ಮಾಜಿ ಕಾನೂನು ಸಚಿವ, ಖ್ಯಾತ ವಕೀಲ ಶಾಂತಿ ಭೂಷಣ್ ಇನ್ನಿಲ್ಲ
Team Udayavani, Jan 31, 2023, 9:43 PM IST
ನವದೆಹಲಿ: ಕೇಂದ್ರದ ಮಾಜಿ ಕಾನೂನು ಸಚಿವ, ಖ್ಯಾತ ನ್ಯಾಯವಾದಿ ಶಾಂತಿ ಭೂಷಣ್(97) ಅವರು ಮಂಗಳವಾರ ರಾತ್ರಿ ದೆಹಲಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. 1977ರಿಂದ 1979ರವರೆಗೆ ಮೊರಾರ್ಜಿ ದೇಸಾಯಿ ಸಂಪುಟದಲ್ಲಿ ಕಾನೂನು ಸಚಿವರಾಗಿ ಅವರು ಕಾರ್ಯನಿರ್ವಹಿಸಿದ್ದರು.
ಇತ್ತೀಚಿನವರೆಗೂ ಸಕ್ರಿಯರಾಗಿದ್ದ ಶಾಂತಿಭೂಷಣ್ ಅವರು, ರಫೇಲ್ ಯುದ್ಧ ವಿಮಾನ ಒಪ್ಪಂದ ಪ್ರಕರಣವನ್ನು ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂಬ ಅರ್ಜಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ನಲ್ಲಿ ವಾದಿಸಿದ್ದರು. ಇಂದಿರಾಗಾಂಧಿಯವರು ಚುನಾವಣಾ ಅಕ್ರಮ ಎಸಗಿ ಚುನಾವಣೆ ಗೆದ್ದಿದ್ದರು ಎಂಬ ಎಸ್ಎಸ್ಪಿ ನಾಯಕ ರಾಜ್ ನರೈನ್ ಅವರ ಪರ ಅಲಹಾಬಾದ್ ಹೈಕೋರ್ಟ್ನಲ್ಲಿ ವಾದಿಸಿದ್ದ ಶಾಂತಿಭೂಷಣ್ ಅವರು ಇಂದಿರಾರ ಪದಚ್ಯುತಿಗೂ ಕಾರಣರಾಗಿದ್ದರು.
ಭ್ರಷ್ಟಾಚಾರದ ವಿರುದ್ಧ ಸದಾ ಧ್ವನಿಯೆತ್ತುತ್ತಿದ್ದ ಶಾಂತಿಭೂಷಣ್ ಅವರು ಕೆಲಕಾಲ ಆಮ್ ಆದ್ಮಿ ಪಕ್ಷದ ಜತೆಗೂ ಗುರುತಿಸಿಕೊಂಡಿದ್ದರು.
ಭೂಷಣ್ ಅವರ ಇಬ್ಬರು ಪುತ್ರರೂ (ಪ್ರಶಾಂತ್ ಭೂಷಣ್, ಜಯಂತ್ ಭೂಷಣ್) ವಕೀಲರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ