ಕರಾವಳಿಗರನ್ನು ಕರೆತರಲೂ ಆಗದ; ಬಿಟ್ಟು ಕೊಡಲೂ ಆಗದ ಇಕ್ಕಟ್ಟು!


Team Udayavani, May 26, 2020, 5:55 AM IST

ಕರಾವಳಿಗರನ್ನು ಕರೆತರಲೂ ಆಗದ; ಬಿಟ್ಟು ಕೊಡಲೂ ಆಗದ ಇಕ್ಕಟ್ಟು!

ಸಾಂದರ್ಭಿಕ ಚಿತ್ರ.

ವಿಶೇಷ ವರದಿ- ಮಂಗಳೂರು: ಒಂದೆಡೆ ಮುಂಬಯಿಯಲ್ಲಿ ಕೆಲಸವಿಲ್ಲದೆ ಸಂಕಷ್ಟದಲ್ಲಿರುವ ಕರಾವಳಿ ಮಂದಿ; ಇನ್ನೊಂದೆಡೆ ಕೋವಿಡ್-19 ಭೀತಿಯಲ್ಲಿಯೇ ದಿನ ಕಳೆದು ತಾಯ್ನಾಡಿಗೆ ಬರುವ ತುಡಿತದಲ್ಲಿರುವ ಮಂದಿ; ಇಷ್ಟೇ ಅಲ್ಲ, ಮುಂಬಯಿಯಿಂದ ಬಂದವರ ಮೂಲಕ ಕರಾವಳಿಯಲ್ಲಿ ಕೋವಿಡ್-19 ಸಂಖ್ಯೆ ಹೆಚ್ಚಳದ ಆತಂಕ…

ಕರಾವಳಿಗರು ಹೊಟೇಲ್‌ಗ‌ಳಿಂದ ಹಿಡಿದು ದೊಡ್ಡ ಉದ್ಯಮ ಕ್ಷೇತ್ರಗಳಲ್ಲಿ ಮುಂಬಯಿ ಮಹಾನಗರದಲ್ಲಿ ಮಿಂಚುತ್ತಿದ್ದಾರೆ. ಹಲವಾರು ಮಂದಿಯ ವ್ಯಾಪಾರ-ಉದ್ಯಮಕ್ಕೆ ಈ ನಗರ ನೆಚ್ಚಿನದ್ದಾಗಿದೆ. ಅಲ್ಲಿನ ಆರ್ಥಿಕ ಚಟುವಟಿಕೆಗೆ ಬೆನ್ನೆಲುಬಾದಂತೆ ತಾಯ್ನಾಡಿನ ಅಭಿವೃದ್ಧಿ, ಆರ್ಥಿಕತೆಗೂ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಹೀಗೆ, ಕರಾವಳಿ ಹಾಗೂ ಮುಂಬಯಿ ನಂಟು ಸುದೀರ್ಘ‌ ವರ್ಷದಿಂದ ಬೆಸೆದುಕೊಂಡಿದೆ. ಆದರೆ ಈ ಸಂಪರ್ಕ ಸೇತುವಿಗೆ ಕೋವಿಡ್-19 ಹಾನಿ ಮಾಡಿದೆ.

ಅಡಕತ್ತರಿಯಲ್ಲಿ!
ಅತ್ತ ಕೋವಿಡ್‌-19 ಸೋಂಕು ಮಹಾರಾಷ್ಟ್ರದಲ್ಲಿ ತೀವ್ರವಾಗುತ್ತಿದ್ದಂತೆ ಊರಿಗೆ ಹೋಗುವ ತುಡಿತದಲ್ಲಿ ಕರಾವಳಿಗರಿದ್ದಾರೆ. ವಿವಿಧ ಸಂಘಟನೆಗಳೂ ಅವರನ್ನು ಸುರಕ್ಷಿತವಾಗಿ ಕರೆತರಲು ಯತ್ನಿಸುತ್ತಿವೆ. ಆದರೆ ಅವರು ಊರಿಗೆ ಬಂದರೆ ಮತ್ತಷ್ಟು ಕೋವಿಡ್-19 ಪ್ರಕರಣಗಳು ಏರಿಕೆಯಾಗಬಹುದು ಎಂಬ ಆತಂಕ ಇಲ್ಲಿನವರದ್ದು. ಈ ನಡುವೆ ಒಟ್ಟಾಗಿ ಪ್ರಯಾಣಿಸುವ ವೇಳೆ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಕೆಲವರು ತಮ್ಮ ಊರಿನ ಭೇಟಿಯನ್ನು ಮುಂದೂಡಿದ್ದಾರೆಂದು ತಿಳಿದುಬಂದಿದೆ. ಆದ್ದರಿಂದ ಕರಾವಳಿಗರ ಆಗಮನ ವಿಚಾರದಲ್ಲಿ ಆಡಳಿತ, ಜನರೂ ಅಡಕತ್ತರಿಗೆ ಸಿಲುಕುವಂತಾಗಿದೆ.

ಅವಿನಾಭಾವ ಸಂಬಂಧಕ್ಕೆ ಪೆಟ್ಟು
ಕೋವಿಡ್-19 ಲಾಕ್‌ಡೌನ್‌ಗೂ ಮೊದಲು ಮಂಗಳೂರಿನಿಂದ ನಿತ್ಯ 15 ಖಾಸಗಿ ಹಾಗೂ ಸರಕಾರಿ ಬಸ್‌ ಸಂಚರಿಸುತ್ತಿದ್ದವು. ನಿತ್ಯ ರೈಲು ಕೂಡ ಅತ್ತಿಂದಿತ್ತ ಹೋಗುತ್ತಿದ್ದು, ಸಾವಿರಾರು ಪ್ರಯಾಣಿಕರು ಮಂಗಳೂರು-ಮುಂಬಯಿ ಮಧ್ಯೆ ಸಂಚರಿ ಸುತ್ತಿದ್ದರು. ಜತೆಗೆ, ಸ್ಪೈಸ್‌ಜೆಟ್‌, ಇಂಡಿಗೋ, ಏರ್‌ಇಂಡಿಯಾ ವಿಮಾನದ ಮೂಲಕವೂ ನಿತ್ಯ ಸಾವಿರಾರು ಜನರು ಆಗಮನ- ನಿರ್ಗಮನವಾಗುತ್ತಿದ್ದರು. ಈ ಮೂಲಕ ಕರಾವಳಿಯ ನಂಟು ಮುಂಬಯಿ ಜತೆಗೆ ಬೆಸೆದಿತ್ತು. ಆದರೆ ಕೊರೊನಾ ಬಂದ ಬಳಿಕ ಈ ಸಂಬಂಧಕ್ಕೆ ಹೊಡೆತ ಬಿದ್ದಿದೆ.

ಮುಂಬಯಿಯ 6 ಪ್ರಕರಣಗಳು
ಮೇ 14ರಂದು ಮುಂಬಯಿಯಿಂದ ಆಗಮಿಸಿದ 34 ವರ್ಷದ ಗರ್ಭಿಣಿಗೆ ಕೋವಿಡ್-19 ಇರುವುದು ಮೇ 17ರಂದು ದೃಢಪಟ್ಟಿತ್ತು. ಮಹಾರಾಷ್ಟ್ರದಿಂದ ಬಂದ ವ್ಯಕ್ತಿಯೊಬ್ಬರು ಮೇ 20ರಂದು ಮೂಡುಬಿದಿರೆ ಕಡಂದಲೆಯ ಕ್ವಾರಂಟೈನ್‌ ಕೇಂದ್ರಕ್ಕೆ ದಾಖಲಾಗಿ ವಾಸ್ತವ್ಯ ಇದ್ದು 21ರಂದು ಆತ್ಮಹತ್ಯೆ ಮಾಡಿದ್ದು ಅವರಲ್ಲೂ ಕೋವಿಡ್-19 ಇರುವುದು ದೃಢಪಟ್ಟಿತ್ತು. ಮೇ 18ರಂದು ಡೊಂಬಿವಿಲಿ ಥಾಣೆಯಿಂದ ಬೆಳ್ತಂಗಡಿಗೆ ಆಗಮಿಸಿದ 29 ವರ್ಷದ ಮಹಿಳೆಗೆ ಕೋವಿಡ್-19 ಇರುವುದು ಮೇ 22ರಂದು ದೃಢಪಟ್ಟಿದೆ. ಮೇ 18ರಂದು ಥಾಣೆಯಿಂದ ಆಗಮಿಸಿದ 55 ವರ್ಷ ಪ್ರಾಯದ ಗಂಡಸು, ಪುಣೆಯಿಂದ ಆಗಮಿಸಿದ ಸುಮಾರು 30 ವರ್ಷ ಪ್ರಾಯದ ಗಂಡಸು ಹಾಗೂ ಕುರ್ಲಾದಿಂದ ಆಗಮಿಸಿದ 25 ವರ್ಷ ಪ್ರಾಯದ ಗಂಡಸಿಗೆ ಕೋವಿಡ್-19 ಇರುವುದು ದೃಢಪಟ್ಟಿದೆ.

1,200 ಮಂದಿ ಆಗಮನ
ಸೇವಾಸಿಂಧು ಮೂಲಕ ದ.ಕ. ಜಿಲ್ಲೆಗೆ ಮಹಾರಾಷ್ಟ್ರದ ಸುಮಾರು 4700 ಮಂದಿ ಆಗಮಿಸಲು ಅರ್ಜಿ ಸಲ್ಲಿಸಿದ್ದರು. ಇದರಲ್ಲಿ ಆದ್ಯತೆಯ ಮೇರೆಗೆ 2,500 ಮಂದಿಯ ಅರ್ಜಿಗೆ ಅನುಮತಿ ನೀಡಲಾಗಿದೆ. ಈ ಪೈಕಿ 1,200 ಮಂದಿ ಮೇ 25ರವರೆಗೆ ದ.ಕ. ಜಿಲ್ಲೆಗೆ ಬಂದಿದ್ದಾರೆ. ಉಳಿದ 1,300ರಷ್ಟು ಮಂದಿ ಆಗಮಿಸಲು ಅವರಿಗೆ ಜಿಲ್ಲಾಡಳಿತದಿಂದ ದಿನಾಂಕ ನೀಡಲಾಗಿದೆ. ಅವರಿಗೆ ಜಿಲ್ಲೆಗೆ ಬರಲು ಅವಕಾಶವಿದೆ. ಬರುವವರು 7 ದಿನ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಬೇಕಾಗಿದೆ. ಆದರೆ ಹೊಸದಾಗಿ ಅರ್ಜಿ ಸಲ್ಲಿಸಿ ಮಹಾರಾಷ್ಟ್ರದಿಂದ ದ.ಕ. ಜಿಲ್ಲೆಗೆ ಆಗಮಿಸಲು ಸದ್ಯಕ್ಕೆ ಅವಕಾಶವಿಲ್ಲ. ಮಹಾ ರಾಷ್ಟ್ರ ಸೇರಿದಂತೆ 6 ರಾಜ್ಯಗಳಿಂದ ಕರ್ನಾಟಕಕ್ಕೆ ಬರಲು ಸರಕಾರ ನಿರ್ಬಂಧ ವಿಧಿಸಿದೆ.
-ಎಂ.ಜೆ.ರೂಪಾ, ಅಪರ ಜಿಲ್ಲಾಧಿಕಾರಿ, ದ.ಕ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.