ಜುಲೈ ಮೊದಲು ಐರೋಪ್ಯ ಗಡಿಗಳು ಮುಕ್ತ


Team Udayavani, Jun 7, 2020, 12:03 PM IST

ಜುಲೈ ಮೊದಲು ಐರೋಪ್ಯ ಗಡಿಗಳು ಮುಕ್ತ

ಪ್ಯಾರಿಸ್‌: ಐರೋಪ್ಯ ಒಕ್ಕೂಟದ ದೇಶಗಳ ಗಡಿಗಳು ಜೂನ್‌ ತಿಂಗಳ ಅಂತ್ಯಕ್ಕೂ ಮುನ್ನ ಜನರಿಗೆ ಮುಕ್ತಗೊಳ್ಳುವ ನಿರೀಕ್ಷೆ ಇದೆ.
ಐರೋಪ್ಯ ಒಕ್ಕೂಟದಲ್ಲಿರುವ ದೇಶಗಳಲ್ಲಿ ಜನರು ಸಂಚರಿಸಲು ಮುಕ್ತ ಅವಕಾಶವಿದ್ದು, ಗಡಿಗಳಲ್ಲಿ ಯಾವುದೇ ತಪಾಸಣೆ, ನೋಂದಣಿ ಇತ್ಯಾದಿ ಇರುವುದಿಲ್ಲ.

ಆದರೆ ಇಟಲಿಯಲ್ಲಿ ಭಾರೀ ಪ್ರಮಾಣದಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆ ಕಂಡ ಬಳಿಕ 26 ದೇಶಗಳ ಗಡಿಗಳನ್ನು ಮುಚ್ಚಲಾಗಿತ್ತು ಮತ್ತು ಜನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಕೋವಿಡ್‌ ರೋಗವನ್ನು ನಿಯಂತ್ರಿಸಲು ಹೀಗೆ ಮಾಡಿದ್ದಾಗಿ ದೇಶಗಳು ಹೇಳಿಕೊಂಡಿದ್ದವು. ಇದರಿಂದಾಗಿ ಗಡಿಗಳಲ್ಲಿ ದೊಡ್ಡ ಪ್ರಮಾಣದ ಟ್ರಾಫಿಕ್‌ ಬ್ಲಾಕ್‌ಗಳಾಗಿದ್ದು, ವೈದ್ಯಕೀಯ ವಸ್ತುಗಳ ಸಾಗಾಟಕ್ಕೂ ತೀವ್ರವಾಗಿ ಸಮಸ್ಯೆಯಾಗಿತ್ತು.

ವ್ಯವಹಾರಕ್ಕೆ ಸುಲಭ
ಐರೋಪ್ಯ ಒಕ್ಕೂಟದ ದೇಶದಲ್ಲಿ ಸಂಚಾರಕ್ಕೆ ಮುಕ್ತ ಅವಕಾಶ ಇರುವುದರಿಂದ ವಿವಿಧ ದೇಶಗಳ ವ್ಯವಹಾರ ವೃದ್ಧಿಗೆ ಹಣದ ಹರಿವಿಗೆ ಸುಲಭವಾಗಿತ್ತು.

“ಜೂನ್‌ ಅಂತ್ಯದೊಳಗೆ ಐರೋಪ್ಯ ಒಕ್ಕೂಟದ ದೇಶಗಳ ಮಧ್ಯೆ ಮುಕ್ತ ಓಡಾಟ ಇರುವ ನಿರೀಕ್ಷೆ ಇರಲಿದೆ’ ಎಂದು ಭಾವಿಸುವುದಾಗಿ ಒಕ್ಕೂಟದ ಗೃಹ ವ್ಯವಹಾರಗಳ ಕಮಿಷನರ್‌ ಯಾÉವಾ ಜೊಹಾನ್ಸನ್‌ ಅಭಿಪ್ರಾಯಪಟ್ಟಿದ್ದಾರೆ. ಆದರೆ ಐರೋಪ್ಯ ಒಕ್ಕೂಟದಿಂದ ಹೊರಭಾಗಕ್ಕೆ ಸಂಚರಿಸುವುದನ್ನು ಜೂ.15ರವರೆಗೆ ನಿಯಂತ್ರಿಸುವುದಾಗಿ ಅವರು ಹೇಳಿದ್ದಾರೆ.
ಐರೋಪ್ಯ ಒಕ್ಕೂಟದಲ್ಲಿ ಕೋವಿಡ್‌ನಿಂದಾಗಿ 1.75 ಲಕ್ಷಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಬ್ರಿಟನ್‌, ಇಟಲಿ, ಫ್ರಾನ್ಸ್‌, ಸ್ಪೇನ್‌ನ ಪ್ರಜೆಗಳು ಅತ್ಯಧಿಕ ಸಂಖ್ಯೆಯಲ್ಲಿದ್ದಾರೆ.

ಐರೋಪ್ಯ ಒಕ್ಕೂಟದ ಸಾಂಕ್ರಾಮಿಕ ಕಾಯಿಲೆಗಳ ನಿಯಂತ್ರಣ ಕುರಿತ ಕೇಂದ್ರ ಅಭಿಪ್ರಾಯಪಡುವಂತೆ ಇನ್ನಷ್ಟು ಕ್ರಮಗಳು ಅಗತ್ಯವಿದೆ. ಜನರು ಸುರಕ್ಷಿತವಾಗಿರಲು ಸಾಮಾಜಿಕ ಅಂತರದಂತಹ ಕ್ರಮಗಳು ಬೇಕಾಗಿವೆ ಎಂಬುದನ್ನೂ ಜೊಹಾನ್ಸನ್‌ ಹೇಳಿದ್ದಾರೆ.

ಗಡಿ ಮುಕ್ತ
ಇದೇ ವೇಳೆ ಜೂ.15ರ ಬಳಿಕ ಗಡಿಯಲ್ಲಿ ತಪಾಸಣೆ ಮಾಡುವುದನ್ನು ಕೈಬಿಡುವುದಾಗಿ ಜರ್ಮನಿ ಹೇಳಿದೆ. ಆ ದಿನದಿಂದ ಐರೋಪ್ಯ ಒಕ್ಕೂಟದ ಪ್ರಜೆಗಳಿಗೆ ಓಡಾಟಕ್ಕೆ ಸ್ವಾತಂತ್ರ್ಯ ಇರಲಿದೆ. ಇದರಿಂದಾಗಿ ಐರೋಪ್ಯ ಒಕ್ಕೂಟದ ಜನ ಬೇಸಗೆ ರಜೆ ಕಳೆಯುವ ಬಗ್ಗೆ ಆಲೋಚನೆ ಮಾಡಿಕೊಳ್ಳಬಹುದು. ತಮ್ಮ ಮುಂದಿನ ಕೆಲಸಗಳ ಬಗ್ಗೆಯೂ ಆಲೋಚಿಸಬಹುದಾಗಿದೆ. ಇದರೊಂದಿಗೆ ಮುಂದಿನ ದಿನಗಳಲ್ಲಿ ಬೀಚ್‌ಗಳು ಮತ್ತು ಪರ್ವತಗಳು ಪ್ರವಾಸಿಗರಿಗೆ, ಟ್ರೆಕ್ಕಿಂಗ್‌ ಮಾಡುವವರಿಗೆ ಮುಕ್ತವಾಗಿರಲಿದೆ ಎಂದು ಜರ್ಮನಿಯ ಒಳಾಡಳಿತ ಸಚಿವ ಹೋರ್ಸ್ಡ್ ಸೀಹೋಫ‌ರ್‌ ಹೇಳಿದ್ದಾರೆ.

ಪ್ರವಾಸೋದ್ಯಮ ಪ್ರಧಾನ
ಐರೋಪ್ಯ ಒಕ್ಕೂಟದ ದೇಶಗಳಿಗೆ ಪ್ರವಾಸೋದ್ಯಮ ಅತಿ ಪ್ರಧಾನವಾಗಿದ್ದು, ದೇಶದ ಆದಾಯಕ್ಕೆ ಗಣನೀಯ ಪ್ರಮಾಣದಲ್ಲಿ ಆದಾಯ ತರುತ್ತಿವೆ. ಕೋವಿಡ್‌ನಿಂದಾಗಿ ಅಲ್ಲಿನ ಆದಾಯವೆಲ್ಲವೂ ಸಂಪೂರ್ಣವಾಗಿ ನೆಲಕ್ಕಚ್ಚಿವೆ. ಇಟಲಿ ಒಂದರಲ್ಲೇ ಆ ದೇಶದ ಒಟ್ಟು ರಾಷ್ಟ್ರೀಯ ಉತ್ಪನ್ನದ ಶೇ.13ರಷ್ಟು ಪ್ರವಾಸೋದ್ಯಮದಿಂದ ಬರುತ್ತದೆ.

ಇದೇ ವೇಳೆ ಉದ್ಯಮದಿಂದಲೇ ಆದಾಯ ಗಳಿಸುವ ಗ್ರೀಕ್‌ ಮುಂತಾದ ದೇಶಗಳು ಪ್ರವಾಸಿಗರಿಗೆ ತೆರೆದು ಕೊಂಡಿವೆ. ಸ್ಪೇನ್‌ ಕೂಡ ಪ್ರವಾಸೋ ದ್ಯಮದಿಂದ ಶೇ.12ರಷ್ಟು ಆದಾಯ ಪಡೆಯುತ್ತಿದ್ದು, ಅಂ.ರಾ. ಗಡಿಗಳನ್ನು ಪ್ರವಾಸಿಗರಿಗೆ ಮುಕ್ತಗೊಳಿಸುವುದಾಗಿ ಹೇಳಿದೆ. ಈ ಬಗ್ಗೆ ಅದು ಈಗಾಗಲೇ ಐರೋಪ್ಯ ಒಕ್ಕೂಟಕ್ಕೆ ಪತ್ರ ಬರೆದಿದೆ. ಹಲವು ದೇಶಗಳು ಇದೇ ರೀತಿಯ ಆಲೋಚನೆಗಳನ್ನು ಹೊಂದಿದ್ದು, ಒಕ್ಕೂಟಕ್ಕೆ ಪತ್ರ ಬರೆದಿದೆ. ಐರೋಪ್ಯ ಒಕ್ಕೂಟಕ್ಕೆ ಶೇ.81ರಷ್ಟು ಹೊರ ದೇಶಗಳಿಂದಲೇ ಪ್ರತಿವರ್ಷ ಪ್ರವಾಸಿಗರು ಆಗಮಿಸುತ್ತಾರೆ. ಅಮೆರಿಕ ಒಂದರಿಂದಲೇ ಸುಮಾರು 15 ಲಕ್ಷದಷ್ಟು ಪ್ರವಾಸಿಗರು ವರ್ಷವೂ ಆಗಮಿಸುತ್ತಾರೆ. ಒಂದು ಬಾರಿ ಐರೋಪ್ಯ ಒಕ್ಕೂಟದ ವೀಸಾ ಪಡೆದು ಎಲ್ಲ ದೇಶಗಳಲ್ಲಿ ಸಂಚರಿಸುತ್ತಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.