ಸಮರ್ಪಕವಾಗಿ ಉದ್ಯೋಗ ನೀತಿ ಜಾರಿಯಾಗಲಿ


Team Udayavani, Oct 13, 2021, 6:20 AM IST

ಸಮರ್ಪಕವಾಗಿ ಉದ್ಯೋಗ ನೀತಿ ಜಾರಿಯಾಗಲಿ

ಕಳೆದ ಎರಡು ವರ್ಷಗಳಿಂದ ಕಾಡುತ್ತಿರುವ ಕೋವಿಡ್‌ ಸೋಂಕಿನಿಂದಾಗಿ ಜನರ ಜತೆಗೆ ಕಾರ್ಖಾನೆಗಳು, ಕಂಪೆನಿಗಳು, ಸಣ್ಣ ಕೈಗಾರಿಕೆಗಳು, ಬೃಹತ್‌ ಕೈಗಾರಿಕೆಗಳು, ರಿಯಲ್‌ ಎಸ್ಟೇಟ್‌ ಸೇರಿದಂತೆ ಹೆಚ್ಚು ಕಡಿಮೆ ಎಲ್ಲ ಉದ್ಯಮಗಳು ನಷ್ಟಕ್ಕೀಡಾಗಿವೆ. ಇದು ನೇರವಾಗಿ ತಟ್ಟಿರುವುದು ಉದ್ಯೋಗಿಗಳ ಮೇಲೆ. ಒಂದು ವೇತನ ಕಡಿತ,ಮತ್ತೊಂದು ಉದ್ಯೋಗದಿಂದ ವಜಾದಂಥ ಪರಿಣಾಮಗಳು. ಇದಷ್ಟೇ ಅಲ್ಲ, ಹೊಸ ಹೊಸ ಉದ್ಯೋಗಗಳು ಸೃಷ್ಟಿಯಾಗುವಲ್ಲಿಯೂ ವಿಳಂಬವಾಗುತ್ತಿರುವುದು ಉಂಟು. ಈ ನಿಟ್ಟಿನಲ್ಲಿ ಕೇಂದ್ರ ಸರಕಾರವೂ ಸೇರಿದಂತೆ ಎಲ್ಲ ರಾಜ್ಯ ಸರಕಾರಗಳು ಉದ್ಯೋಗ ಸೃಷ್ಟಿಗಾಗಿ ಒಂದಿಲ್ಲೊಂದು ಪೂರಕ ಸನ್ನಿವೇಶಗಳನ್ನು ಸೃಷ್ಟಿಸುತ್ತಲೇ ಇವೆ.

ಇದರ ಬೆನ್ನಲ್ಲೇ ಕರ್ನಾಟಕ ಸರಕಾರ, ಉದ್ಯೋಗಗಳನ್ನು ಸೃಷ್ಟಿಸುವ ಸಲುವಾಗಿಯೇ ಉದ್ಯೋಗ ನೀತಿ ಜಾರಿ ಮಾಡಲು ಮುಂದಾಗಿದೆ. ಇಂಥ ನೀತಿ ಜಾರಿ ಮಾಡುವ ರಾಜ್ಯಗಳ ಪೈಕಿ ಅಗ್ರ ಸ್ಥಾನದಲ್ಲಿರುವ ಕರ್ನಾಟಕ, ಹೆಚ್ಚು ಉದ್ಯೋಗ ಸೃಷ್ಟಿಸುವವರಿಗೆ ಪ್ರೋತ್ಸಾಹಧನ ನೀಡಲೂ ನಿರ್ಧರಿಸಿದೆ. ಸೋಮವಾರವಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಈ ಉದ್ಯೋಗ ನೀತಿ ಜಾರಿ ಬಗ್ಗೆ ಘೋಷಿಸಿದ್ದಾರೆ.

ಕರ್ನಾಟಕ ಸರಕಾರ ಈಗಾಗಲೇ ಸ್ಟಾರ್ಟ್‌ಆ್ಯಪ್‌ ನೀತಿ, ಕೈಗಾರಿಕ ನೀತಿ ಸೇರಿದಂತೆ ವಿವಿಧ ಉದ್ಯಮಿಗಳ ಪ್ರೋತ್ಸಾಹಕ್ಕಾಗಿ ಹಲವಾರು ಕ್ರಮಗಳನ್ನು ಜಾರಿ ಮಾಡಿದೆ. ಈ ವಿಚಾರದಲ್ಲಿ ರಾಜ್ಯ ಸರಕಾರ ಯಶಸ್ವಿಯೂ ಆಗಿದೆ. ಸ್ಟಾರ್ಟ್‌ಆ್ಯಪ್‌ ನೀತಿಯಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಹೊಸ ಹೊಸ ಸ್ಟಾರ್ಟ್‌ಆ್ಯಪ್‌ಗಳು ರಚನೆಯಾಗಿ ಸಾವಿರಾರು ಮಂದಿಗೆ ಉದ್ಯೋಗವನ್ನೂ ನೀಡಿವೆ.

ಹಾಗೆಯೇ ಕೈಗಾರಿಕ ನೀತಿಯಿಂದಲೂ ಕೈಗಾರಿಕೆ ಆರಂಭವೂ ಸೇರಿದಂತೆ ವಿವಿಧ ವಿಚಾರಗಳಲ್ಲಿ ಸುಲಭವಾಗಿ ಸರಕಾರದ ಒಪ್ಪಿಗೆಗಳು ಸಿಗುತ್ತಿವೆ. ಬೇರೆ ಬೇರೆ ದೇಶಗಳಿಂದ ಬಂದು ಇಲ್ಲಿ ಹೂಡಿಕೆ ಮಾಡಿ ಕೈಗಾರಿಕೆಗಳನ್ನು ಸ್ಥಾಪಿಸಲಾಗುತ್ತಿದೆ. ಉದ್ಯೋಗ ಸೃಷ್ಟಿಯೂ ಆಗುತ್ತಿದೆ.

ಇದೇ ರೀತಿಯಲ್ಲಿ ಈಗ ಉದ್ಯೋಗ ನೀತಿಯನ್ನು ರೂಪಿಸಲು ನಿರ್ಧರಿಸಲಾಗಿದೆ. ಈ ಉದ್ಯೋಗ ನೀತಿಯ ಉದ್ದೇಶವೊಂದೇ. ಕೊರೊನಾ ಅನಂತರದಲ್ಲಿ ಕಡಿಮೆಯಾಗಿರುವ ಉದ್ಯೋಗ ಸೃಷ್ಟಿ ಮತ್ತು ಹೊಸ ಉದ್ಯೋಗ ಸೃಷ್ಟಿ ಮಾಡಬೇಕು ಎಂಬುದಾಗಿದೆ. ಇದರ ಜತೆಗೆ ಸಂಶೋಧನೆ ಮತ್ತು ಅಭಿವೃದ್ಧಿಗೆ ಉತ್ತೇಜನ ನೀಡುವ ಸಲುವಾಗಿಯೂ ಹೊಸ ನೀತಿಯೊಂದನ್ನು ಜಾರಿಗೊಳಿಸಲೂ ಉದ್ದೇಶಿಸಲಾಗಿದೆ.

ಇದನ್ನೂ ಓದಿ:ಐಟಿ ದಾಳಿಗೆ ಸಿದ್ದರಾಮಯ್ಯ ಕಾರಣ: ಎಚ್‌ಡಿಕೆ

ಜತೆಗೆ ಉದ್ಯೋಗ ನೀಡುವವರಿಗೆ ಪ್ರೋತ್ಸಾಹ ಧನ ನೀಡುವ ಅಂಶ ಇರುವುದೂ ಉತ್ತಮ ವಿಚಾರವೇ. ಇದು ಉದ್ಯೋಗದಾತರಿಗೆ

ಒಂದು ರೀತಿ ಪ್ರೇರಕ ಶಕ್ತಿಯಂತೆ ಆಗಲಿದ್ದು ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿ ಇಲ್ಲಿನವರಿಗೇ ಹೆಚ್ಚು ಉದ್ಯೋಗ ನೀಡಲು ಉತ್ತಮ ವೇದಿಕೆಯಂತೆ ಆಗಲಿದೆ.

ಈಗಂತೂ ಉದ್ಯೋಗ ನೀತಿ ಜಾರಿ ಬಗ್ಗೆ ಸ್ವಯಂ ಮುಖ್ಯಮಂತ್ರಿಗಳೇ ಘೋಷಣೆ ಮಾಡಿದ್ದಾರೆ. ಆದರೆ ಇದು ಕೇವಲ ಪೇಪರ್‌ನಲ್ಲಿ ಅಥವಾ ಘೋಷಣೆ ರೂಪದಲ್ಲಿ ಉಳಿಯುವಂತೆ ಆಗಬಾರದು. ಸರಕಾರದ ಈ ಉದ್ದೇಶ ಜಾರಿಯಾಗುವಲ್ಲಿ ಅಧಿಕಾರಿಗಳ ಪಾತ್ರವೂ ಬಹುಮುಖ್ಯ. ಹೀಗಾಗಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ತ್ವರಿತಗತಿಯಲ್ಲಿ ಕೆಲಸ ಮಾಡಿ ಉದ್ಯೋಗ ನೀತಿಯನ್ನು ಜಾರಿ ಮಾಡಲು ಪ್ರಯತ್ನಿಸಬೇಕು.

ಟಾಪ್ ನ್ಯೂಸ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.