ಬಾದಾಮಿಯಲ್ಲಿ ಹೊಂಗಿರಣ ಚಿತ್ತಾರ!

ನಿಸರ್ಗ ಬಳಗದ ಪರಿಸರ ಕೈಂಕರ್ಯ ; ಸಸಿ ನೆಡುವ ರೀತಿ ಮೆಚ್ಚುವಂತಹದ್ದು

Team Udayavani, Jun 5, 2022, 5:14 PM IST

16

ಬಾಗಲಕೋಟೆ: ಹಸಿರಾಗಿಡಿ, ಹಸನಾಗಿಡಿ, ಸುಂದರವಾಗಿಡಿ….ನಿವೃತ್ತ ಪ್ರಾಧ್ಯಾಪಕರು, ಸಮಾನಮನಸ್ಕ ಸ್ನೇಹಿತರು ಕೂಡಿಕೊಂಡು ರಚಿಸಿದ ನಿಸರ್ಗ ಬಳಗದ ಧ್ಯೇಯವಾಕ್ಯವಿದು. ಬಾದಾಮಿಯ ವೀರಪುಲಿಕೇಶಿ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಎಸ್‌.ಎಚ್‌. ವಾಸಣದ ಹಾಗೂ ಸುಮಾರು 50ಕ್ಕೂ ಹೆಚ್ಚು ಜನ ಸಮಾನಮನಸ್ಕ ಸ್ನೇಹಿತರು ಕೂಡಿಕೊಂಡು 2017ರಲ್ಲಿ ನಿಸರ್ಗ ಬಳಗ ರಚಿಸಿಕೊಂಡಿದ್ದಾರೆ. ಈ ಬಳಗವನ್ನು ನಿಯಮಾನುಸಾರ ನೋಂದಣಿ ಮಾಡಿಕೊಂಡು, ಇಡೀ ಬಾದಾಮಿ ಪಟ್ಟಣ, ಪ್ರವಾಸಿ ತಾಣ, ದೇವಸ್ಥಾನ, ಶಾಲೆ-ಕಾಲೇಜು ಆವರಣ ಹೀಗೆ ಎಲ್ಲೆಲ್ಲಿ ಸ್ಥಳಾವಕಾಶ ಸಿಗುತ್ತದೆಯೋ ಅಲ್ಲೆಲ್ಲ ಸಸಿ ನೆಟ್ಟು ಪೋಷಣೆ ಮಾಡುವುದೇ ಈ ಬಳಗದ ಗುರಿ.

ಕಳೆದ 2017ರಿಂದ ಆರಂಭಗೊಂಡ ಈ ನಿಸರ್ಗ ಬಳಗದ ಪರಿಸರ ಕಾಳಜಿ, ಸಂರಕ್ಷಣೆ ಹಾಗೂ ಪೋಷಣೆಯಿಂದ ಇಡೀ ಬಾದಾಮಿಯಲ್ಲಿ ಒಟ್ಟು 11 ಸಾವಿರಕ್ಕೂ ಹೆಚ್ಚು ಸಸಿಗಳನ್ನು ಬೆಳೆಸಲಾಗಿದೆ. ಎಸ್‌. ಎಚ್‌. ವಾಸನದ ಅವರು, ಜೀವಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದವರು. ಪರಿಸರ ಸಂರಕ್ಷಣೆ, ಬೆಳೆಸುವ ಕುರಿತು ಮಕ್ಕಳಿಗೆ ಪಾಠ ಮಾಡುತ್ತಿದ್ದ ಅವರು, ನಿವೃತ್ತಿ ಜೀವನವನ್ನು ಅದೇ ಕಾರ್ಯಕ್ಕೆ ಮೀಸಲಿಟ್ಟಿದ್ದಾರೆ. ಅವರೊಂದಿಗೆ ಸಾಮಾಜಿಕ ಕಾಳಜಿಯುಳ್ಳ ಹಲವಾರು ಜನ ಕೈ ಜೋಡಿಸಿದ್ದಾರೆ.

ಅವರೆಲ್ಲ ಪ್ರತಿ ರವಿವಾರ ಬಾದಾಮಿಯಲ್ಲಿ ನಿಸರ್ಗ ಬಳಗದಿಂದ ನೆಡಲಾದ ಸಸಿಗಳ ಪಾಲನೆ ಮಾಡುತ್ತಾರೆ. ಜತೆಗೆ ಹೊಸ ಸಸಿಗಳನ್ನು ನೆಟ್ಟು ಪರಿಸರ ಬೆಳೆಸುವ ಮಹತ್ತರ ಕಾರ್ಯ ಮಾಡುತ್ತಿದ್ದಾರೆ. ನಿಸರ್ಗ ಬಳಗಕ್ಕೆ ಬಾದಾಮಿಗೆ ಸರ್ಕಾರದಿಂದ ಸಾಲು ಮರದ ತಿಮ್ಮಕ್ಕ ಟೀ ಪಾರ್ಕ್‌ ಕೂಡ ಮಂಜೂರು ಮಾಡಿಸಿದ ಹೆಗ್ಗಳಿಕೆ ಇದೆ. ಅಲ್ಲದೇ ಸಸಿಗಳ ನೆಡಲು ಇವರು ಅನುಸರಿಸಿದ ರೀತಿ ಕೂಡ ಇಡೀ ಬಾದಾಮಿ ಜನ ಮೆಚ್ಚುವಂತಹದ್ದಿದೆ. ಬಾದಾಮಿಯಲ್ಲಿ ಸಿಸಿ ರಸ್ತೆ ಮಾಡಿದ್ದು, ಆ ರಸ್ತೆಯನ್ನು ಬೇಕಾಬಿಟ್ಟಿ ಅಗೆದು ಸಸಿ ನೆಟ್ಟಿಲ್ಲ. ಬದಲಾಗಿ, ಹೊಸ ತಂತ್ರಜ್ಞಾನದ ಮೂಲಕ ಸಸಿ ನೆಡುವ ಜಾಗವನ್ನಷ್ಟೇ ಡ್ರಿಲ್ಲಿಂಗ್‌ ಮೂಲಕ ಕಟ್‌ ಮಾಡಿ, ಆ ಜಾಗದಲ್ಲಿ ಸಸಿಗಳ ನೆಡಲಾಗಿದೆ.

ಬಾದಾಮಿಯಲ್ಲಿ ಸಾಮಾಜಿಕ ಕಾಳಜಿಯುಳ್ಳ ಸ್ನೇಹಿತರೆಲ್ಲ ಕೂಡಿಕೊಂಡು ನಿಸರ್ಗ ಬಳಗ ರಚಿಸಿದ್ದೇವೆ. ಆ ಮೂಲಕ ಶಾಲೆ, ದೇವಸ್ಥಾನ, ರಸ್ತೆ ಬದಿ ಸಹಿತ ಅವಕಾಶ ಸಿಕ್ಕಲೆಲ್ಲ ಸುಮಾರು 11 ಸಾವಿರದಷ್ಟು ಸಸಿ ನೆಟ್ಟಿದ್ದೇವೆ. ಮುಖ್ಯವಾಗಿ ಪರಿಸರ ರಕ್ಷಣೆ, ಪೋಷಣೆಯ ಜತೆಗೆ ಜೈವಿಕ ಇಂಧನ ಉತ್ಪಾದನೆಗೆ ಬಳಕೆಯಾಗುವ ಹೊಂಗೆ ಮರಗಳನ್ನೇ ಹೆಚ್ಚು ನೆಡಲಾಗಿದೆ. ಅವು ಈಗ ಬೆಳೆದು ನಿಂತಿದ್ದು, ಇಡೀ ಬಾದಾಮಿ, ಹಚ್ಚ ಹಸಿರಾಗಿ ಕಾಣುತ್ತಿದೆ. ಎಸ್‌.ಎಚ್‌. ವಾಸನದ, ನಿವೃತ್ತ ಪ್ರಾಧ್ಯಾಪಕ, ನಿಗರ್ಸ ಬಳಗದ ಪ್ರಮುಖರು

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.