ಖಗೋಳ ವಿಜ್ಞಾನ ಆಸಕ್ತಿ ಹೆಚ್ಚಿಸಲು ಶ್ರಮ : ವಿದ್ಯಾರ್ಥಿಗಳಿಗೆ ಆಕಾಶಕಾಯಗಳ ಮಾಹಿತಿ


Team Udayavani, Jan 5, 2021, 4:21 PM IST

ಖಗೋಳ ವಿಜ್ಞಾನ ಆಸಕ್ತಿ ಹೆಚ್ಚಿಸಲು ಶ್ರಮ : ವಿದ್ಯಾರ್ಥಿಗಳಿಗೆ ಆಕಾಶಕಾಯಗಳ ಮಾಹಿತಿ

ಭಟ್ಕಳ: ಖಗೋಳ ವಿಜ್ಞಾನ ವಿದ್ಯಾರ್ಥಿಗಳಲ್ಲಿ ಆಕಾಶ ಕಾಯಗಳ ಕುರಿತು ಆಸಕ್ತಿ ಮೂಡಿಸುವ ಕಾರ್ಯ ಭೈರುಂಬೆಯ ಶಾರದಾಂಬಾ ಪ್ರೌಢಶಾಲೆಯಲ್ಲಿ ನಿರಂತರವಾಗಿ ನಡೆಯುತ್ತಲೇ ಬಂದಿದೆ.

ಇಲ್ಲಿನ ವಿಜ್ಞಾನ ಶಿಕ್ಷಕ ಹಾಗೂ ಮುಖ್ಯಾಧ್ಯಾಪಕ ವಸಂತ ಹೆಗಡೆ ಮೊದಲಿಗೆ ಶಿರಸಿಯ ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ಅಹೋರಾತ್ರಿ ಆಕಾಶ ವೀಕ್ಷಣಾ ಕಾರ್ಯಕ್ರಮ, ಟೆಲಿಸ್ಕೋಪ್‌ ತಯಾರಿಕೆ ಮತ್ತು ಅದರ ಕಾರ್ಯ ವಿಧಾನ, ಪಂಚಾಂಗದ ಓದುವಿಕೆ
ಹಾಗೂ ಅದರ ಅರ್ಥೈಸುವಿಕೆ ಹೀಗೆ ಖಗೋಳಶಾಸ್ತ್ರಕ್ಕೆ ಸಂಬಂಧಿಸಿದಂತೆ ಹಲವಾರು ವಿಷಯಗಳ ಕುರಿರು ಮಾರ್ಗದರ್ಶನ ನೀಡುತ್ತಾ ಬಂದಿದ್ದಾರೆ. ಕಾರ್ಯವ್ಯಾಪ್ತಿ ವಿಸ್ತರಿಸಿಕೊಂಡು ಜಿಲ್ಲೆಯಲ್ಲಿ ಹಲವು ತಾಲೂಕುಗಳಿಗೆ ತೆರಳಿ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಹಾಗೂ ನಾಗರಿಕರಿಗೆ ಉಚಿತವಾಗಿ ಅತ್ಯಾಧುನಿಕ ಟೆಲಿಸ್ಕೋಪ್‌ ಮೂಲಕ ಆಕಾಶಕಾಯಗಳನ್ನು ತೋರಿಸುತ್ತಾ ಅವುಗಳ ಮಹತ್ವ ತಿಳಿಸುತ್ತಾ ಬಂದಿದ್ದಾರೆ.

ಆಕಾಶ ವೀಕ್ಷಣೆ ಮತ್ತು ಖಗೋಳಶಾಸ್ತ್ರದಲ್ಲಿ ಇನ್ನೂ ಹೆಚ್ಚಿನ ಅಧ್ಯಯನ ಕೈಗೊಳ್ಳಲು ವಿದ್ಯಾರ್ಥಿಗಳಿಗೆ, ಆಸಕ್ತರಿಗೆ ಮಾರ್ಗದರ್ಶನ ನೀಡಲು ಅಗತ್ಯ ಪರಿಕರಗಳ ಅವಶ್ಯಕತೆ ಇದ್ದಾಗ ಪರಿಸರದ ಕುರಿತು ಅಧ್ಯಯನ ಮಾಡುತ್ತಿರುವ ಪರಿಸರ ಬರಹಗಾರ ಶಿವಾನಂದ ಕಳವೆ ಅವರು ಸೆಲ್ಕೋ ಸಂಸ್ಥೆಯ ಮೋಹನ ಹೆಗಡೆಯರನ್ನು ಸಂಪರ್ಕಿಸಿದ್ದು, ಅವರು ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್‌ ಮೂಲಕ 15 ಲಕ್ಷ ಬೆಲೆಬಾಳುವ ಖಗೋಳ ವೀಕ್ಷಣೆಗೆ ಸಹಾಯಕವಾಗುವಂತಹ ಪರಿಕರಗಳನ್ನು ನೀಡಿದ್ದಾರೆ. ಅಂದಿನಿಂದ ಇಂದಿನ ತನಕ ಸಾವಿರಾರು ಮಕ್ಕಳಿಗೆ ಖಗೋಳ ವಿಜ್ಞಾನದ ಕುರಿತು ಆಕಾಶಕಾಯಗಳ ಪರಿಚಯವನ್ನು ಮಾಡುವ ಕಾರ್ಯವನ್ನು ಆಗಸ್‌-360 ತಂಡ ಮಾಡುತ್ತಲೇ ಬಂದಿದೆ. ತಂಡದಲ್ಲಿ ಶ್ರೀರಾಜ ಹೆಗಡೆ, ನಮನ್‌ ಭಟ್ಟ, ಸಮರ್ಥ ಹೆಗಡೆ ಬಂಗ್ಲೆ, ಪ್ರತೀಕ ಹೆಗಡೆ ಬಂಗ್ಲೆ ಇವರೂ ಆಸಕ್ತಿ ವಹಿಸಿ ಕೆಲಸ ಮಾಡುತ್ತಿದ್ದಾರೆ. ಅಗಸ್‌-360 ತಂಡದಲ್ಲಿ ಅತ್ಯಾಧುನಿಕವಾದ 16 ಇಂಚಿನ ಡಿಜಿಟಲ್‌ ಟೆಲಿಸ್ಕೋಪ್‌, ವಿಲಿಯಮ್‌ ಓಪ್ಟಿಕ್ಸ್‌ ಕ್ಯಾಮೆರಾ ಸಹಿತವಾದ ಟೆಲಿಸ್ಕೋಪ್‌ ಹೀಗೆ ಮೊದಲಾದ ವೈಜ್ಞಾನಿಕ ಉಪಕರಣಗಳನ್ನು ತಂಡ ಹೊಂದಿದೆ. ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್‌ ಮತ್ತು ಅಗಸ್‌-360
ಇವುಗಳ ಉದ್ದೇಶ ಒಂದೇ ಆಗಿದ್ದು, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸುವುದು, ಅವರು ವಿಜ್ಞಾನದ ಅಧ್ಯಯನದಲ್ಲಿ ತೊಡಗುವಂತೆ ಮಾಡುವುದಾಗಿದೆ.

ಇದನ್ನೂ ಓದಿ:ಕೊಚ್ಚಿ- ಮಂಗಳೂರು ನ್ಯಾಚುರಲ್ ಗ್ಯಾಸ್ ಪೈಪ್ ಲೈನ್ ಗೆ ಪ್ರಧಾನಿಯಿಂದ ಚಾಲನೆ

ಈ ನಿಟ್ಟಿನಲ್ಲಿ “ಅನಂತ ದೃಷ್ಟಿ’ ಎಂಬ ಸರಣಿ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಲಾಗುತ್ತಿದ್ದು, ಆಕಾಶ ವೀಕ್ಷಣೆ ಕುರಿತಾಗಿ ಮಾಹಿತಿ ನೀಡುವುದು, ಖಗೋಳ ಕಾಯಗಳ ಬಗ್ಗೆ ಅಗತ್ಯ ಮಾಹಿತಿ ನೀಡುವುದು, ರಾತ್ರಿಯ ಆಕಾಶ ಕಾಯಗಳನ್ನು ವೈಜ್ಞಾನಿಕ ಉಪಕರಣಗಳ ಮೂಲಕ ವೀಕ್ಷಿಸುವುದು, ವಿದ್ಯಾರ್ಥಿಗಳಿಗೆ ಸಂಶೋಧನೆಗೆ ಅವಕಾಶ ನೀಡುವುದು. ಇಂಥ ಉದ್ದೇಶಗಳನ್ನು ಇಟ್ಟುಕೊಂಡು ಜಿಲ್ಲೆಯಾದ್ಯಂತ ನಡೆಯುತ್ತಿದೆ.

ಕಳೆದ 2015ರಿಂದ ಜಿಲ್ಲೆಯಲ್ಲಿ ಸುಮಾರು 15ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನೀಡಲಾಗಿದ್ದು, 3 ಸಾವಿರ ವಿದ್ಯಾರ್ಥಿಗಳು, 2 ಸಾವಿರಕ್ಕೂ ಹೆಚ್ಚು ಸಾರ್ವಜನಿಕರು ಇದರ ಪ್ರಯೋಜನ ಪಡೆದಿದ್ದಾರೆ. ಸಪ್ತಋಷಿ ಮಂಡಳದಿಂದ ದ್ರುವ ನಕ್ಷತ್ರವನ್ನು ಗುರುತಿಸುವಿಕೆ, ಆಸ್ಟ್ರೋ ಫೋಟೋಗ್ರಫಿಯಲ್ಲಿ ಸುಮಾರು 11 ಸಾವಿರ ಜ್ಯೋತಿವರ್ಷ ದೂರದಲ್ಲಿರುವ ಸಿರಿಯನ್‌ (ಲುಬ್ದಕ್‌) ಅತಿ ಹೆಚ್ಚು ಹೊಳೆಯುವ ನಕ್ಷತ್ರವನ್ನು ಗುರುತಿಸುವಿಕೆ ಮುಂತಾದವುಗಳು ತೀವ್ರ ಕುತೂಹಲಕಾರಿ ವಿಷಯವಾಗಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.