ಕೊರೊನಾ ವಿರುದ್ಧ ಸಮರ್ಥ ಹೋರಾಟ


Team Udayavani, Mar 17, 2020, 3:06 AM IST

coron-aviruddha

ವಿಧಾನ ಪರಿಷತ್‌: ಕೊರೊನಾ ವೈರಸ್‌ ವಿಚಾರವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಎಲ್ಲ ಜಿಲ್ಲೆಗಳಲ್ಲೂ ತಪಾಸಣಾ ಲ್ಯಾಬ್‌ ತೆರೆಯಲು ಚಿಂತನೆ ನಡೆಸುತ್ತಿದ್ದೇವೆ. ಕೊರೊನಾ ಮುಂಜಾಗೃತಾ ಕ್ರಮಕ್ಕೆ ಹಣಕಾಸಿನ ಕೊರತೆ ಇಲ್ಲ ಹಾಗೂ ಮಾಸ್ಕ್ ಗಳನ್ನು ಕಾಳಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಿದ್ದೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಹೇಳಿದರು.

ಕೊೂರೊನಾ ವೈರಸ್‌ ಸೃಷ್ಟಿಸಿರುವ ಆತಂಕದ ಕುರಿತ ಚರ್ಚೆಗೆ ಉತ್ತರಿಸಿ, ರಾಜೀವ್‌ ಗಾಂಧಿ ಎದೆರೋಗಗಳ ಚಿಕಿತ್ಸಾ ಆಸ್ಪತ್ರೆ, ನಿಮ್ಹಾನ್ಸ್‌, ಬೆಂಗಳೂರು ವೈದ್ಯಕೀಯ ಕಾಲೇಜು ಆವರಣದಲ್ಲಿ ಕೊರೊನಾ ಸೋಂಕು ಪರೀಕ್ಷಾ ಕೇಂದ್ರ ತೆರೆಯಲಾಗಿದೆ. ರಾಜ್ಯದ ಬೇರೆ ಜಿಲ್ಲೆಗಳಲ್ಲಿ ತಪಾಸಣಾ ಲ್ಯಾಬ್‌ ಆರಂಭಿಸುತ್ತೇವೆ. ಈ ಸಂಬಂಧ ಮುಖ್ಯಮಂತ್ರಿಗಳ ಜತೆಗೆ ಚರ್ಚಿಸಲಾಗಿದೆ. ಲ್ಯಾಬ್‌ಗಳನ್ನು ತುಂಬಾ ಸೂಕ್ಷ್ಮವಾಗಿ ನಿರ್ವಹಿಸಬೇಕಾಗಿರುವುದರಿಂದ ತಾಂತ್ರಿಕ ಸಮಸ್ಯೆಯೂ ಇದೆ. ಎಲ್ಲವನ್ನೂ ಸರಿಪಡಿಸುತ್ತೇವೆ ಎಂದರು.

ಮಾಸ್ಕ್ ಕೊರತೆಯಿಲ್ಲ: ರಾಜ್ಯದಲ್ಲಿ ಮಾಸ್ಕ್ ಕೊರತೆಯಿಲ್ಲ. ಕನಿಷ್ಠ 3 ತಿಂಗಳಿಗೆ ಬೇಕಾಗುವಷ್ಟು ಮಾಸ್ಕ್ ಲಭ್ಯತೆಯಿದೆ. ಜನೌಷಧ ಕೇಂದ್ರದ ಮೂಲಕ ಮಾಸ್ಕ್ ಮಾರಾಟ ಮಾಡಲಿದ್ದೇವೆ. ಕಾಳಸಂತೆ ಅಥವಾ ದುಪ್ಪಟ್ಟು ದರಗಳಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಜತೆಗೆ ಪರವಾನಗಿ ರದ್ದುಗೊಳಿಸುವ ಚಿಂತನೆ ನಡೆಸುತ್ತಿದ್ದೇವೆ. ಜ್ವರ, ಕೆಮ್ಮು ಅಥವಾ ಶೀತ ಇದ್ದವರು ಮಾತ್ರ ಮಾಸ್ಕ್ ಧರಿಸಿದರೆ ಸಾಕು. ಎಲ್ಲರೂ ಮಾಸ್ಕ್ ಧರಿಸುವ ಅಗತ್ಯವಿಲ್ಲ. ಮಾಸ್ಕ್ ಬದಲಿ ಕರವಸ್ತ್ರ ಅಥವಾ ಮನೆಯಲ್ಲೇ ಲಭ್ಯವಿರುವ ಶುದ್ಧವಿರುವ ಕಾಟನ್‌ ಬಟ್ಟೆಗಳನ್ನು ಮುಖಕ್ಕೆ ಕಟ್ಟಿಕೊಳ್ಳಬಹುದು ಎಂದರು.

ಅನುದಾನದ ಕೊರತೆಯಿಲ್ಲ: ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಉತ್ತಮ ಸಹಕಾರ ಸಿಗುತ್ತಿದೆ. ಅಗತ್ಯ ಮುನ್ನೆಚ್ಚರಿಕಾ ಕ್ರಮ ಮತ್ತು ಇತರೆ ಅಗತ್ಯ ಕಾರ್ಯಕ್ಕಾಗಿ ಈಗಾಗಲೇ 36 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದು, ಅದ ರಲ್ಲಿಯೇ ತುರ್ತು ಕಾರ್ಯಗಳು ನಡೆಯುತ್ತಿವೆ. ಯಾವುದೇ ರೀತಿಯ ಅನುದಾನದ ಕೊರತೆಯಿಲ್ಲ ಎಂದು ಹೇಳಿದರು.

ಕಲಬುರಗಿ ವ್ಯಕ್ತಿಗೆ ಆರಂಭದಲ್ಲಿ ಇದು ಕೊರೋನಾ ಅಂತ ಸಾಬೀತಾಗಿರಲಿಲ್ಲ. ಕಫ‌, ರಕ್ತದ ಮಾದರಿ ತಪಾಸಣೆ ನಂತರ ಕೊರೊನಾ ಇರುವುದು ದೃಢಪಟ್ಟಿತ್ತು. ಸಾವಿನ ನಂತರ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅಂತ್ಯಸಂಸ್ಕಾರ ಮಾಡಿದ್ದೇವೆ. ನಂತರ ಇವರ ಸಂಪರ್ಕದಲ್ಲಿದ್ದ 71 ಮಂದಿಯನ್ನು ತಪಾಸಣೆಗೆ ಒಳಪಡಿಸಿದ್ದೇವೆ. ಮೃತರ ಕುಟುಂಬದ ನಾಲ್ವರಲ್ಲಿ ಒಬ್ಬರಿಗೆ ಕೊರೊನಾ ಇರುವುದು ದೃಢಪಟ್ಟಿದೆ ಎಂದರು.

ಕೊರೊನಾ ಒಮ್ಮೆಗೇ ವ್ಯಾಪಿಸಿದ್ದರಿಂದ ಏನು ಮಾಡಬೇಕು ಎಂಬುದು ಗೊತ್ತಾಗುತ್ತಿಲ್ಲ ಮತ್ತು ಈ ಕಾಯಿಲೆಯ ಸುಳಿವು ಸಿಗುತ್ತಿಲ್ಲ. ಆದರೂ, ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ.
-ಬಿ.ಶ್ರೀರಾಮುಲು, ಆರೋಗ್ಯ ಸಚಿವ

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.