ತಲ್ಲೀನತೆ ಮತ್ತು ಶ್ರದ್ಧಾ ಭಾವಗಳೇ ಕ್ರಿಯಾಶೀಲತೆ ಪ್ರತೀಕ; ಭರತನಾಟ್ಯ ವಿದುಷಿ ರೂಪಶ್ರೀ

ಅರ್ಪಿತಾ ನಾಯಕ ಭರತನಾಟ್ಯ ರಂಗ ಪ್ರವೇಶ

Team Udayavani, Feb 20, 2024, 4:39 PM IST

ತಲ್ಲೀನತೆ ಮತ್ತು ಶ್ರದ್ಧಾ ಭಾವಗಳೇ ಕ್ರಿಯಾಶೀಲತೆ ಪ್ರತೀಕ; ಭರತನಾಟ್ಯ ವಿದುಷಿ ರೂಪಶ್ರೀ

ಮೈಸೂರು : ಕಲೆ ಮೂಲಕ ಬಿಂಬಿಸುವ ತಲ್ಲೀನತೆ ಮತ್ತು ಶ್ರದ್ಧಾ ಭಾವಗಳೇ ನೃತ್ಯಪಟುವಿನ ಕ್ರಿಯಾಶೀಲತೆ ಪ್ರತೀಕ ಎಂದು
ಹಿರಿಯ ಭರತನಾಟ್ಯ ವಿದುಷಿ ರೂಪಶ್ರೀ ಮಧುಸೂದನ ಹೇಳಿದರು.

ಅವರು ವಿದುಷಿ ಮಿತ್ರಾ ನವೀನ್ ಅವರ ನಾದವಿದ್ಯಾಲಯ ಸಂಸ್ಥೆ ನಗರದ ಜಗನ್ಮೋಹನ ಅರಮನೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಯುವ ಕಲಾವಿದೆ ಅರ್ಪಿತಾ ನಾಯಕ ಅವರ ರಂಗಪ್ರವೇಶ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅರ್ಪಿತಾ ಹೆಸರಿಗೆ ತಕ್ಕಂತೆ ನೃತ್ಯವನ್ನು ಸಂಪೂರ್ಣವಾಗಿ, ಸಮರ್ಥವಾಗಿ ಗುರು ಮಿತ್ರಾ ಅವರಿಗೆ ಅರ್ಪಿಸಿ ಧನ್ಯತೆ ಮೆರೆದಿದ್ದಾರೆ. ಅವರೊಬ್ಬ ಕ್ರಿಯಾಶೀಲ ಯುವ ನೃತ್ಯಪಟು ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ ಮಾತನಾಡಿ, ನೃತ್ಯ ಪರಂಪರೆಯನ್ನು ಮುಂದಿನ ಪೀಳಿಗೆಗೆ ಸಮರ್ಥವಾಗಿ ಕೊಡುಗೆಯಾಗಿ ನೀಡಬಲ್ಲ ಕಲಾವಿದೆ ಅರ್ಪಿತಾ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಲಾವಿದೆ ಅರ್ಪಿತಾ ಅವರ ತಂದೆ ಉದಯ ನಾಯಕ, ತಾಯಿ ಸುವರ್ಣಾ ನಾಯಕ, ಗುರು ಮಿತ್ರಾ ನವೀನ್ ಇತರರು ಇದ್ದರು.
ಹಿಮ್ಮೇಳ: ಕಲಾವಿದೆ ಅರ್ಪಿತಾ ಅವರ ರಂಗಪ್ರವೇಶಕ್ಕೆ ಗುರು ಮಿತ್ರಾ ನವೀನ್ ನಟುವಾಂಗ, ವಿದ್ವಾನ್ ಎಂ. ಎಸ್. ನವೀನ್ ಅಂದಗಾರ್ ಗಾಯನ, ವಿದ್ವಾನ್ ಜಿ.ಎಸ್. ನಾಗರಾಜ್ ಮೃದಂಗ ಮತ್ತು ವಿದ್ವಾನ್ ವಿವೇಕ ಕೃಷ್ಣ ಕೊಳಲು ಪಕ್ಕವಾದ್ಯದಲ್ಲಿ ಸಹಕರಿಸಿದರು.

ನೃತ್ಯದ ಸೊಬಗು ಹೊಮ್ಮಿಸಿದ ಕಲಾವಿದೆ:
ಪುಷ್ಪಾಂಜಲಿಯೊಂದಿಗೆ ಆರಂಭವಾದ ಅರ್ಪಿತಾ ಅವರ ನೃತ್ಯ ಪ್ರಸ್ತುತಿ, ಆನಂದ ನರ್ತನ ಗಣಪತಿ ಕೃತಿ ನೃತ್ತ ಅಭಿನಯದ ಮಿಶ್ರಣವಾಗಿತ್ತು. ಆದಿ ಪೂಜಿತನೂ, ಏಕದಂತನೂ, ಮೂಲಾಧಾರ ಚಕ್ರದ ಅಧಿಪತಿಯೂ ಆದ ಗಣಪತಿಯನ್ನು ಆನಂದ, ಚ್ಚಿದಾನಂದ, ಪರಮಾನಂದ ನರ್ತನ ಗಣಪತಿಯಾಗಿ ವಂದಿಸುವ ಕೃತಿ ಎಲ್ಲರನ್ನೂ ಮಂತ್ರ ಮುಗ್ಧರನ್ನಾಗಿಸಿತು.

ಕಲಾರಸಿಕರನ್ನು ಅರ್ಪಿತಾ ಅವರು ತನ್ನತ್ತ ಸೆಳೆದಿದ್ದು ವರ್ಣದ ಸಮರ್ಪಣೆಯ ಮೂಲಕ. ಅದು ಕಲಾವಿದೆಯ ಇಡೀ ಸಾಮರ್ಥ್ಯವನ್ನು, ನೈಪುಣ್ಯವನ್ನು ಪರೀಕ್ಷಿಸುವ ಮಹತ್ತರ ಘಟ್ಟವಾಗಿತ್ತು. ಜಗದ್ರಕ್ಷಕಳಾದ ದೇವಿಯನ್ನು ಪಾರ್ವತಿಯಾಗಿ, ಲಕ್ಷ್ಮಿಯಾಗಿ, ಸರಸ್ವತಿಯಾಗಿ ಸ್ತುತಿಸಿದ್ದಾರೆ. ಸಿಂಹವಾಹಿನಿಯದ ಶಿವನ ಸುಂದರಿಯೇ, ರಾಜರಾಜೇಶ್ವರಿಯೇ, ಓಂಕಾರ ನಾದದಿಂದ ರೂಪಿತಗೊಂಡಿರುವ ನಟರಾಜನ ಮನೋಹರಿಯೇ, ಕಷ್ಟಗಳನ್ನು ಹೋಗಲಾಡಿಸಿ ನಮ್ಮನ್ನು ರಕ್ಷಿಸಿ ಕರುಣೆಯಿಂದ ವರವನ್ನು ದಯಪಾಲಿಸಲು ಬಾ. ಸದಾ ನಿನ್ನ ಚಿಂತೆಯಲ್ಲಿ ನಿನ್ನನ್ನು ನೆನೆಯುವ, ಸ್ಮರಿಸುವ ಮನಸ್ಸನ್ನು ನೀಡಲು ಬಾ ತಾಯಿ ಎಂದು ಭಕ್ತಿ ಪ್ರಧಾನವಾದ ಪದವರ್ಣದ ಪ್ರಸ್ತುತಿಯ ಮೂಲಕ ಅರ್ಪಿತಾ ಕಲೆಗಾರಿಕೆ ಸಾಬೀತು ಪಡಿಸಿದರು.

ಭಾವಪರವಶರಾದ ಶ್ರೋತೃಗಳು:
ಉತ್ತರಾರ್ಧದಲ್ಲಿ ನೃತ್ಯಾಧಿಪತಿ ಶಿವನನ್ನು ಆರಾಧಿಸುವ, ಭೋ ಶಂಭೋ ಶಿವ ಶಂಭೋ ಸ್ವಯಂಭೋ … ಎಲ್ಲರನ್ನು ಭಾವಪರವಶವನ್ನಾಗಿಸಿತು. ನಂತರ ಕೃಷ್ಣ ನೀ ಬೇಗನೆ ಬಾರೋ ದೇವರ ನಾಮವನ್ನು ನರ್ತಿಸಿ ಪ್ರದರ್ಶಿಸಿದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.