ವಿದ್ಯುತ್‌ ಬಿಲ್‌ ಪಾವತಿ ವಿನಾಯಿತಿಗೆ ಮೀನುಗಾರಿಕೆ ಸಚಿವರಲ್ಲಿ ಮನವಿ


Team Udayavani, Apr 22, 2020, 5:32 PM IST

ವಿದ್ಯುತ್‌ ಬಿಲ್‌ ಪಾವತಿ ವಿನಾಯಿತಿಗೆ ಮೀನುಗಾರಿಕೆ ಸಚಿವರಲ್ಲಿ ಮನವಿ

ಮಲ್ಪೆ: ಕಡಲತಡಿಯ ಪ್ರಮುಖ ಉದ್ಯಮ ಮೀನುಗಾರಿಕೆ ಕೋವಿಡ್ ನಿಂದಾಗಿ ಸಂಪೂರ್ಣ ಸ್ಥಗಿತಗೊಂಡಿದ್ದು, ಇದರಿಂದ ಮೀನು ಗಾರಿಕೆಯನ್ನೇ ಆಶ್ರಯಿಸಿರುವ ಎಲ್ಲ ಮಂಜುಗಡ್ಡೆ ಸ್ಥಾವರಗಳು ಕೂಡ ನೆಲ ಕಚ್ಚಿವೆ.

ಕರಾವಳಿಯಾದ್ಯಂತ ಮೀನುಗಾರಿಕೆ ಇಲ್ಲದೆ ಮೂರು ಜಿಲ್ಲೆಯಲ್ಲಿನ ಮಂಜುಗಡ್ಡೆ ಘಟಕಗಳು ಮುಚ್ಚಿದ್ದು ಸದ್ಯ ಕೋಟ್ಯಂತರ ರೂಪಾಯಿ ದುಡ್ಡು ಹಾಕಿರುವ ಐಸ್‌ಪ್ಲಾಂಟ್‌ ಮಾಲಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ದಿಕ್ಕೇ ತೋಚದ ಪರಿಸ್ಥಿತಿಯಲ್ಲಿದ್ದಾರೆ.
ಕರ್ನಾಟಕ ಕರಾವಳಿಯಲ್ಲಿ ಒಟ್ಟು 200 ರಷ್ಟು ಮಂಜುಗಡ್ಡೆ ತಯಾರಿಕಾ ಘಟಕಗಳಿವೆ, ಅದರಲ್ಲಿ ಅತೀ ಹೆಚ್ಚು ಇರುವುದು ಉಡುಪಿ ಜಿಲ್ಲೆಯಲ್ಲಿ. ಇಲ್ಲಿ 90 ಐಸ್‌ಪ್ಲಾಂಟ್‌ಗಳಿದ್ದರೆ ದಕ್ಷಿಣ ಕನ್ನಡದಲ್ಲಿ 70, ಉತ್ತರ ಕನ್ನಡದಲ್ಲಿ 40 ಪ್ಲಾಂಟ್‌ಗಳಿವೆ.

ವಿದ್ಯುತ್‌ ಬಿಲ್‌ ಬಾಕಿ
ಈ ಬಾರಿ ಆರಂಭದಿಂದಲೂ ಚಂಡಮಾರುತ, ಮೀನಿನ ಕ್ಷಾಮ ಪ್ರಾಕೃತಿಕ ವೈಪರೀತ್ಯಗಳಿಂದಾಗಿ ನಿರಂತರವಾಗಿ ಮೀನುಗಾರಿಕೆಯೇ ನಡೆಸಲಾಗದೇ ಹಲವಾರು ಬೋಟುಗಳು ಬಂದರಿನಲ್ಲೇ ಲಂಗರು ಹಾಕುವ ಪರಿಸ್ಥಿತಿ ಎದುರಾಗಿತ್ತು. ಮೀನುಗಾರಿಕೆ ಕುಂಠಿತವಾದ್ದರಿಂದ ಬೋಟ್‌ಗಳಿಗೆ ಮಂಜುಗಡ್ಡೆ ಪೂರೈಕೆಯಾಗದೆ ಶೇ. 99 ಐಸ್‌ಪ್ಲಾಂಟ್‌ ಮಾಲಕರು ನಷ್ಟವನ್ನು ಅನುಭವಿಸಿದ್ದಾರೆ. ಪ್ರಸ್ತುತ 6ರಿಂದ 10ಲಕ್ಷ ರೂ. ವಿದ್ಯುತ್‌ ಬಿಲ್‌ ಬಾಕಿಯಾಗಿದ್ದು ಪಾವತಿಸಲು ಸಾಧ್ಯವಾಗದೇ ಒದ್ದಾಟ ನಡೆಸುತ್ತಿದ್ದಾರೆ. ಪ್ರಸ್ತುತ ಸ್ಥಾವರವನ್ನು ಬಂದ್‌ ಇಟ್ಟರೂ ತಿಂಗಳ ಮಿನಿಮಮ್‌ ಬಿಲ್‌ 30ರಿಂದ 40ಸಾವಿರ ರೂಪಾಯಿ ಭರಿಸಬೇಕಾಗಿ ಬರುತ್ತದೆ.

ಕಾರ್ಮಿಕರು ಸ್ಥಾವರದಲ್ಲೇ ಲಾಕ್‌ಡೌನ್‌
ಪ್ರತಿಯೊಂದು ಮಂಜುಗಡ್ಡೆ ಸ್ಥಾವರಗಳಲ್ಲಿ 10ರಿಂದ 15 ಮಂದಿ ಕಾರ್ಮಿಕರು ಇದ್ದಾರೆ. ಪ್ರಸ್ತುತ ಶೇ.90ರಷ್ಟು ಸ್ಥಾವರಗಳಲ್ಲಿ ಇರುವುದು ಅಸ್ಸಾಂ ರಾಜ್ಯದ ಕಾರ್ಮಿಕರು. ಲಾಕ್‌ಡೌನ್‌ ನಿಂದಾಗಿ ಅವರನ್ನು ಊರಿಗೆ ಕಳುಹಿಸಲು ಸರಿಯಾದ ವ್ಯವಸ್ಥೆ ಇಲ್ಲದೆ ಪ್ಲಾಂಟಿನಲ್ಲೇ ಉಳಿಸಿಕೊಳ್ಳಲಾಗಿದೆ. ಪ್ರತಿನಿತ್ಯ ಅವರಿಗೆ ಬೇಕಾದ ಎರಡು ಹೊತ್ತಿನ ಊಟ ಹಾಗೂ ಇನ್ನಿತರ ವ್ಯವಸ್ಥೆಯನ್ನು ಪ್ಲಾಂಟ್‌ ಮಾಲಕರೇ ನೀಡುತ್ತಿರುವುದು ಮತ್ತಷ್ಟು ಹೊರೆಯಾಗಿದೆ. ಮಂಜುಗಡ್ಡೆ ಸ್ಥಾವರ ಇನ್ನು ಕನಿಷ್ಠ 5 ತಿಂಗಳು ಮುಚ್ಚ ಬೇಕಾಗುವುದರಿಂದ ತಯಾರಿಕಾ ಘಟಕದ ಎಲ್ಲ ಮೆಷನರಿಗಳು, ಕ್ಯಾನ್‌ಗಳು ಉಪ್ಪು ನೀರಿನ ಅಂಶದಿಂದಾಗಿ ತುಕ್ಕು ಹಿಡಿದು ಸಂಪೂರ್ಣ ಹಾನಿಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ಮಲ್ಪೆ ಮಂಜುಗಡ್ಡೆ ಮಾಲಕರ ಸಂಘದ ಉಪಾಧ್ಯಕ್ಷ ಹರೀಶ್‌ ಶ್ರೀಯಾನ್‌ ಅವರು.

ಬಾಕಿ ಹಣ ಕೇಳುವಂತಿಲ್ಲ
ಈ ಬಾರಿ ಮೀನಿನ ಕ್ಷಾಮದಿಂದ ಹೆಚ್ಚಿನ ಪ್ಲಾಂಟ್‌ಗಳಿಗೆ ವ್ಯವಹಾರಗಳು ನಡೆಸಲು ಸಾಧ್ಯವಾಗದೇ ಕೆಲವು ತಿಂಗಳ ಮೊದಲೇ ಸ್ಥಗಿತಗೊಳಿಸಬೇಕಾದ ಪ್ರಸಂಗ ಎದುರಾಗಿತ್ತು. ಮೀನುಗಾರಿಕೆ ನಷ್ಟದಿಂದಾಗಿ ಬೋಟ್‌ ಮಾಲಕರಿಂದಲೂ ಹಣ ಬಾಕಿ ಉಳಿದಿದ್ದು, ಈಗಿನ ಪರಿಸ್ಥಿತಿಯಲ್ಲಿ ಅವರಿಂದ ಬಾಕಿ ಮೊತ್ತವನ್ನು ಕೇಳುವ ಹಾಗಿಲ್ಲ.
– ರಾಜೇಂದ್ರ ಸುವರ್ಣ, ಅಧ್ಯಕ್ಷರು
ಕರ್ನಾಟಕ ಕರಾವಳಿ ಮಂಜುಗಡ್ಡೆ ಮತ್ತು ಶೈತ್ಯಾಗಾರ ಮಾಲಕರ ಸಂಘ

ಬಡ್ಡಿ ಮನ್ನಾ ಮಾಡಿ
ಮಾರ್ಚ್‌ನಿಂದ ಜುಲೈವರೆಗಿನ 5 ತಿಂಗಳ ಮಿನಿಮಮ್‌ ಬಿಲ್‌ ಮತ್ತು ಅದರ ಮೇಲಿನ ಬಡ್ಡಿಯನ್ನು ಮನ್ನಾ ಮಾಡಬೇಕು. ಬಾಕಿ ಇರುವ ವಿದ್ಯುತ್‌ ಬಿಲ್‌ ಪಾವತಿಗೆ ಕನಿಷ್ಠ 4 ಕಂತುಗಳನ್ನು ನೀಡುವಂತೆ ಈಗಾಗಲೇ ಮೀನುಗಾರಿಕೆ ಸಚಿವರಲ್ಲಿ ಮನವಿ ಮಾಡಿದ್ದೇವೆ. ಲಾಕ್‌ಡೌನ್‌ ಮುಗಿದ ಬಳಿಕ ಇಲಾಖೆಯ ಮೂಲಕ ಪರ್ಯಾಯ ವ್ಯವಸ್ಥೆಗೆ ಪ್ರಯತ್ನ ಮಾಡುವ ಭರವಸೆ ಸಚಿವರು ನೀಡಿದ್ದಾರೆ.
– ಉದಯ ಕುಮಾರ್‌, ಪ್ರ. ಕಾರ್ಯದರ್ಶಿ,
ಕರ್ನಾಟಕ ಕರಾವಳಿ ಮಂಜುಗಡ್ಡೆ ಮತ್ತು ಶೈತ್ಯಾಗಾರ ಮಾಲಕರ ಸಂಘ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.