ಅಂಕದೊಂದಿಗೆ ಅಂತಃಕರಣದ ಉನ್ನತಿಯೂ ಅಗತ್ಯ: ಸುರೇಶ್‌ ಕುಮಾರ್‌


Team Udayavani, Feb 27, 2021, 10:46 PM IST

ಅಂಕದೊಂದಿಗೆ ಅಂತಃಕರಣದ ಉನ್ನತಿಯೂ ಅಗತ್ಯ: ಸುರೇಶ್‌ ಕುಮಾರ್‌

ಮಹಾನಗರ: ಶಿಕ್ಷಣದಲ್ಲಿ ಕೇವಲ ಅಂಕ ಗಳಿಕೆಯೇ ಪ್ರಧಾನವಾಗಿ ರಬಾರದು. ಮಕ್ಕಳಲ್ಲಿ ಒಳ್ಳೆಯ ಅಂತಃಕರಣವನ್ನು ಬೆಳೆಸಬೇಕು. ಆಗ ಸಮಾಜದ ಅನೇಕ ಸಮಸ್ಯೆಗಳಿಗೆ ಪರಿಹಾರ ದೊರಕಿದಂತಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹೇಳಿದರು.

ನಗರದ ಶಕ್ತಿ ನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಶನಿವಾರ ರೇಷ್ಮಾ ಮೆಮೋರಿಯಲ್ ಆಡಿಟೋರಿಯಂ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಇಂದಿನ ವಿದ್ಯಾರ್ಥಿಗಳು ಮುಂದಿನ ಸಮಾಜದ ನೇತಾರರು. ಅದುದರಿಂದ ಉತ್ತಮ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವುದು ಅಗತ್ಯ. ಇದೊಂದು ಸವಾಲಿನ ವರ್ಷ. ಕೊರೊನಾ ಎಲ್ಲ ಕ್ಷೇತ್ರಕ್ಕೂ ಹೊಡೆತ ನೀಡಿರುವಂತೆ ಶಿಕ್ಷಣ ಕ್ಷೇತ್ರದಲ್ಲೂ ದೂರ ಗಾಮಿ ಪರಿಣಾಮ ಬೀರಿದೆ. ಹಾಗಿದ್ದರೂ ಶಿಕ್ಷಣ ಸಂಸ್ಥೆಗಳು ಅನೇಕ ಸವಾಲುಗಳನ್ನು ಎದುರಿಸಿಕೊಂಡು ಮಕ್ಕಳಿಗೆ ಶಿಕ್ಷಣ ಕಡಿತ ಆಗದಂತೆ ಉತ್ತಮ ಪ್ರಯತ್ನಗಳನ್ನು ನಡೆಸುತ್ತಿವೆ ಎಂದರು.

ಶಕ್ತಿ ವಿದ್ಯಾಸಂಸ್ಥೆ ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡುತ್ತಿರುವ ಅನನ್ಯ ಸಾಧನೆ ಶ್ಲಾಘ ನೀಯವಾದುದು. ಸಂಸ್ಥೆಯ ಸಂಸ್ಥಾಪಕ, ಆಡಳಿತಾಧಿಕಾರಿ ಡಾ| ಕೆ.ಸಿ.ನಾೖಕ್‌ ಅವರ ದಕ್ಷ ಮಾರ್ಗದರ್ಶನ ಮತ್ತು ಸಮಾಜ ಮುಖೀ ಚಿಂತನೆಯೊಂದಿಗೆ ಮಾದರಿ ಶಿಕ್ಷಣ ಸಂಸ್ಥೆಯಾಗಿ ಮುನ್ನಡೆಯುತ್ತಿದೆ ಎಂದವರು ಅಭಿನಂದಿಸಿದರು. ಸರೋಶ್‌ ಮೆಮೋರಿಯಲ್ ಈಜು ಕೊಳವನ್ನು ಕರ್ನಾಟಕ ಸ್ವಿಮ್ಮಿಂಗ್‌ ಅಸೋಸಿಯೇಶನ್‌ ಅಧ್ಯಕ್ಷ ಗೋಪಾಲ್‌ ಹೊಸೂರು ಉದ್ಘಾಟಿಸಿ ಕ್ರಿಯಾಶೀಲ ವ್ಯಕ್ತಿತ್ವ ಮತ್ತು ವಿನೂತನ ಚಿಂತನೆಗಳ ಡಾ| ಕೆ.ಸಿ. ನಾೖಕ್‌ ಅವರ ಮಾರ್ಗದರ್ಶನದಲ್ಲಿ ಈಜುಕೊಳ, ಆಡಿಟೋರಿಯಂ ಸೊಗಸಾಗಿ ಮೂಡಿಬಂದಿದೆ ಎಂದರು.

ಮುಖ್ಯ ಅತಿಥಿಯಾಗಿದ್ದ ಶಾಸಕ ವೇದವ್ಯಾಸ ಕಾಮತ್‌ ಮಾತನಾಡಿ, ಶಕ್ತಿ ವಿದ್ಯಾಸಂಸ್ಥೆ ಗುಣಮಟ್ಟದ, ಮೌಲ್ಯಾ ಧಾರಿತ ಶಿಕ್ಷಣದೊಂದಿಗೆ ಯಶಸ್ಸಿನ ಪಥದಲ್ಲಿ ಮುನ್ನಡೆಯುತ್ತಿದೆ ಎಂದರು. ಎಮ್ಮೆಕೆರೆಯಲ್ಲಿ 17 ಕೋ.ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ ನಿರ್ಮಾಣ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಜತೆಗೆ ನಗರದಲ್ಲಿ ಮಹಿಳೆಯರಿಗಾಗಿ 4 ಕೋ. ರೂ. ವೆಚ್ಚದಲ್ಲಿ ಇನ್ನೊಂದು ಈಜುಕೊಳವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.

ನಿರ್ದಿಷ್ಟ ಗುರಿ ಅಗತ್ಯ
ಅಧ್ಯಕ್ಷತೆ ವಹಿಸಿದ್ದ ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಮಹಾಬಲೇಶ್ವರ ಎಂ.ಎಸ್‌. ಮಾತನಾಡಿ, ವಿದ್ಯಾರ್ಥಿ, ಅಧ್ಯಾಪಕ ವೃಂದ, ಆಡಳಿತ ವೃಂದ ಮತ್ತು ಪಾಲಕರು ವಿದ್ಯಾಸಂಸ್ಥೆಯ ಆಧಾರ ಸ್ತಂಭಗಳು. ಇವುಗಳಲ್ಲಿ ಯಾವುದಾದರೂ ಒಂದು ದುರ್ಬಲವಾದರೂ ವಿದ್ಯಾಸಂಸ್ಥೆ ಶಿಥಿಲಗೊಳ್ಳುತ್ತದೆ ಎಂದರು. ಗುರುಗಳ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯನ್ನು ಇರಿಸಿಕೊಂಡು ಛಲ ಮತ್ತು ಶ್ರದ್ಧೆಯಿಂದ ಮುನ್ನಡೆದಾಗ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದರು.

ವಿದ್ಯಾಭಾರತಿ ಕ್ಷೇತ್ರೀಯ ಸಂಘಟನ ಕಾರ್ಯದರ್ಶಿ ಜಿ.ಆರ್‌. ಜಗದೀಶ್‌ ಮಾತನಾಡಿ, ಶಕ್ತಿ ವಿದ್ಯಾಸಂಸ್ಥೆಯ ಸಾಧನೆಯನ್ನು ಶ್ಲಾಘಿಸಿದರು. ಸ್ಥಳೀಯ ಕಾರ್ಪೋರೆಟರ್‌ ವನಿತಾ ಪ್ರಸಾದ್‌ ಅತಿಥಿಯಾಗಿದ್ದರು. ಶಕ್ತಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಡಾ| ಕೆ.ಸಿ. ನಾೖಕ್‌ಅತಿಥಿಗಳಿಗೆ ಗೌರವಾರ್ಪಣೆಗೈದರು.

ಆಡಿಟೋರಿಯಂನ ಆರ್ಕಿಟೆಕ್ಟ್ ದೀಪಕ್‌ ಡಿ’ಸೋಜಾ ಅವರನ್ನು ಸಮ್ಮಾನಿಸ ಲಾಯಿತು. ಕಾರ್ಯದರ್ಶಿ ಸಂಜಿತ್‌ ನಾೖಕ್‌ ಸ್ವಾಗತಿಸಿದರು. ಮುಖ್ಯ ಸಲಹೆಗಾರ ರಮೇಶ್‌ ಕೆ. ದಿಕ್ಸೂಚಿ ಭಾಷಣ ಮಾಡಿದರು. ಕೋಶಾಧಿಕಾರಿ ಮುರಳೀಧರ್‌ ನಾೖಕ್‌, ಶಕ್ತಿ ಪಿಯು ಕಾಲೇಜಿನ ಪ್ರಾಂಶುಪಾಲ (ಪ್ರಭಾರ) ಸುಧೀರ್‌ ಎಂ.ಕೆ., ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ವಿದ್ಯಾ ಕಾಮತ್‌ ಜಿ., ಶಕ್ತಿ ಪ್ರಿಸ್ಕೂಲ್‌ ಸಂಯೋಜಕಿ ನೀಮಾ ಸಕ್ಸೇನಾ, ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ ರೈ, ಪ್ರೊ| ಎಂ.ಬಿ. ಪುರಾಣಿಕ್‌, ಮಾಜಿ ಸಚಿವ ನಾಗರಾಜ ಶೆಟ್ಟಿ, ಮಾಜಿ ಎಂಎಲ್‌ಸಿ ಬಾಲಕೃಷ್ಣ ಭಟ್‌ಉಪಸ್ಥಿತರಿದ್ದರು. ಶ್ರೀವರ ವಂದಿಸಿದರು.

ಆಡಿಟೋರಿಯಂ- ಈಜುಕೊಳದ ವಿಶೇಷತೆ
ಆಕರ್ಷಕ ವಿನ್ಯಾಸದ ರೇಷ್ಮಾ ಮೆಮೋರಿಯಲ್‌ ಆಡಿಟೋರಿಯಂ 1,000 ವಿದ್ಯಾರ್ಥಿಗಳು ಕುಳಿತುಕೊಳ್ಳುವ ಸಾಮರ್ಥ್ಯ ಹೊಂದಿದ್ದು, ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಬಳಸಲಾಗುತ್ತದೆ.ಯೋಗ ತರಬೇತಿಯನ್ನು ನಡೆಸಲು ಸಹಕಾರಿಯಾಗಿದೆ. ಸರೋಜ್‌ ಮೆಮೊರಿಯಲ್‌ ಈಜುಕೊಳ ಸುಮಾರು 25 ಮೀಟರ್‌ ಉದ್ದ, 6 ಅಡಿ ಆಳ ಹೊಂದಿದೆ. ಈಜು ತಜ್ಞರು ತರಬೇತಿ ನೀಡಲಿರುವರು. ಸಣ್ಣ ಮಕ್ಕಳಿಗೆ ಸಣ್ಣ ಈಜುಕೊಳವನ್ನು ನಿರ್ಮಿಸಲಾಗಿದೆ.

ಟಾಪ್ ನ್ಯೂಸ್

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.