ಕರಾವಳಿಯೆಲ್ಲೆಡೆ ಮುಸ್ಲಿಂ ಬಾಂಧವರಿಂದ ಸರಳವಾಗಿ ಈದುಲ್ ಫಿತ್ರ ಆಚರಣೆ
Team Udayavani, May 24, 2020, 1:15 PM IST
ಮಂಗಳೂರು/ಉಡುಪಿ: ಕೋವಿಡ್ ಮಹಾಮಾರಿಯಿಂದಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಮುಸ್ಲಿಂ ಬಾಂಧವರು ರವಿವಾರ ಈದುಲ್ ಫಿತ್ರ ಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸಿದರು.
ಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸಲು ಧರ್ಮ ಗುರುಗಳು ಕರೆ ನೀಡಿದ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರು ತಮ್ಮ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆಯನ್ನು ಮಾಡುವ ಮೂಲಕ ಸರಳವಾಗಿ ಆಚರಣೆ ಮಾಡಿದರು.
ಎಲ್ಲ ಹಬ್ಬಗಳಂತೆ ಈದುಲ್ ಫಿತ್ರ ಕೂಡ ತರಹೇವಾರಿ ಖರೀದಿ, ಶುಭಾಶಯ ವಿನಿಮಯ ಇತ್ಯಾದಿಗಳ ಮೂಲಕ ಆರ್ಥಿಕ ಚಟುವಟಿಕೆ ಮತ್ತು ಸಾಮುದಾಯಿಕ ಚಲನಶೀಲತೆಗೆ ದೊಡ್ಡ ಮಟ್ಟದ ಕೊಡುಗೆ ನೀಡುವಂಥದ್ದು. ಆದರೆ ಈ ವರ್ಷ ಕೋವಿಡ್ ಹಾವಳಿ ಪವಿತ್ರ ರಮ್ಜಾನ್ ಹಬ್ಬದ ಪೂರ್ಣ ಸಡಗರದ ಆಚರಣೆಗೆ ಅಡ್ಡಿ ಮಾಡಿದೆ.
ಲಾಕ್ಡೌನ್ ಕಾರಣ ಬಟ್ಟೆ ಬರೆ ಖರೀದಿಯಿಂದಲೂ ಮುಸ್ಲಿಂ ಬಾಂಧವರು ದೂರ ಉಳಿದು ಸರಳ ರೀತಿಯಲ್ಲಿ ಹಬ್ಬ ಆಚರಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ