Fraud Case ವಿದೇಶದಲ್ಲಿ ಉದ್ಯೋಗ: 36.34 ಲ.ರೂ. ವಂಚನೆ


Team Udayavani, May 24, 2024, 11:24 PM IST

Fraud Case ವಿದೇಶದಲ್ಲಿ ಉದ್ಯೋಗ: 36.34 ಲ.ರೂ. ವಂಚನೆ

ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 36.34 ಲ.ರೂ. ಪಡೆದು ವಂಚಿಸಿರುವ ಬಗ್ಗೆ ಮಂಗಳೂರಿನ ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವ್ಯಕ್ತಿಯೋರ್ವರು ಉದ್ಯೋಗಕ್ಕಾಗಿ Indeed.com ಎಂಬ ವೆಬ್‌ಸೈಟ್‌ ನಲ್ಲಿ ತಮ್ಮ ಬಯೋಡೇಟಾ ಅಪ್‌ಲೋಡ್‌ ಮಾಡಿದ್ದರು. ಫೆ.16ರಂದು ಯಾರೋ ಅಪರಿಚಿತರು ಆಸ್ಟ್ರೇಲಿಯಾದಲ್ಲಿರುವ Darrell Lea Confectionery co. ಕಂಪೆನಿ ಹೆಸರಿನಲ್ಲಿ ಇ-ಮೇಲ್‌ ಮೂಲಕ ಜಾಬ್‌ ಅಪ್ಲಿಕೇಷನ್‌ ಕಳುಹಿಸಿದ್ದರು. ನೀವು ಉದ್ಯೋಗಕ್ಕೆ ಆಯ್ಕೆಯಾಗಿದ್ದು ಶಿಕ್ಷಣದ ದಾಖಲಾತಿ, ಪಾಸ್‌ಪೋರ್ಟ್‌, ಪೊಟೋ, ಜಾಬ್‌ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ ಕಳುಹಿಸುವಂತೆ ತಿಳಿಸಿದರು. ಇದನ್ನು ಸತ್ಯವೆಂದು ನಂಬಿದ ದೂರುದಾರರು ತಮ್ಮ ಬಯೋಡೇಟಾವನ್ನು ಇ-ಮೇಲ್‌ ಮಾಡಿದ್ದರು.

ಆರೋಪಿಗಳು ಅವರಿಗೆ ಆಫ‌ರ್‌ ಲೆಟರ್‌, ಒಪ್ಪಂದ ಲೆಟರ್‌, ನೇಮಕಾತಿ ಲೆಟರ್‌, ವೀಸಾ ಕನ್‌ಫ‌ರ್ಮೇಷನ್‌ ಲೆಟರ್‌ ಕಳುಹಿಸಿ ಮೊಬೈಲ್‌ಗೆ ಕರೆ ಮಾಡಿ ವೀಸಾ ಕನ್ಫರ್ಮೇಶನ್‌ ಫಾರ್ಮ್ ಶುಲ್ಕ, ವೆರಿಫಿಕೇಶನ್‌ ಶುಲ್ಕ ಮತ್ತು ಇತರ ಶುಲ್ಕ ಪಾವತಿಸಬೇಕೆಂದು ತಿಳಿಸಿದರು. ಅನಂತರ ಎ.4ರಿಂದ ಮೇ 6ರವರೆಗೆ ಹಂತ ಹಂತವಾಗಿ 36,34,000 ರೂ. ವರ್ಗಾಯಿಸಿಕೊಂಡು ವಂಚಿಸಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಲಕ್ಷಾಂತರ ರೂ. ವರ್ಗಾವಣೆ
ಮಣಿಪಾಲ: ಮೊಬೈಲ್‌ಗೆ ಆಧಾರ್‌ ಕಾರ್ಡ್‌ ಬಗ್ಗೆ ಬಂದ ಸಂದೇಶಕ್ಕೆ ಕ್ಲಿಕ್‌ ಮಾಡಿದ ಬಳಿಕ ಮಹಿಳೆಯೊಬ್ಬರ ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆಗೊಂಡ ಘಟನೆ ನಡೆದಿದೆ.

ಮಣಿಪಾಲದ ಆಶಾಲತಾ ಆರ್‌. ಅವರ ಮೊಬೈಲ್‌ಗೆ ಮೇ 20ರಂದು ಆಧಾರ್‌ ಕಾರ್ಡ್‌ನ ಬಗ್ಗೆ ಸಂದೇಶ ಬಂದಿತ್ತು. ಅನಂತರ ಕೆಲವೇ ಕ್ಷಣದಲ್ಲಿ ಅವರ ಬ್ಯಾಂಕ್‌ ಉಳಿತಾಯ ಖಾತೆಯಿಂದ ಮತ್ತು ಆರ್‌ಡಿ ಖಾತೆಯಿಂದ ಅಪರಿಚಿತರು 2,55,892 ರೂ.ಗಳನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದಾರೆ. ಆನ್‌ಲೈನ್‌ ವಂಚನೆಯ ಕುರಿತು ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Nalin Kumar Kateel ವಿರುದ್ಧ ಸುಳ್ಳು ಸಂದೇಶ: ಕ್ರಮಕ್ಕೆ ಬಿಜೆಪಿ ಒತ್ತಾಯ

Nalin Kumar Kateel ವಿರುದ್ಧ ಸುಳ್ಳು ಸಂದೇಶ: ಕ್ರಮಕ್ಕೆ ಬಿಜೆಪಿ ಒತ್ತಾಯ

Mangaluru ಗಾಂಜಾ ಸೇವನೆ: ಯುವಕನ ಬಂಧನ

Mangaluru ಗಾಂಜಾ ಸೇವನೆ: ಯುವಕನ ಬಂಧನ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

police crime

ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

arrested

ಸಲ್ಮಾನ್‌ ಮನೆ ಹೊರಗೆ ಗುಂಡಿನ ದಾಳಿ: ರಾಜಸ್ಥಾನದ ವ್ಯಕ್ತಿ ಸೆರೆ

baby

UP ಕ್ಷುಲ್ಲಕ ಕಾರಣಕ್ಕೆ 2 ವರ್ಷದ ಮಗಳನ್ನು ಕಾಲುವೆಗೆಸೆದ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.