ಡಿಸಿ ಪ್ರೇರಣೆಯಿಂದ ಪರಿಸರ ಪ್ರೇಮಿಯಾದ ವಿದ್ಯಾರ್ಥಿನಿ
6ನೇ ತರಗತಿ ವಿದ್ಯಾರ್ಥಿನಿ ಸಿಂಧೂ ಕಾರ್ಯಕ್ಕೆ ಮೆಚ್ಚುಗೆ
Team Udayavani, Jun 5, 2022, 12:53 PM IST
ಗಂಗಾವತಿ: ಶಾಲಾ ಕಾರ್ಯಕ್ರಮವೊಂದರಲ್ಲಿ ಅಂದಿನ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ ಮಾತಿನಿಂದ ಪ್ರಭಾವಿತಳಾಗಿ ತಂದೆ ಸಹಕಾರದಿಂದ ಆನೆಗೊಂದಿ, ಅಂಜನಾದ್ರಿಯಲ್ಲಿ ವಿಶೇಷ ಸಂದರ್ಭದಲ್ಲಿ ಸಸಿಗಳನ್ನು ನೆಟ್ಟು ಬೆಳೆಸುತ್ತಿರುವ ಚಿಕ್ಕರಾಂಪುರ ಗ್ರಾಮದ ವಿದ್ಯಾರ್ಥಿ ಸಿಂಧೂ ದೇವೇಂದ್ರ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾಳೆ.
ಗಂಗಾವತಿಯ ಕೇಂದ್ರೀಯ ವಿದ್ಯಾಲಯದಲ್ಲಿ 6ನೇ ತರಗತಿ ಓದುತ್ತಿರುವ ಸಿಂಧೂ ಶಾಲೆ ಕಾರ್ಯಕ್ರಮದಲ್ಲಿ ಅಂದಿನ ಜಿಲ್ಲಾಧಿಕಾರಿಯಾಗಿದ್ದ ಪಿ. ಸುನೀಲ್ ಕುಮಾರ, ಪ್ರತಿಯೊಬ್ಬರೂ ಸಸಿಗಳನ್ನು ನೆಡಬೇಕು. ಅದೇ ತರಹ ನೀರನ್ನು ಸದಾ ಉಳಿಸುವ ಕಾರ್ಯ ಮಾಡುವಂತೆ ಕರೆ ನೀಡಿದ್ದರು.
ಇದನ್ನು ಅಕ್ಷರ ಸಹ ಪಾಲಿಸುತ್ತಿರುವ ಸಿಂಧೂ ಆನೆಗೊಂದಿ ಸುತ್ತಲಿನ ಗ್ರಾಮಗಳಲ್ಲಿ ಮತ್ತು ಕಿಷ್ಕಿಂದಾ ಪಾರ್ಕಿಂಗ್ ಜಾಗದ ಸುತ್ತ ಸಸಿಗಳನ್ನು ನೆಟ್ಟು ಬೆಳೆಸುವ ಕಾರ್ಯ ನಿರಂತರವಾಗಿ ಮಾಡುತ್ತಿದ್ದಾಳೆ. ವಿಶೇಷವಾಗಿ ಆನೆಗೊಂದಿ ಉತ್ಸವ ಮೈದಾನದ ಸುತ್ತ, ಆನೆಗೊಂದಿ, ಚಿಕ್ಕರಾಂಪುರ, ಹರ್ಲಾಪುರ ಗ್ರಾಮಗಳ ಸ್ಮಶಾನದಲ್ಲಿ ಸಸಿಗಳನ್ನು ಖರೀದಿಸಿ ನೆಟ್ಟಿದ್ದಾಳೆ.
ಸಿಂಧೂ ಅವರ ತಂದೆ ದೇವೇಂದ್ರ ನಿತ್ಯವೂ ಮಗಳ ಕಾರ್ಯದಲ್ಲಿ ಪಾಲ್ಗೊಂಡು ಬಹುತೇಕ ಸಸಿಗಳಿಗೆ ನೀರುಣಿಸುವ ಕಾಯಕ ಮಾಡುತ್ತಿದ್ದಾರೆ. ಇಡೀ ಕುಟುಂಬದವರು ಕಿಷ್ಕಿಂದಾ ಫೌಂಡೇಶನ್ ಎನ್ನುವ ಸಂಸ್ಥೆ ಮೂಲಕ ಪರಿಸರ ಸಂರಕ್ಷಣೆ ಜನಜಾಗೃತಿ ಕಾರ್ಯ ಮಾಡುತ್ತಿದ್ದಾರೆ. ಅನೇಕ ಸಂಘ ಸಂಸ್ಥೆಗಳು ಚಿಕ್ಕಂದಿನಲ್ಲೇ ಪರಿಸರದ ಕಾಳಜಿ ಹೊಂದಿರುವ ಸಿಂಧೂಗಳನ್ನು ಅನೇಕ ಸಂಘ ಸಂಸ್ಥೆಗಳು ಗೌರವಿಸಿ ಸನ್ಮಾನಿಸಿವೆ.
ಪರಿಸರವಿದ್ದರೆ ನಾವೆಲ್ಲ ಬದುಕಲು ಸಾಧ್ಯ: ಅರಣ್ಯ, ಪ್ರಾಣಿ, ಪಕ್ಷಿಗಳಿದ್ದರೆ ಮಾತ್ರ ಮನುಷ್ಯರು ಬದುಕಲು ಸಾಧ್ಯ. ನಮ್ಮ ಶಾಲೆಗೆ ಆಗಮಿಸಿದ್ದ ಡಿಸಿ ಪಿ. ಸುನೀಲ್ ಕುಮಾರ ಅವರು ಪ್ರತಿ ಮಗು ಸಸಿ ನೆಟ್ಟು ಬೆಳೆಸಬೇಕು. ಗಿಡಗಳನ್ನು ಫ್ರೆಂಡ್ ಮಾಡಿಕೊಂಡು ನೀರು ಹಾಕಿ ಕಾಪಾಡುವಂತೆ ತಿಳಿಸಿದ್ದಾರೆ. ನಾನು ಹಾಗೂ ನನ್ನ ಗೆಳೆಯರು ಸಸಿ ನೆಟ್ಟು ಬೆಳೆಸುತ್ತಿದ್ದೇವೆ. ಪ್ರತಿಯೊಬ್ಬರೂ ಸಸಿ ನೆಟ್ಟು ಗಿಡವಾಗಿಸಿ ತಮ್ಮ ಮಕ್ಕಳಂತೆ ಪ್ರೀತಿ ಮಾಡಿ ಪರಿಸರ ಸಂರಕ್ಷಣೆ ಮಾಡುವಂತೆ ಸಿಂಧೂ ಉದಯವಾಣಿ ಜತೆ ಮಾತನಾಡುತ್ತ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಕೆ. ನಿಂಗಜ್ಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ