ಕಾನೂನು ತೊಡಕು ನಿವಾರಿಸಿ ಮುಂದಡಿ
Team Udayavani, Mar 1, 2020, 3:06 AM IST
ಬೆಳಗಾವಿ: ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಾನೂನಿನ ತೊಡಕುಗಳನ್ನು ನಿವಾರಿಸಿಕೊಂಡು ಮುಂದುವರಿಯುತ್ತೇವೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಖಾನಾಪುರ ತಾಲೂಕಿನ ಕಣಕುಂಬಿ ಬಳಿಯ ಕಳಸಾ ನಾಲಾ ಪ್ರದೇಶ ಹಾಗೂ ಮಲಪ್ರಭಾ ನದಿ ಉಗಮಸ್ಥಾನದ ಬಳಿಯ ಮಾಹುಲಿ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು.
ಸುಪ್ರೀಂಕೋರ್ಟ್ ಆದೇಶದಂತೆ ಕೇಂದ್ರ ಸರಕಾರ ಈಗ ಅಧಿಸೂಚನೆ ಹೊರಡಿಸಿದೆ. ಅದರಂತೆ ನಾವು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು. ಕಳಸಾ-ಬಂಡೂರಿ ಯೋಜನೆ ವಿಷಯದಲ್ಲಿ ಗೋವಾ ಸರಕಾರ ಆಕ್ಷೇಪಣೆ ಸಲ್ಲಿಸಿದ್ದು, ಅದರ ವಿಚಾರಣೆ ಬರುವ ಸೋಮವಾರ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಹೆಚ್ಚಿನ ವಿಷಯ ಗಳನ್ನು ಇಲ್ಲಿ ಚರ್ಚಿಸುವುದಿಲ್ಲ.
ಈ ಬಗ್ಗೆ ಅನಗತ್ಯ ವಿವಾದ ಸೃಷ್ಟಿಯಾಗುವುದು ಬೇಡ ಎಂದು ಹೇಳಿದರು. ಕುಡಿಯುವ ನೀರಿನ ಯೋಜನೆಗೆ ಅನುಮತಿ ಅಗತ್ಯ ಇಲ್ಲ ಎಂದು ತಿಳಿದುಕೊಂಡಿ ದ್ದೇನೆ. ಆದರೆ ಸುಪ್ರೀಂಕೋರ್ಟ್ನಲ್ಲಿ ಕೆಲ ವಿಷಯಗಳು ವಿಚಾರಣೆಗೆ ಬಾಕಿಯಿವೆ. ಈ ಎಲ್ಲಾ ಕಾನೂನು ತೊಡಕನ್ನು ನಿವಾರಿಸಿಕೊಂಡು ಮುಂದಿನ ಹೆಜ್ಜೆ ಇಡಲಾಗುವುದು ಎಂದು ಸಚಿವರು ಹೇಳಿದರು.
ಮಹದಾಯಿ ಯೋಜನೆಯಲ್ಲಿ ಕರ್ನಾಟಕದ ಹಕ್ಕು ಇದ್ದರೂ ಸುಪ್ರೀಂಕೋರ್ಟ್ನ ಆದೇಶ ದಂತೆ ಮುಂದುವರಿಯುತ್ತೇವೆ. ನ್ಯಾಯಾಧಿಕರ ಣದ ಅಂತಿಮ ಆದೇಶ ಜುಲೈ ತಿಂಗಳಲ್ಲಿ ಹೊರ ಬರಲಿದೆ. ಮಹದಾಯಿ ನದಿಯ ಒಟ್ಟು 188 ಟಿಎಂಸಿ ನೀರಿನಲ್ಲಿ ಕರ್ನಾಟಕದ ಪಾಲು 44 ಟಿಎಂಸಿಯಷ್ಟಿದೆ. ಅದಕ್ಕಿಂತ ಹೆಚ್ಚು ಬಂದರೂ ಸಂತೋಷ ಎಂದು ಹೇಳಿದರು.
ಇದು ರಾಜ್ಯದ ಸಮಸ್ಯೆ. ಇದರಲ್ಲಿ ರಾಜ ಕಾರಣ ಮಾಡಬಾರದು. ನ್ಯಾಯಾಲಯದ ಆದೇಶ ಹಾಗೂ ಕೇಂದ್ರ ಸರಕಾರದ ಅಧಿಸೂಚ ನೆಗೆ ಮುನ್ನ ರಾಜ್ಯ ಸರಕಾರ ಈ ಯೋಜನೆಯ ಅನುಷ್ಠಾನಕ್ಕೆ ಬಜೆಟ್ನಲ್ಲಿ 200 ಕೋಟಿ ತೆಗೆದಿಟ್ಟಿತ್ತು. ಆದರೆ, ಇದಕ್ಕೆ 500 ರಿಂದ 1,000 ಕೋಟಿ ರೂ.ಕೊಟ್ಟರೆ ಒಳ್ಳೆಯದು. ಈ ಸಂಬಂಧ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸುವುದಾಗಿ ಹೇಳಿದರು.
ಪ್ರಚಾರ ಬೇಡ: ರೈತರು ಕರೆದಿದ್ದರಿಂದ ಅನಿವಾರ್ಯವಾಗಿ ಇಲ್ಲಿಗೆ ಬರಬೇಕಾಯಿತು. ತಮ್ಮ ಭೇಟಿಗೆ ಹೆಚ್ಚಿನ ಪ್ರಚಾರ ನೀಡುವುದು ಬೇಡ ಎಂದು ಮನವಿ ಮಾಡಿದ ಸಚಿವ ಜಾರಕಿಹೊಳಿ ಕಣಕುಂಬಿಯಲ್ಲಿ ನೀರಾವರಿ ನಿಗಮದಿಂದ ಆಯೋಜಿಸಿದ್ದ ಸಭೆಯನ್ನು ಸಹ ರದ್ದು ಮಾಡಿದರು. ಕಳಸಾ ನಾಲಾ ಪ್ರದೇಶದಲ್ಲಿ ಹೆಚ್ಚು ಸಮಯ ಕಳೆಯದ ಸಚಿವರು, ನೇರ ವಾಗಿ ಕಣಕುಂಬಿಯ ಮಾಹುಲಿ ದೇವಸ್ಥಾನಕ್ಕೆ ಭೇಟಿ ನೀಡಿ, ಅಲ್ಲಿಂದ ವಾಪಸ್ಸಾದರು. ಸಚಿವರ ಜೊತೆ ಶಾಸಕ ಆನಂದ ಮಾಮನಿ, ನೀರಾವರಿ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ