ಪ್ರವಾಸಿಗರೇ ಎಚ್ಚರ : ಚಿಕ್ಕಮಗಳೂರಿನ ಎತ್ತಿನಭುಜ ಪ್ರವಾಸಿ ತಾಣದಲ್ಲಿವೆ ಕಾಡಾನೆ ಹಿಂಡು


Team Udayavani, Oct 28, 2021, 2:58 PM IST

elephant

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಎತ್ತಿನಭುಜ ಪ್ರವಾಸಿ ತಾಣಕ್ಕೆ ಭೇಟಿ ನೀಡುವ ಪ್ರವಾಸಿಗರೇ ಎಚ್ಚರ. ಏಕೆಂದರೆ, ಈ ಭಾಗದಲ್ಲಿ ಆಗಾಗ್ಗೆ ಕಾಡಾನೆಗಳು ಹಿಂಡು ಗೋಚರವಾಗುತ್ತಿರೋದು ಸ್ಥಳಿಯರು ಹಾಗೂ ಕೆಲ ಪ್ರವಾಸಿಗರಲ್ಲಿ ಆತಂಕ ತಂದಿದೆ.

ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮ ವಾರ್ಷಿಕ ದಾಖಲೆ ಮಳೆ ಬೀಳೋ ಪ್ರದೇಶ. ಇಲ್ಲಿ ವಾರ್ಷಿಕ 200-300 ಇಂಚು ಮಳೆ ಸುರಿಯುತ್ತೆ. ದಟ್ಟ ಕಾನನ. ಇಲ್ಲಿನ ದಟ್ಟ ಶೋಲಾ ಕಾಡುಗಳು ವರ್ಷಪೂರ್ತಿ ನೀರನ್ನ ಹಿಡಿದಿಟ್ಟು ಹರಿಸುವುದರಿಂದ ಇಲ್ಲಿನ ಕಾಡು ಸದಾ ಹಚ್ಚಹಸಿರಿನಿಂದ ಕಂಗೊಳಿಸುತ್ತೆ. ಹಾಗಾಗಿ, ಈ ಭಾಗದಲ್ಲಿ ಸದಾ ಕಾಡುಪ್ರಾಣಿಗಳು ಯತೇಚ್ಛವಾಗಿರುತ್ತವೆ.

ಇದೀಗ, ಈ ಬೈರಾಪುರ ಗ್ರಾಮದ ಸುತ್ತಮುತ್ತ ಕಾಡಾನೆಗಳು ಹಿಂಡು ಸ್ಥಳಿಯರಲ್ಲಿ ಭಯ ತರಿಸಿದೆ. ಎತ್ತಿನಭುಜಕ್ಕೆ ಭೇಟಿ ನೀಡಿದ್ದ ಪ್ರವಾಸಿಗರಿಗೆ ಕಾಡಾನೆಗಳು ದರ್ಶನ ನೀಡಿವೆ. ಹಾಗಾಗಿ, ಸ್ಥಳೀಯರು ಈ ಭಾಗಕ್ಕೆ ಬರುವ ಪ್ರವಾಸಿಗರು ಎಚ್ಚರದಿಂದಿರಬೇಕು ಎಂದು ಮನವಿ ಮಾಡಿದ್ದಾರೆ. ಇನ್ನೂ ಮೂಡಿಗೆರೆ ತಾಲೂಕಿನ, ಬೈರಾಪುರ, ಸಾರಾಗೋಡು, ಕುಂದೂರು, ಗೌಡಹಳ್ಳಿ, ಕೋಗಿಲೆ, ಮೂಲರಹಳ್ಳಿ, ಗುತ್ತಿ, ಬೈರಾಪುರ, ಊರಬಗೆ ಸೇರಿದಂತೆ ಹತ್ತಾರು ಹಳ್ಳಿಯಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದೆ. ಪ್ರತಿ ವರ್ಷ ಲಕ್ಷಾಂತರ ಮೌಲ್ಯದ ಬೆಳೆ ಕಾಡಾನೆ ಪಾಲಾಗುತ್ತಿದೆ.

ಹಾಗಾಗಿ, ಈ ಭಾಗದ ಜನ, ಕಾಡಾನೆಗಳನ್ನ ಸ್ಥಳಾಂತರಿಸಿ, ಇಲ್ಲ ನಮಗೆ ಪರ್ಯಾಯ ಭೂಮಿ ನೀಡಿ, ನಾವೇ ಬೇರೆಡೆ ಹೋಗಿ ಬದುಕು ಕಟ್ಟಿಕೊಳ್ಳುತ್ತೇವೆಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಆದರೆ, ಸರ್ಕಾರ ಅತ್ತ ಆನೆ ಸಮಸ್ಯೆಯನ್ನೂ ನೀಗಿಸುತ್ತಿಲ್ಲ. ಇತ್ತ ಪರ್ಯಾಯ ಭೂಮಿ ಬಗ್ಗೆಯೂ ಯೋಚಿಸಿಲ್ಲ. ಜನ ಅನಿವಾರ್ಯವಾಗಿ ಆನೆ ಭಯದಲ್ಲೇ ಬದಕುತ್ತಿದ್ದಾರೆ.

ಎರಡ್ಮೂರು ದಿನ ಹೊಲ-ಗದ್ದೆ, ತೋಟಗಳಲ್ಲಿ ಬೀಡು ಬಿಡೋ ಕಾಡಾನೆಗಳ ಹಿಂಡು ದಾಂದಲೆ ನಡೆಸುತ್ತಿದ್ದು, ಅರ್ಧ ಬೆಳೆ ಮಳೆಯಿಂದ ನಾಶವಾದರೆ, ಇನ್ನರ್ಧ ಕಾಡಾನೆಯಿಂದ ನಾಶವಾಗುವಂತಹಾ ಸ್ಥಿತಿ ಮಲೆನಾಡಲ್ಲಿದೆ. ಹಾಗಾಗಿ, ಜನ ಒಂದೋ ಕಾಡಾನೆ ಸ್ಥಳಾಂತರಿಸಿ ಇಲ್ಲ, ನಮ್ಮನ್ನೇ ಸ್ಥಳಾಂತರಿಸಿ ಎಂದು ಬೇಡಿಕೊಳ್ತಿದ್ದಾರೆ. ಸಾಲದಕ್ಕೆ ಈಗಾಗಲೇ ಕಳೆದ ಮೂರ್ನಾಲ್ಕು ವರ್ಷದಲ್ಲಿ ನಾಲ್ಕೈದು ಜನ ಕಾಡಾನೆ ದಾಳಿಯಿಂದ ಪ್ರಾಣ ಕೂಡ ಕಳೆದುಕೊಂಡಿದ್ದಾರೆ. ಇಷ್ಟು ದಿನ ಹೊಲಗದ್ದೆ, ತೋಟಗಳಲ್ಲಿದ್ದ ಆನೆಗಳು ಈಗೀಗ ನಾಡಿಗೂ ಬರುತ್ತಿರುವುದರಿಂದ ಹಳ್ಳಿಗರು ಭಯಗೊಂಡಿದ್ದಾರೆ. ಕಾಡಾನೆ ಹಾವಳಿ ನಿಂತಿಲ್ಲ. ಸರ್ಕಾರದಿಂದ ಸಮಪರ್ಕಕ ಪರಿಹಾರವೂ ಬರುತ್ತಿಲ್ಲ. ಇದು ಹೀಗೆ ಮುಂದುವರೆದರೆ ನಾವು ಬದುಕುವುದಾದರೂ ಹೇಗೆಂದು ಹಳ್ಳಿಗರು ಪ್ರಶ್ನಿಸಿದ್ದಾರೆ. ಈ ಮಧ್ಯೆ ಹಳ್ಳಿಗರಿಗೆ ಕಾಡುಪ್ರಾಣಿಗಳ ಚಲನ-ವಲನದ ಬಗ್ಗೆ ಗೊತ್ತಿರುತ್ತೆ. ಅವರು ಎಚ್ಚರದಿಂದ ಇರುತ್ತಾರೆ. ಈಗೀಗ, ಪ್ರವಾಸಿ ತಾಣಗಳಲ್ಲೂ ಕಾಡಾನೆಗಳು ಕಾಣಿಸಿಕೊಳ್ಳುತ್ತಿವೆ. ಹಾಗಾಗಿ, ಪ್ರವಾಸಿಗರು ಎಚ್ಚರದಿಂದ ಇರಬೇಕೆಂದು ಸ್ಥಳಿಯರು ಪ್ರವಾಸಿಗರಲ್ಲಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.