ಕೊಕ್ಕಡ: ರಾ. ಹೆದ್ದಾರಿಯಲ್ಲಿ ಆನೆಗಳ ಹಿಂಡು!
Team Udayavani, Aug 30, 2020, 10:41 AM IST
ಉಪ್ಪಿನಂಗಡಿ: ಕಾಡಾನೆಗಳ ಹಾವಳಿ ಯಿಂದ ಕೃಷಿಕರ ನಿತ್ಯ ತೊಂದರೆ ಅನುಭವಿಸುತ್ತಿದ್ದರೆ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಆನೆಗಳು ಹಿಂಡು ಹಿಂಡಾಗಿ ಸಾಗುವ ಮೂಲಕ ವಾಹನ ಸವಾರರಲ್ಲಿ ಭೀತಿ ಮೂಡಿಸುತ್ತಿವೆ.
ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಕೆಲವು ದಿನಗಳಿಂದೀಚೆಗೆ ಪ್ರತಿದಿನ ನಸುಕಿನಲ್ಲಿ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಕಡೆಯಿಂದ ಕೌಕ್ರಾಡಿಯತ್ತ ಸಾಗುವ ನಾಲ್ಕು ಆನೆಗಳ ಹಿಂಡು ಸಂಜೆಯ ವೇಳೆಗೆ ಅದೇ ದಾರಿಯಿಂದ ಮರಳುತ್ತಿವೆ.
ಇತ್ತ ಭೂತಲಡ್ಕ, ಹೊನ್ನೆಜಾಲು ಮೊದಲಾದ ಗ್ರಾಮಗಳ ಇಬ್ರಾಹಿಂ, ನಾರಾಯಣ ಗೌಡ, ಸೇಸಪ್ಪ, ಥಾಮಸ್, ಹರಿಯಪ್ಪ, ಪ್ರಸನ್ನ, ನೌಶಾದ್ ಅಮೀದ್, ನೀಲಮ್ಮ ಮುಂತಾದವರ ಭತ್ತದ ಪೈರು, ಬಾಳೆ, ತೆಂಗು ಇತ್ಯಾದಿ ಕೃಷಿಯನ್ನು ಆನೆಗಳು ಹಾನಿಪಡಿಸಿವೆ. ಇದರಿಂದ ಕೃಷಿಕರು ಆರ್ಥಿಕ ನಷ್ಟದ ಜತೆಗೆ ಭಯದಲ್ಲಿ ಬದುಕುವಂತಾಗಿದೆ.
ಸ್ಥಳೀಯರು ಅರಣ್ಯ ಇಲಾಖೆಗೆ ಲಿಖೀತ ದೂರು ನೀಡಿದ್ದಾರೆ. ಅರಣ್ಯ ಪಾಲಕರು ಸ್ಥಳಕ್ಕೆ ಬಂದು ಸುಡುಮದ್ದನ್ನು ನೀಡಿ ಧೈರ್ಯ ತುಂಬಿ ಹೋಗುತ್ತಾರೆ ಹೊರತು ಆನೆಗಳ ಉಪಟಳಕ್ಕೆ ಕೊನೆ ಹಾಡಲು ಸಾಧ್ಯವಾಗಿಲ್ಲ ಎನ್ನುತ್ತಾರೆ ಸಂತ್ರಸ್ತರು.
ಎರಿಂಞಿಪುಳದಲ್ಲಿ ಕಾಡಾನೆ ದಾಂಧಲೆ
ಕಾಸರಗೋಡು: ಎರಿಂಞಿಪುಳದಲ್ಲಿ ಮತ್ತೆ ಕಾಡಾನೆ ಹಿಂಡು ದಾಂಧಲೆ ನಡೆಸಿದ್ದು, ಹಲವು ತೋಟಗಳಿಗೆ ನುಗ್ಗಿ ವ್ಯಾಪಕವಾಗಿ ಕೃಷಿ ನಾಶ ಮಾಡಿವೆ. ಕಾಡಾನೆ ದಾಳಿಯಿಂದಾಗಿ ಸ್ಥಳೀಯರು ಆತಂಕಿತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ