾಪಾಡಬೇಕು. ತೆರಿಗೆ ಕಿರುಕುಳದಿಂದ ಉದ್ಯಮ ನಿಲ್ಲಿಸುವ ಸ್ಥಿತಿ ಬರಬಾರದು. ಆದ್ದರಿಂದ ಅದನ್ನು ನಿಯಂತ್ರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದ ಗೌತಮ್‌ ಪೈ ಅವರು, ದೇಶದ ಆರ್ಥಿಕ ಹಿಂಜರಿತ ತಡೆಯಲು ಕೇಂದ್ರ ಸರಕಾರ ಕೈಗೊಳ್ಳುತ್ತಿರುವ ಕ್ರಮಗಳನ್ನು ಸ್ವಾಗತಿಸಿದರು. ಕಾಶ್ಮೀರದ ವಿಷಯ ಸಂಬಂಧ ಸದಾನಂದಗೌಡರು ಕೇಳಿದ ಪ್ರಶ್ನೆಗೆ, ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದ್ದು, ನಮ್ಮ ಆಂತರಿಕ ವಿಷಯ ಎಂದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.