ಬದುಕು ಬದಲಾಗಿದೆ ನಾವೂ ಬದಲಾಗೋಣ; ಇಎನ್‌ಟಿ ಚಿಕಿತ್ಸೆ: ಏನೇನು ಮುನ್ನೆಚ್ಚರಿಕೆ ವಹಿಸಬೇಕು?


Team Udayavani, Jun 8, 2020, 5:50 AM IST

ಇಎನ್‌ಟಿ ಚಿಕಿತ್ಸೆ: ಏನೇನು ಮುನ್ನೆಚ್ಚರಿಕೆ ವಹಿಸಬೇಕು?

ಬೇಸಗೆ ಕಳೆದು ಮಳೆಗಾಲ ಆರಂಭಗೊಂಡಿದೆ. ಜತೆಗೆ ಜ್ವರ, ಗಂಟಲು ನೋವು, ಕಿವಿ ನೋವಿನಂತಹ ಸಮಸ್ಯೆಗಳೂ ಕಾಣಿಸಿಕೊಳ್ಳುವುದು ಸಾಮಾನ್ಯ. ಇದಕ್ಕೆಲ್ಲ ಸ್ವಯಂ ಮದ್ದು ಸಲ್ಲದು. ಈಗ ಹೆಚ್ಚಿನ ಕಡೆ ಇಎನ್‌ಟಿ ಚಿಕಿತ್ಸಾ ಕೇಂದ್ರಗಳು ತೆರೆದುಕೊಂಡಿವೆ. ಆದರೆ ಕೋವಿಡ್-19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾವು ನಮ್ಮ ಎಚ್ಚರಿಕೆಯಿಂದ ಇರಬೇಕಾದುದು ಅನಿವಾರ್ಯ. ಕಿವಿ, ಮೂಗು ಗಂಟಲು ಸಮಸ್ಯೆಗಳ ಚಿಕಿತ್ಸೆಗಾಗಿ ಇಎನ್‌ಟಿ ಕ್ಲಿನಿಕ್‌ ಅಥವಾ ಆಸ್ಪತ್ರೆಗಳಿಗೆ ತೆರಳುವ ಪರಿಸ್ಥಿತಿ ಬಂದರೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿಕೊಳ್ಳುವುದು ಅತೀ ಅಗತ್ಯ. ವೈದ್ಯರ ಸೂಚನೆಯಂತೆ ತುರ್ತಾಗಿರುವ ಚಿಕಿತ್ಸೆಗಳತ್ತ ಮಾತ್ರ ಗಮನ ನೀಡಿ. ಹಾಗಾದರೆ ಇಎನ್‌ಟಿ ಚಿಕಿತ್ಸಾ ಕೇಂದ್ರಗಳಿಗೆ ಹೋಗುವಾಗ ಯಾವೆಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು? ಯಾರೆಲ್ಲ ಹೋಗಬಹುದು? ಯಾರು ಹೋಗಬಾರದು? ಎಂಬ ಬಗ್ಗೆ ಕೆಲವೊಂದು ಆವಶ್ಯಕ ಮಾಹಿತಿ ಇಲ್ಲಿದೆ.

ಬೇಸಗೆಯಿಂದ ಮಳೆಗಾಲಕ್ಕೆ ಕಾಲಿಡುತ್ತಿರುವ ಈ ದಿನಗಳಲ್ಲಿ ಸಾಮಾನ್ಯವಾಗಿ ಮಕ್ಕಳಿಂದ ಹಿರಿಯರವರೆಗೆ ಕೆಲವೊಮ್ಮೆ ಕಿವಿ, ಮೂಗು ಅಥವಾ ಗಂಟಲಿಗೆ ಸಂಬಂಧಿಸಿದ ಸಮಸ್ಯೆಗಳು ಎದುರಾಗುತ್ತವೆ. ಆ ಬಗ್ಗೆ ಚಿಕಿತ್ಸೆ ಪಡೆಯುವಾಗ ಯಾವೆಲ್ಲ ರೀತಿಯ ಎಚ್ಚರಿಕೆ ವಹಿಸಬೇಕೆಂಬ ಮಾಹಿತಿ ಇಲ್ಲಿದೆ.

-ಇಎನ್‌ಟಿ ವೈದ್ಯರನ್ನು ಭೇಟಿಯಾಗುವ ಮೊದಲೇ ಅಪಾಯಿಂಟ್‌ಮೆಂಟ್‌ ಪಡೆದುಕೊಳ್ಳುವುದು ಕಡ್ಡಾಯಗೊಳಿಸಲಾಗಿದೆ. ಫೋನ್‌ ಕರೆ ಮಾಡಿ ಸಮಯ ನಿಗದಿ ಪಡಿಸುವ ವೇಳೆ ಕ್ಲಿನಿಕ್‌ ಸಿಬಂದಿ ರೋಗಿಯ ಪ್ರಯಾಣ ಮಾಹಿತಿ ಸಂಗ್ರಹಿಸುತ್ತಾರೆ. ಅವರಿಗೆ ಸರಿಯಾದ ಮಾಹಿತಿ ನೀಡುವುದು ಅಗತ್ಯ.

-ಕಿವಿ, ಮೂಗು, ಗಂಟಲು ಸಮಸ್ಯೆಗಳಿಗೆ ಚಿಕಿತ್ಸೆ ನೀಡುವ ವೇಳೆ ಡಾಕ್ಟರ್‌ಗಳು ಮತ್ತು ಆಸ್ಪತ್ರೆ ಸಿಬಂದಿ ಕೆಲವು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದರೊಂದಿಗೆ ರೋಗಿಗಳಿಗೂ ಅದನ್ನು ಪಾಲಿಸಲು ತಿಳಿಸುತ್ತಾರೆ. ಅದನ್ನು ಪಾಲಿಸುವುದು ಅಗತ್ಯ. ಕ್ಲಿನಿಕ್‌ನಲ್ಲಿನ ನಿಯಮಾವಳಿಗಳನ್ನು ತಪ್ಪದೆ ಪಾಲಿಸಿ.

-ಚಿಕ್ಕಮಕ್ಕಳು, ವೃದ್ಧರನ್ನು ಹೊರತುಪಡಿಸಿ ರೋಗಿ ಒಬ್ಬರನ್ನೇ ಏಕಕಾಲದಲ್ಲಿ ಕ್ಲಿನಿಕ್‌ ಒಳಗೆ ಬಿಡಲಾಗುವುದು. ಆದಷ್ಟು ಕನಿಷ್ಠ ಮಂದಿ ಮಾತ್ರ ಕ್ಲಿನಿಕ್‌ಗೆ ತೆರಳಿ. ಅಲ್ಲದೆ ಕ್ಲಿನಿಕ್‌ಗೆ ಹೋಗಿರುವ ವೇಳೆ ಅಲ್ಲಿರುವ ಪೀಠೊಪಕರಣ, ಬಾಗಿಲು, ಗೋಡೆ ಇತ್ಯಾದಿಗಳನ್ನು ಸ್ಪರ್ಶಿಸಬಾರದು.

-ಸಣ್ಣಪುಟ್ಟ ಸಮಸ್ಯೆಗಳಾದರೆ ಫೋನ್‌ ಅಥವಾ ಇಮೇಲ್‌ ಅಥವಾ ವಾಟ್ಸಪ್‌ ಮೂಲಕವೇ ಔಷಧ ಸೂಚಿಸುತ್ತಾರೆ. ಅಗತ್ಯವೆನಿಸಿದರೆ ಮಾತ್ರ ಕ್ಲಿನಿಕ್‌ಗೆ ಕರೆಯುತ್ತಾರೆ. ಕ್ಲಿನಿಕ್‌ಗಳಲ್ಲಿ ನಗದು ಪೇಮೆಂಟ್‌ ಮಾಡುವುದಕ್ಕಿಂತ ಡಿಜಿಟಲ್‌ ಪಾವತಿಗೆ ಆದ್ಯತೆ ನೀಡಿ. ಪರಸ್ಪರ ಸ್ಪರ್ಶ ಕಡಿಮೆಯಾಗುತ್ತದೆ.

-ಒಂದು ತಿಂಗಳ ಅವಧಿಯಲ್ಲಿ ಅಂತಾರಾಷ್ಟ್ರೀಯ, ಅಂತಾರಾಜ್ಯ ಪ್ರಯಾಣ ಮಾಡಿದವರು, ಜ್ವರ, ಒಣಕೆಮ್ಮು, ಉಸಿರಾಟದ ಸಮಸ್ಯೆ ಇತ್ಯಾದಿಗಳಿದ್ದವರು ಕ್ಲಿನಿಕ್‌ ಅಥವಾ ಆಸ್ಪತ್ರೆಗೆ ಬರುವುದನ್ನು ನಿಷೇಧಿಸಲಾಗಿದೆ. ಅಂಥವರು ಕೊರೊನಾ ಚಿಕಿತ್ಸೆಗೆ ನಿಗದಿಪಡಿಸಿದ ಆಸ್ಪತ್ರೆಯಲ್ಲಿ ತಪಾಸಣೆಗೊಳಗಾಗುವುದು ಸೂಕ್ತ.

-ಕ್ಲಿನಿಕ್‌ಗೆ ತೆರಳುವಾಗ ಮಾಸ್ಕ್ ಧರಿಸಿ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಕ್ಲಿನಿಕ್‌ ಒಳಪ್ರವೇಶಿಸುವಾಗ ಹ್ಯಾಂಡ್‌ ಸ್ಯಾನಿಟೈಸರ್‌ ಬಳಸಬೇಕು. ಟೆಂಪರೇಚರ್‌ ಸ್ಕ್ರೀನಿಂಗ್‌ ಎಲ್ಲ ಕಡೆ ಇರುತ್ತದೆ. ಮನೆಗೆ ಬಂದ ಬಳಿಕವೂ ಸೋಪ್‌ ಬಳಸಿ ಕೈ ತೊಳೆದು ಬಳಿಕ ಬಟ್ಟೆ ವಾಶ್‌ ಮಾಡಿ ಸ್ನಾನ ಮಾಡುವುದು ಒಳಿತು.

ನಿಮಗೆ ಏನಾದರೂ ಸಂಶಯ, ಪ್ರಶ್ನೆಗಳಿದ್ದರೆ ಈ ನಂಬರಿಗೆ ವಾಟ್ಸಪ್‌ ಮಾಡಿ.
9148594259

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಳೆ, ಬೆಳಕು, ಮಣ್ಣು ಸರ್ವರಿಗೂ ಸದಾ ಪೂಜನೀಯ

ಮಳೆ, ಬೆಳಕು, ಮಣ್ಣು ಸರ್ವರಿಗೂ ಸದಾ ಪೂಜನೀಯ

ಕಣ್ಮರೆಯಾಗುತ್ತಿರುವ ಹಿರಿಯರ ಕಲಿಕೆ‌, ಕೌಶಲ

ಕಣ್ಮರೆಯಾಗುತ್ತಿರುವ ಹಿರಿಯರ ಕಲಿಕೆ‌, ಕೌಶಲ

ದೃಢ ನಂಬಿಕೆಯೇ ಈ ಪ್ರಪಂಚದ ಬದುಕು

ದೃಢ ನಂಬಿಕೆಯೇ ಈ ಪ್ರಪಂಚದ ಬದುಕು

ಮನುಕುಲದ ಮಹಾನ್ವೇಷಣೆಯೇ ಚಕ್ರ 

ಮನುಕುಲದ ಮಹಾನ್ವೇಷಣೆಯೇ ಚಕ್ರ 

ಖಗೋಳ ವಿಜ್ಞಾನಿಗಳಿಗೆ ವಿಸ್ಮಯವಾಗಿಯೇ ಉಳಿದ ಕ್ಷುದ್ರಗ್ರಹಗಳು!

ಖಗೋಳ ವಿಜ್ಞಾನಿಗಳಿಗೆ ವಿಸ್ಮಯವಾಗಿಯೇ ಉಳಿದ ಕ್ಷುದ್ರಗ್ರಹಗಳು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.