Mangaluru ವೃದ್ಧ ದಂಪತಿಗೆ ಹಲ್ಲೆ; ಚರ್ಚ್ ಧರ್ಮಗುರು ವಜಾ
Team Udayavani, Mar 2, 2024, 9:56 PM IST
ಮಂಗಳೂರು: ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚ ಗ್ರಾಮದ ಪೆರಿಯಾಲ್ತಡ್ಕದಲ್ಲಿ ವೃದ್ಧ ದಂಪತಿಯ ಮೇಲೆ ಹಲ್ಲೆ ನಡೆಸಿದ ಕ್ರೈಸ್ಟ್ ದ ಕಿಂಗ್ ಚರ್ಚ್ನ ಫಾ| ನೆಲ್ಸನ್ ಒಲಿವೆರಾ ಅವರನ್ನು ಮಂಗಳೂರು ಧರ್ಮ ಪ್ರಾಂತದ ರಿಲೀಜಿಯಸ್ ಮಿನಿಸ್ಟ್ರಿಯಿಂದ ವಜಾಗೊಳಿಸಲಾಗಿದೆ.
ಮಂಗಳೂರು ಧರ್ಮಪ್ರಾಂತದ ಸಾರ್ವಜನಿಕ ಸಂಪರ್ಕಾಧಿಕಾರಿ ಫಾ| ಜೆ.ಬಿ. ಸಲ್ಡಾನಾ ಮತ್ತು ರಾಯ್ ಕ್ಯಾಸ್ಟಲಿನೋ ಅವರು ಈ ಕುರಿತಂತೆ ಪತ್ರಿಕಾ ಪ್ರಕಟನೆ ಮೂಲಕ ಕ್ಷಮೆಯಾಚಿಸಿದ್ದಾರೆ. ಫೆ. 29ರಂದು ಚರ್ಚ್ನ ಅವರಣದಲ್ಲಿಯೇ ನಡೆದ ಘಟನೆಯ ಸಿಸಿಟಿವಿ ವೀಡಿಯೋ ವೈರಲ್ ಆಗಿತ್ತು. ಈ ಪ್ರಕರಣ ದೇಶದ ಕಾನೂನು ಮತ್ತು ಸುವ್ಯವಸ್ಥೆಯ ಚೌಕಟ್ಟಿನಲ್ಲಿ ಬರುವುದರಿಂದ ಧರ್ಮಪ್ರಾಂತವು ತನಿಖೆಯ ಸಂದರ್ಭ ಎಲ್ಲ ರೀತಿಯ ಸಹಕಾರ ನೀಡಲಿದೆ.
ಧರ್ಮಪ್ರಾಂತ ವತಿಯಿಂದಲೂ ಈ ಬಗ್ಗೆ ತನಿಖೆ ನಡೆಸಲಾಗುವುದು. ಚರ್ಚ್ಗೆ ಇನ್ನೊಬ್ಬರು ಧರ್ಮ ಗುರುವನ್ನು ನಿಯೋಜಿಸಲಾಗುವುದು ಎಂದವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ