ಗ್ರಾಮದ ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿಗೆ ಒತ್ತು ಅಗತ್ಯ

ರಸ್ತೆ, ನೀರು ಸರಬರಾಜು; ಶಾಲೆಗೆ ಮೂಲಸೌಲಭ್ಯ ಒದಗಿಸಬೇಕಿದೆ

Team Udayavani, Sep 4, 2021, 6:59 AM IST

ಗ್ರಾಮದ ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿಗೆ ಒತ್ತು ಅಗತ್ಯ

ಪಡುಪಣಂಬೂರು ಗ್ರಾಮದಲ್ಲಿ ಪ್ರವಾಸೋದ್ಯಮಕ್ಕೆ ಪೂರಕವಾಗಿ ಯೋಜನೆಗಳನ್ನು ರೂಪಿಸಬೇಕಿದೆ. ಶಾಲೆಗೆ ಮೂಲಸೌಲಭ್ಯಗಳನ್ನು ಒದಗಿಸುವ ಜತೆಗೆ ಗ್ರಾಮದಲ್ಲಿ ರಸ್ತೆ, ನೀರು ಸರಬರಾಜು ಸಮರ್ಪಕವಾಗಿ ಆಗಬೇಕಿದೆ. ಈ ಬಗ್ಗೆ ಸಂಬಂಧಪಟ್ಟವರ ಗಮನಸೆಳೆಯಲು ಉದಯವಾಣಿ ಸುದಿನದ “ಒಂದು ಊರು-ಹಲವು ದೂರು’ ಅಭಿಯಾನದ ಮೂಲಕ ಪ್ರಯತ್ನಿಸಲಾಗಿದೆ.

ಪಡುಪಣಂಬೂರು: ಮೂಲ್ಕಿಯ ಒಂಬತ್ತು ಮಾಗಣೆ ಪಾರಂಪರಿಕ ಜೈನ ಮನೆತನದ ಮೂಲ್ಕಿ ಅರಮನೆ ಸಹಿತ ಇತಿಹಾಸ ಪ್ರಸಿದ್ಧ ಮೂಲ್ಕಿ ಸೀಮೆಯ ಅರಸು ಕಂಬಳ ಹಾಗೂ ಅನೇಕ ಪ್ರೇಕ್ಷಣೀಯ ಸ್ಥಳಗಳನ್ನು ಹೊಂದಿರುವ ಪಡುಪಣಂಬೂರು ಗ್ರಾಮದಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ವಿಶೇಷವಾದ, ವಿಪುಲವಾದ ಅವಕಾಶಗಳಿವೆ. ಜನಪ್ರತಿನಿ ಧಿಗಳು ಸರಕಾರದ ಮೂಲಕ ಅನುಷ್ಠಾನ ತರುವ ಕಾರ್ಯ ಮಾಡಬೇಕಿದೆ.

ಪಡುಪಣಂಬೂರು ಕೃಷಿ ಮತ್ತು ಹೈನುಗಾರಿಕೆಗ ವಿಶೇಷ ಆದ್ಯತೆ ನೀಡಿರುವ ಪ್ರದೇಶ, ಧಾರ್ಮಿಕ ಕ್ಷೇತ್ರಗಳನ್ನು ಹೊಂದಿರುವ ಪಡುಪಣಂಬೂರು ರಾಷ್ಟ್ರೀಯ ಹೆದ್ದಾರಿ 66ಕ್ಕೆ ಕೇವಲ 100 ಮೀ. ದೂರವಿರುವ ಮೂಲ್ಕಿ ಅರಮನೆಯ ಸೊಬಗು ಅದರ ಮುಂಭಾಗದಲ್ಲಿರುವ ಬಾಕಿಮಾರು ಗದ್ದೆಯಲ್ಲಿ ಹಸುರಿನ ಹೊದಿಕೆಯ ನಡುವೆ ಇರುವ ಜೋಡುಕರೆ ಕಂಬಳದ ಪ್ರದೇಶವೇ ಆಕರ್ಷಿಣೀಯವಾಗಿದೆ. ಅದಕ್ಕೆ ಪೂರಕವಾಗಿ ಜೈನ ಬಸದಿ, ಅನಂತೇಶ್ವರ ಸಾನ್ನಿಧ್ಯ, ಜಾರಂದಾಯ ದೈವಸ್ಥಾನಗಳು, ಶನಿ ಮಂದಿರ, ಹೊಗೆಗುಡ್ಡೆ ಶ್ರೀ ಉಮಾಮಹೇಶ್ವರ ದೇವಸ್ಥಾನ, ಶ್ರೀ ಗೌರೀ ಶಂಕರ ದೇವಸ್ಥಾನ, ಕಲ್ಲಾಪು ಶ್ರೀ ವೀರಭದ್ರ ಮಹಾಮ್ಮಾಯಿ ದೇವಸ್ಥಾನ, ಸಂತೆಕಟ್ಟೆ ಕದಿಕೆ ಮಸೀದಿ, ಇವೆಲ್ಲವು ಪ್ರೇಕ್ಷಣೀಯ ಸ್ಥಳಗಳಾಗಿವೆ. ನಂದಿನಿ ನದಿ ಬಳಿಯ ಹೊಗೆಗುಡ್ಡೆ ದೇವಸ್ಥಾನದ ಬಳಿ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನಕ್ಕೆ ಸಂಪರ್ಕಿಸುವ ರಸ್ತೆಯು ಸಹ ಹಾದು ಹೋಗಿದೆ. ಈ ಭಾಗದಲ್ಲಿ ಕುದ್ರು ಪ್ರದೇಶವಿದ್ದು ದೋಣಿ ವಿಹಾರ, ಇನ್ನಿತರ ಜಲ ಕ್ರೀಡೆಗಳ ಸಂಘಟನೆಗೆ ಮುಕ್ತ ಅವಕಾಶ ಇದೆ. ಗಾಳ ಹಾಕಿ ಮೀನು ಹಿಡಿಯುವವರ ಸಾಲುಗಳನ್ನು ಈ ಭಾಗದಲ್ಲಿ ಕಾಣಬಹುದು. ಒಂದು ಭಾಗದಲ್ಲಿ ನಂದಿನಿ ನದಿ ಕಡಲಿಗೆ ಸೇರುವ ಪ್ರದೇಶವಾದ ಬಾಂದ ಕೆರೆ, ಶಾಲೆ ಕೆರೆ, ಹೊಗೆಗುಡ್ಡೆ ಕೆರೆಯನ್ನು ಅಭಿವೃದ್ಧಿ ಪಡಿಸಿದಲ್ಲಿ ನೀರಿನಾಶ್ರಯ ಇನ್ನಷ್ಟು ಹೆಚ್ಚುತ್ತದೆ.

ಇದನ್ನೂ ಓದಿ:ಲಿಂಗಾಯತ ಪ್ರತ್ಯೇಕ ಧರ್ಮ ಕುರಿತ ಹೋರಾಟವನ್ನು ಸದ್ಯಕ್ಕೆ ಮಾಡುವುದಿಲ್ಲ

ಶತಮಾನ ಕಂಡ ಶಾಲೆ
ಪಡುಪಣಂಬೂರು ರಾಷ್ಟ್ರೀಯ ಹೆದ್ದಾರಿ ಬಳಿಯ ಪ್ರಾಥ ಮಿಕ ಶಾಲೆಯು ಸ್ಥಳೀಯವಾಗಿ ಅಕ್ಷರಜ್ಞಾನವನ್ನು ಪಸರಿಸಿ ಶತಮಾನ ವರ್ಷವನ್ನು ಕಂಡಿದ್ದು ಹೆದ್ದಾರಿ ವಿಸ್ತರಣೆಗಾಗಿ ನೀರಿನ ಟ್ಯಾಂಕ್‌ನ ಅವಘಡದಿಂದಾಗಿ ಶಾಲೆಯ ಕಟ್ಟಡವನ್ನು ಕೆಡವಲಾಗಿದ್ದು, ನೂತನ ಕಟ್ಟಡ ನಿರ್ಮಾಣ ಮಾಡಲು ಕಟ್ಟಡ ಸಮಿತಿಯು ಸಜ್ಜಾಗಿದ್ದು, ಇದು ವೇಗವನ್ನು ಪಡೆದುಕೊಳ್ಳಬೇಕಿದೆ.

ಇತರ ಸಮಸ್ಯೆಗಳೇನು?
– ಪಡುಪಣಂಬೂರು-ಸಸಿಹಿತ್ಲು ಸಂಪರ್ಕಿಸುವ ರಸ್ತೆ ವಿಸ್ತರಣೆಯಲ್ಲಿನ ಗೊಂದಲ ನಿವಾರಣೆ.
– ಸಂತೆಕಟ್ಟೆ ಪ್ರದೇಶಕ್ಕೆ ನೀರಿನ ನಿರ್ವಹಣೆಗೆ ಶಾಶ್ವತ ಯೋಜನೆ.
– ಹಳೆಯಂಗಡಿ-ಹೆದ್ದಾರಿ ತಲುಪುವ ಒಳ ರಸ್ತೆಯಲ್ಲಿ ಚರಂಡಿ ನಿರ್ಮಾಣ.
– ಪಂಚಾಯತ್‌ ಹಾಗೂ ಕಲ್ಲಾಪುವಿನ ನಡುವೆ ಇರುವ ಹೆದ್ದಾರಿಯಲ್ಲಿ ಸರ್ವಿಸ್‌ ರಸ್ತೆ ನಿರ್ಮಾಣ.
– ನದಿ ತೀರದ ಪ್ರದೇಶದ ಕೃಷಿಕರಿಗೆ ವಿಶೇಷ ಪ್ರೋತ್ಸಾಹ.
– ಸಸಿಹಿತ್ಲು-ಹೊಗೆಗುಡ್ಡೆ ರಸ್ತೆಯ ನದಿ ಬಳಿಯ ಕುಸಿತಕ್ಕೆ ಶಾಶ್ವತ ಪರಿಹಾರ, ಸುರಕ್ಷೆ ಕ್ರಮ.
– ಗ್ರಾ.ಪಂ. ಪ್ರವೇಶಿಸುವಲ್ಲಿ ಮುಕ್ತ ಸಂಚಾರ, ಬಸ್‌ ನಿಲ್ದಾಣದ ಸ್ಥಳಾಂತರ.
– ಶಿಥಿಲಾವಸ್ಥೆಯಲ್ಲಿರುವ ಗ್ರಾಮ ಕರಣಿಕರ, ಗ್ರಂಥಾಲಯದ ಕಟ್ಟಡಕ್ಕೆ ಕಾಯಕಲ್ಪ.

 

– ನರೇಂದ್ರ ಕೆರೆಕಾಡು

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.