ಎಲೆರಾಂಪುರ ಗ್ರಾಮ ಸೌಧಕ್ಕೆ ರಾಷ್ಟ್ರ ಜಲ ಪ್ರಶಸ್ತಿ ಕಿರೀಟ


Team Udayavani, Mar 30, 2022, 4:39 PM IST

1-deq

ಕೊರಟಗೆರೆ: ತಾಲ್ಲೂಕಿನ ಕೋಳಾಲ ಹೋಬಳಿ ವ್ಯಾಪ್ತಿಯ ಎಲೆರಾಂಪುರ ಗ್ರಾಮ ಪಂಚಾಯಿತಿಗೆ ಕೇಂದ್ರ ಸರ್ಕಾರದ ಉತ್ತಮ ಪಂಚಾಯಿತಿ ಪುರಸ್ಕಾರ ಲಭಿಸಿದೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಲ್ಲೂಕಿನ ಗಡಿ ಭಾಗದ ಡಿ.ನಾಗೇನಹಳ್ಳಿ ಗ್ರಾಮವನ್ನು 2010ರಲ್ಲಿ ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರ ಸಹಯೋಗದಲ್ಲಿ ಕೇಂದ್ರ ಸರ್ಕಾರದ ನಿಕ್ರಾ ಯೋಜನೆಯಡಿ ಅಂತರ್ಜಲ ವೃದ್ಧಿಗೆ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಇದರ ಫಲವಾಗಿ ಈ ಭಾಗದಲ್ಲಿ ಅಂತರ್ಜಲ ಮಟ್ಟ ವೃದ್ಧಿಗೊಂಡ ಕಾರಣದಿಂದಾಗಿ ಗ್ರಾಮಕ್ಕೆ ‘ರಾಷ್ಟ್ರೀಯ ನೀರು ಅಭಿವೃದ್ಧಿ ಪ್ರಶಸ್ತಿ ಲಭಿಸಿದೆ.

ಗ್ರಾಮದ ಸುಮಾರು 400 ಹೆಕ್ಟೇರ್ ಭೂ ಪ್ರದೇಶದಲ್ಲಿ 85 ಕೃಷಿ ಹೊಂಡ, 5 ಚೆಕ್ ಡ್ಯಾಂ, 8 ಹಳೇ ಚೆಕ್ ಡ್ಯಾಂ ಅಭಿವೃದ್ಧಿ ಸೇರಿದಂತೆ ಕೆರೆ ಅಭಿವೃದ್ಧಿ ಹಾಗೂ ತಿರುವುಗಾಲುವೆ ಮೂಲಕ ನೀರು ಸಂಗ್ರಹಣೆ ಮಾಡಲಾಗಿದೆ. ಬರ ನಿರೋಧಕ ಒಣಬೇಸಾಯ, ತೋಟಗಾರಿಕೆಗೆ ಒತ್ತು ನೀಡಲಾಗಿದೆ.

ರಾಗಿ, ಒಣ ಭತ್ತ, ತೊಗರಿ ಹೀಗೆ ಕಡಿಮೆ ನೀರು ಬಳಸಿ ಬೆಳೆಯುವ ಬೆಳೆಗಳಿಗೆ ಉತ್ತೇಜನ ನೀಡಲಾಗಿದೆ. ಬೆಟ್ಟದ ನೆಲ್ಲಿ, ಗೋಡಂಬಿ, ಹುಣಸೆ, ಮಾವು, ಹೆಬ್ಬೇವು ಸೇರಿದಂತೆ ಅರಣ್ಯ ಮರಗಳನ್ನು ಬೆಳೆಸಲಾಗಿದೆ. ನೀರಿನ ಮೂಲ ಹೆಚ್ಚಿರುವ ಕಾರಣ ಪ್ರಾಣಿ, ಪಕ್ಷಿ, ಜನುವಾರುಗಳಿಗೆ ಆಶ್ರಯ ಕಲ್ಪಿಸಲಾಗಿದೆ. ಮಣ್ಣಿನ ಸವಕಳಿ ಹಾಗೂ ಮಳೆ ನೀರು ಇಂಗಿಸುವ ಸಲುವಾಗಿ ಗ್ರಾಮದ ಸುತ್ತಲಿನ ಜಮೀನುಗಳಲ್ಲಿ ಬದುಗಳನ್ನು ಹಾಕಲಾಗಿದೆ. 10 ವರ್ಷಗಳಿಂದ ನಿಕ್ರಾ ಯೋಜನೆಯಡಿ ಕೈಗೊಂಡಿರುವ ವಿವಿಧ ಕಾಮಗಾರಿಗಳಿಂದಾಗಿ ಅಂತರ್ಜಲ ವೃದ್ಧಿಯಾಗಿ ಈ ಭಾಗದಲ್ಲಿದ್ದ ನೀರಿನ ಬವಣೆ ನೀಗಿದೆ. ಸಂಪೂರ್ಣ ನಿಷ್ಕ್ರಿಯಗೊಂಡಿದ್ದ ಸುಮಾರು 25 ಕೊಳವೆಬಾವಿಗಳು ಮರು ಪೂರಣಗೊಂಡಿವೆ.

ಒಣಗಿದ್ದ ಬಾವಿಗಳಲ್ಲಿ ನೀರು ನಿಂತಿದೆ. ಸಂಪೂರ್ಣ ಬೆಟ್ಟ ಹಾಗೂ ಗುಡ್ಡ ಪ್ರದೇಶವಾದ ಈ ಭಾಗದಲ್ಲಿ ಈ ಮೊದಲು ಮಳೆ ನೀರು ವ್ಯರ್ಥವಾಗುತಿತ್ತು. ಇದನ್ನು ಮನಗಂಡ ಕೃಷಿ ವಿಜ್ಞಾನ ಕೇಂದ್ರ ಡಿ.ನಾಗೇನಹಳ್ಳಿ ಗ್ರಾಮವನ್ನು ಆಯ್ಕೆ ಮಾಡಿಕೊಂಡಿತ್ತು.

ನಿಕ್ರಾ ಯೋಜನೆಯಡಿ ಆಯ್ಕೆ
ದೇಶದಲ್ಲಿ ಇದೇ ರೀತಿ ನಿಕ್ರಾ ಯೋಜನೆಯಡಿ 100 ಹಳ್ಳಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಅದರಂತೆ ರಾಜ್ಯದಲ್ಲಿ 4 ಹಳ್ಳಿಗಳನ್ನು ಆಯ್ಕೆ ಮಾಡಲಾಗಿದೆ. ಕಳೆದ 11 ವರ್ಷಗಳಿಂದ ಗ್ರಾಮದಲ್ಲಿ ಯೋಜನೆ ಅನುಷ್ಠಾನಗೊಂಡು ಈಗ ಅದು ಸಫಲವಾದ್ದರಿಂದ ಮಾದರಿ ಗ್ರಾಮವಾಗಿ
ಹೊರಹೊಮ್ಮಿದೆ.

ರಾಷ್ಟ್ರಪತಿ ಪ್ರಶಸ್ತಿ ಪ್ರದಾನ
ತಾಲೂಕಿನ ಎಲೆರಾಂಪುರ ಗ್ರಾಮ ಪಂಚಾಯಿತಿಗೆ ರಾಷ್ಟ್ರಮಟ್ಟದ ನೀರು ಸದ್ಬಳಕೆ ಮತ್ತು ಉಳಿತಾಯದ ಪ್ರಶಸ್ತಿಗೆ ಗರಿ ಮುಡಿಗೇರಿಸಿಕೊಂಡ ಹೆಗ್ಗಳಿಕೆಗೆ ಪಾತ್ರವಾಗಿದೆ ಮೂರನೇ ರಾಷ್ಟ್ರೀಯ ಜಲ ಪ್ರಶಸ್ತಿಯನ್ನು ರಾಷ್ಟ್ರಪತಿಗಳು ಪ್ರಧಾನ ಮಾಡಿದರು ಅಧ್ಯಕ್ಷರು ಉಪಾಧ್ಯಕ್ಷರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರದ ಅಧಿಕಾರಿಗಳೊಂದಿಗೆ ಪ್ರಶಸ್ತಿ ಸ್ವೀಕರಿಸಿದರು.

ಕೊಳವೆ ಬಾವಿ ಮರುಪೂರ್ಣ ಸಂಪೂರ್ಣ ನಿಷ್ಕ್ರಿಯಗೊಂಡಿದೆ ಸುಮಾರು 25 ಕೊಳವೆಬಾವಿಗಳು ಪೂರ್ಣಗೊಂಡಿವೆ ಒಣಗಿದ ಬಾವಿಗಳ ನೀರು ನಿಂತಿದೆ ಸಂಪೂರ್ಣವಾದ ಬೆಟ್ಟ-ಗುಡ್ಡ ಪ್ರದೇಶವಾದ ಈ ಭಾಗದಲ್ಲಿ ಮೊದಲು ಮಳೆನೀರು ವ್ಯರ್ಥವಾಗುತ್ತಿತ್ತು ಇದನ್ನು ಮನಗಂಡ ಕೃಷಿ ವಿಜ್ಞಾನ ಕೇಂದ್ರ ಡಿ ನಾಗೇನಹಳ್ಳಿ ಗ್ರಾಮವನ್ನು ಆಯ್ಕೆ ಮಾಡಿಕೊಂಡಿತು.

ನಿಕ್ರಾ ಯೋಜನೆಯಡಿ ಗಡಿಗ್ರಾಮ ಡಿ ನಾಗೇನಹಳ್ಳಿ ಸೇರಿದಂತೆ ಮೂರು ಗ್ರಾಮಗಳನ್ನು ಆಯ್ಕೆ ಮಾಡಲಾಗಿತ್ತು ನಾಲಾಬದು ಕೃಷಿಹೊಂಡ ಸೇರಿದಂತೆ ಮಳೆ ನೀರು ಸಂಗ್ರಹಕ್ಕೆ ಅನುಕೂಲವಾಗುವ ಕಾಮಗಾರಿಗಳನ್ನು ಸತತ 11 ವರ್ಷಗಳ ಕಾಲ ಅವಿರತ ಪರಿಶ್ರಮದಿಂದ ಅನುಷ್ಠಾನಗೊಳಿಸಿದ ಪರಿಣಾಮ ಇಂದು ರಾಷ್ಟ್ರಪ್ರಶಸ್ತಿ ಸಿಗಲು ಕಾರಣವಾಗಿದೆ ಅತ್ಯಂತ ಸಂತೋಷವಾಗಿದೆ. 

-ದೊಡ್ಡ ಸಿದ್ದಯ್ಯ ತಾ ಪಂ. ಕಾರ್ಯನಿರ್ವಹಣಾಧಿಕಾರಿ.

ಸಿದ್ದರಾಜು.ಕೆ

ಟಾಪ್ ನ್ಯೂಸ್

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.