ಮೌಲ್ಯಾಂಕನ ಪರೀಕ್ಷೆ: ಸುಪ್ರೀಂನಲ್ಲಿ ಇಂದು ಅರ್ಜಿ ವಿಚಾರಣೆ
Team Udayavani, Mar 12, 2024, 6:00 AM IST
ಬೆಂಗಳೂರು: ರಾಜ್ಯಾದ್ಯಂತ ಸೋಮವಾರ 5, 8 ಮತ್ತು 9ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಯಶಸ್ವಿಯಾಗಿ ನಡೆಯಿತು. ಆದರೆ ಮೌಲ್ಯಾಂಕನ ಪರೀಕ್ಷೆಯನ್ನು ರದ್ದು ಪಡಿಸಬೇಕೆಂದು ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿರುವ ಮೇಲ್ಮನವಿ ಮಂಗಳವಾರ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಬರಲಿದೆ.
ಮೂರು ತರಗತಿಗಳ ಮೌಲ್ಯಾಂಕನ ಪರೀಕ್ಷೆಗೆ ಒಟ್ಟು 28.14 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ ಬಹುತೇಕ ವಿದ್ಯಾರ್ಥಿಗಳು ಸೋಮವಾರದ ಪರೀಕ್ಷೆಗೆ ಹಾಜರಾಗಿದ್ದಾರೆ. ಶಾಲಾ ಹಂತದಲ್ಲಿ ಪರೀಕ್ಷೆ ನಡೆದಿರುವ ಕಾರಣ, ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಬಳಿ ನಿಖರ ಮಾಹಿತಿ ಸೋಮವಾರ ತಡರಾತ್ರಿಯವರೆಗೂ ಲಭ್ಯವಾಗಿಲ್ಲ. ಮೊದಲ ದಿನ ಕನ್ನಡ ಪರೀಕ್ಷೆ ನಡೆದಿದ್ದು ಮಂಗಳವಾರ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ.
ಇದೇ ವೇಳೆ ಮಂಗಳವಾರ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ಬೆಲಾ ತ್ರಿವೇದಿ ಮತ್ತು ನ್ಯಾ| ಪಂಕಜ್ ಮಿತ್ತಾಲ್ ಅವರ ನ್ಯಾಯಪೀಠದ ಮುಂದೆ ಮೌಲ್ಯಾಂಕನ ಪರೀಕ್ಷೆಯನ್ನು ಪ್ರಶ್ನಿಸಿರುವ ಅರ್ಜಿಗಳು ವಿಚಾರಣೆಗೆ ಬರಲಿವೆ.
ರಾಜ್ಯ ಹೈಕೋರ್ಟ್ನ ಏಕಸದಸ್ಯ ನ್ಯಾಯಪೀಠ ಮೌಲ್ಯಾಂಕನ ಪರೀಕ್ಷೆಯನ್ನು ರದ್ದುಪಡಿಸಿದ್ದರೆ ದ್ವಿಸದಸ್ಯ ನ್ಯಾಯಪೀಠ ಪರೀಕ್ಷೆಗೆ ಅವಕಾಶ ಕಲ್ಪಿಸಿತ್ತು. ಪರೀಕ್ಷೆಗೆ ಅವಕಾಶ ಕಲ್ಪಿಸಿರುವ ಹೈಕೋರ್ಟ್ನ ದ್ವಿಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸುಪ್ರೀಂಕೋರ್ಟ್ಗೆ ಹೋಗಿವೆ.
ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣದ ವಿಚಾರಣೆ ಮಂಗಳವಾರ ನಿಗದಿಯಾಗುತ್ತಿದ್ದಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ಪರ ವಕೀಲರು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಇ-ಮೇಲ್ ಕಳುಹಿಸಿ ಸೋಮವಾರದಿಂದ ನಿಗದಿಯಾಗಿರುವ ಮೌಲ್ಯಾಂಕನ ಪರೀಕ್ಷೆಯನ್ನು ಮುಂದೂಡುವಂತೆ ಕೋರಿದ್ದರು. ಆದರೆ ಶಾಲಾ ಶಿಕ್ಷಣ ಇಲಾಖೆ ವೇಳಾಪಟ್ಟಿಯಂತೆ ಪರೀಕ್ಷೆ ಮುಂದುವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು