ಅಪೌಷ್ಠಿಕತೆ ನಿವಾರಣೆ: ಸರ್ಕಾರದ ನಿರ್ಲಕ್ಷ್ಯಕ್ಕೆ ಹೈ ಅಸಮಾಧಾನ
Team Udayavani, Nov 19, 2019, 3:06 AM IST
ಬೆಂಗಳೂರು: ರಾಜ್ಯದಲ್ಲಿ ಮಕ್ಕಳಲ್ಲಿನ ಅಪೌಷ್ಠಿ ಕತೆ ಯನ್ನು ನಿವಾರಿಸುವ ವಿಚಾರಕ್ಕೆ ಸಂಬಂಧಿಸಿ ದಂತೆ ನ್ಯಾ. ಎನ್.ಕೆ. ಪಾಟೀಲ್ ನೇತೃತ್ವದ ಸಮಿತಿಯ ಶಿಫಾರಸುಗಳನ್ನು ಅನುಷ್ಠಾನಗೊಳಿ ಸಿದ ವರದಿ ಸಲ್ಲಿಸಲು ಹಾಗೂ ಈ ನಿಟ್ಟಿನಲ್ಲಿ ನ್ಯಾಯಾಲಯ ಆಗಾಗ ನೀಡಿರುವ ಆದೇಶಗಳ ಅನುಪಾಲನೆಯಲ್ಲಿ ನಿರ್ಲಕ್ಷ್ಯ ತೋರುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಆರೋಪದಡಿ ಕ್ರಮ ಜರುಗಿಸುವುದಾಗಿ ಹೈಕೋರ್ಟ್ ಸೋಮವಾರ ಎಚ್ಚರಿಕೆ ನೀಡಿದೆ.
ಈ ಕುರಿತಂತೆ ಬೆಳಗಾವಿ ಜಿಲ್ಲೆಯ ಅಥಣಿಯ ವಿಮೋಚನಾ ಸಂಸ್ಥೆಯ ಬಿ.ಎಲ್. ಪಾಟೀಲ್ ಅವರು 2011ರಲ್ಲಿ ಮುಖ್ಯ ನ್ಯಾಯ ಮೂರ್ತಿ ಗಳಿಗೆ ಬರೆದ ಪತ್ರ ಆಧರಿಸಿ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವ ಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯ ಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆ ಬಂದಿತ್ತು.
ಈ ವೇಳೆ ಸರ್ಕಾರ ಪರ ವಕೀಲರು ವಾದ ಮಂಡಿಸಿ, ಅನುಪಾಲನಾ ವರದಿ ಸಲ್ಲಿಸಲು ಕಾಲಾವಕಾಶ ಕೋರಿದರು. ಇದರಿಂದ ಅಸಮಾಧಾನಗೊಂಡ ಮುಖ್ಯ ನ್ಯಾಯ ಮೂರ್ತಿಗಳು, ಮಕ್ಕಳಲ್ಲಿನ ಅಪೌಷ್ಠಿಕತೆಯ ಪ್ರಮಾಣ ರಾಜ್ಯದಲ್ಲಿ ಅಪಾಯಕಾರಿ ಮಟ್ಟ ತಲುಪುತ್ತಿದೆ. ಇದು ಸಾಮಾನ್ಯ ವಿಚಾರವಲ್ಲ. ಅತ್ಯಂತ ಗಂಭೀರ ವಿಷಯವಾಗಿದ್ದು, ಸರ್ಕಾರದ ತುರ್ತು ಗಮನ ಹಾಗೂ ಕಾಳಜಿಯ ಅವಶ್ಯಕತೆ ಯಿದೆ ಎಂದು ತೀಕ್ಷ್ಣವಾಗಿ ಹೇಳಿದರು.
ಹಾಗಾಗಿ, ಈ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾ. ಎನ್.ಕೆ. ಪಾಟೀಲ್ ನೇತೃತ್ವದ ತಜ್ಞರ ಸಮಿತಿಯ ಶಿಫಾರಸುಗಳನ್ನು ಅನುಷ್ಠಾನಗೊಳಿಸಿದ ಬಗ್ಗೆ ವರದಿ ಸಲ್ಲಿಸುವಂತೆ ಸೆ.16ರಂದು ನೀಡಿದ್ದ ನಿರ್ದೇಶನ ಹಾಗೂ ಈ ನಿಟ್ಟಿನಲ್ಲಿ ನ್ಯಾಯಾಲಯ ಆಗಾಗ ನೀಡಿರುವ ಆದೇಶ ಮತ್ತು ನಿರ್ದೇಶನಗಳನ್ನು ಪಾಲಿಸಿದ ಅನು ಪಾಲನಾ ವರದಿ ಸಲ್ಲಿಸಬೇಕು. ಅ.21ರಂದು ನೀಡಲಾಗಿದ್ದ ಆದೇಶ ಪಾಲಿಸಿದ್ದರ ಬಗ್ಗೆ ಮುಂದಿನ ವಿಚಾರಣೆ ವೇಳೆ ವಿವರಣೆ ನೀಡಬೇಕು. ಅದನ್ನು ಆಧರಿಸಿ ನ್ಯಾಯಾಂಗ ನಿಂದನೆ ಆರೋಪದಡಿ ಕ್ರಮ ಜರುಗಿಸುವ ಕುರಿತು ತೀರ್ಮಾನಿಸಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆಯನ್ನು ನ.20ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ