ಜಿಲ್ಲೆಗೊಂದು ಇಎಸ್ಐ ಆಸ್ಪತ್ರೆ-ಸರಕಾರದ ನಿಲುವು: ಸಚಿವ ಹೆಬ್ಟಾರ್
Team Udayavani, Mar 11, 2022, 6:35 AM IST
ಶಿವರಾಂ ಹೆಬ್ಟಾರ್,
ಬೆಂಗಳೂರು: ರಾಜ್ಯದಲ್ಲಿ ಪ್ರತೀ ಜಿಲ್ಲೆಗೊಂದು “ಕಾರ್ಮಿಕ ರಾಜ್ಯ ವಿಮಾ’ (ಇಎಸ್ಐ) ಆಸ್ಪತ್ರೆ ಆಗಬೇಕು ಎನ್ನುವುದು ರಾಜ್ಯ ಸರಕಾರದ ನಿಲುವಾಗಿದೆ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಟಾರ್ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಎಸ್.ವಿ. ಸಂಕನೂರು ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಸದ್ಯ 2 ಇಎಸ್ಐ ಆಸ್ಪತ್ರೆಗಳಿವೆ. ಇದೇ ರೀತಿ ಪ್ರತೀ ಜಿಲ್ಲೆಗೂ ಇಎಸ್ಐ ಆಸ್ಪತ್ರೆ ಇರಬೇಕು ಎಂದು ರಾಜ್ಯ ಸರಕಾರದ ನಿಲುವಾಗಿದೆ. ಆದರೆ, ಈ ಬಗ್ಗೆ ಕೇಂದ್ರ ಸರಕಾರ ತೀರ್ಮಾನ ತೆಗೆದುಕೊಳ್ಳಬೇಕು. ಜಿಲ್ಲೆಗೊಂದು ಇಎಸ್ಐ ಆಸ್ಪತ್ರೆ ನೀಡುವಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.
19 ಚಿಕಿತ್ಸಾಲಯ ಮಂಜೂರು
ರಾಜ್ಯದಲ್ಲಿ ಬೆಂಗಳೂರು ಮತ್ತು ಕಲಬುರಗಿಯಲ್ಲಿ ಇಎಸ್ಐ ಆಸ್ಪತ್ರೆಗಳಿವೆ. ಇದಲ್ಲದೇ 119 ಇಎಸ್ಐ ಚಿಕಿತ್ಸಾಲಯಗಳಿವೆ. ಕೇಂದ್ರ ಸರಕಾರ ಹೆಚ್ಚುವರಿಯಾಗಿ 19 ಚಿಕಿತ್ಸಾಲಯಗಳನ್ನು ಮಂಜೂರು ಮಾಡಿದೆ.
ಎಲ್ಲ ಚಿಕಿತ್ಸಾಲಯಗಳಿಗೆ ತಲಾ 20ರಿಂದ 25 ಲಕ್ಷ ರೂ. ವೆಚ್ಚದಲ್ಲಿ ಒಂದು ರೂಪದ ಕಟ್ಟಡ ನಿರ್ಮಿಸಲು ಉದ್ದೇಶಿಸಲಾಗಿದೆ. 44 ಕೋಟಿ ರೂ. ವೆಚ್ಚದಲ್ಲಿ ಯಂತ್ರೋಪಕರಣಗಳನ್ನು ಹೊಂದಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು