ಮುಂದಿನ ವರ್ಷದಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಇಂಜಿನಿಯರ್ಸ್ ದಿನ ಆಚರಣೆ: ಸಿಎಂ ಬೊಮ್ಮಾಯಿ
Team Udayavani, Sep 15, 2022, 10:06 AM IST
ಬೆಂಗಳೂರು: ಸರ್ಕಾರವೇ ಇಂಜಿನಿಯರಿಂಗ್ ದಿನಾಚರಣೆ ಆಚರಿಸಬೇಕೆಂದು ಕೇಂದ್ರ ಸರ್ಕಾರ ಆದೇಶಿಸಿದೆ. ಮುಂದಿನ ವರ್ಷದಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಇಂಜಿನಿಯರ್ಸ್ ದಿನ ಆಚರಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕರ್ನಾಟಕ ಇಂಜಿನಿಯರ್ಸ್ ಸೇವಾ ಸಂಘ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಪುತ್ಥಳಿಗೆ ಪುಷ್ಪಾರ್ಚನೆ ನೆರವೇರಿಸಿದರು.
ಇದನ್ನೂ ಓದಿ:ಸುಕೇಶ್ ಚಂದ್ರಶೇಖರ್ ಕೇಸ್ ಗೆ ಹೊಸ ಟ್ವಿಸ್ಟ್: ಜೈಲಿನಲ್ಲಿ ಭೇಟಿಯಾಗಿದ್ದರು ನಾಲ್ವರು ನಟಿಯರು
ಬಳಿಕ ಮಾತನಾಡಿದ ಅವರು, ಸರ್ ಎಂ. ವಿಶ್ವೇಶ್ವರಯ್ಯ ಅವರು ಜೀವನಪೂರ್ತಿ ಜನರಿಗಾಗಿ ಬದುಕಿದ್ದಾರೆ. ನಿಜವಾಗಿ ನಾಡು ಕಟ್ಟಿದವರು ಅವರು. ಡ್ಯಾಂ ಕಟ್ಟಿದ್ದು ಮಾತ್ರವಲ್ಲದೇ ಅನೇಕ ಕ್ಷೇತ್ರಗಳನ್ನು ಅಭಿವೃದ್ಧಿ ಮಾಡಿದರು. ಮೈಸೂರು ರಾಜರ ಆಶ್ರಯದಲ್ಲಿ ಅನೇಕ ಕೆಲಸ ಮಾಡಿದ್ದಾರೆ. ಕೆ.ಆರ್.ಎಸ್ ಡ್ಯಾಂ ನಿರ್ಮಾಣ ಮಾಡಿ ಅನೇಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ. ಸಾಂಸ್ಕೃತಿಕ, ಸಾಮಾಜಿಕ ಕ್ಷೇತ್ರದಲ್ಲೇ ಸರ್ ಎಂ ವಿಶ್ವೇಶ್ವರಯ್ಯ ಅನೇಕ ಸೇವೆ ಮಾಡಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ನಾಡಿನ ಸಮಸ್ತ ಇಂಜಿನಿಯರ್ ಗಳಿಗೆ ರಾಷ್ಟ್ರೀಯ ಇಂಜಿನಿಯರ್ಸ್ ದಿನದ ಹಾರ್ದಿಕ ಶುಭಾಶಯಗಳು.
ಎಲ್ಲ ಇಂಜಿನಿಯರ್ ಗಳಿಗೂ ಪ್ರೇರಣೆ ಎಂದೇ ಬಿಂಬಿತವಾಗಿರುವ ಮಹಾಮೇಧಾವಿ, ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯನವರ ಜನ್ಮದಿನದಂದು ಇಂಜಿನಿಯರ್ಸ್ ದಿನ ಆಚರಿಸುತ್ತಿರುವುದು ಆ ಮಹಾನ್ ಚೇತನಕ್ಕೆ ಸಲ್ಲಿಸುತ್ತಿರುವ ಗೌರವವಾಗಿದೆ.#EngineersDay pic.twitter.com/ahothrZJtG
— Basavaraj S Bommai (@BSBommai) September 15, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ