ಸಮುದ್ರದಾಳದಲ್ಲಿದ್ದರೂ ಹಡಗು ದಾಳಿಕೋರರ ಹೆಡೆಮುರಿ ಕಟ್ಟುವೆವು: ರಾಜನಾಥ್ ಸಿಂಗ್ ಎಚ್ಚರಿಕೆ
Team Udayavani, Dec 26, 2023, 10:35 PM IST
ಮುಂಬೈ: ಮಂಗಳೂರಿಗೆ ಬರುತ್ತಿದ್ದ ಇಸ್ರೇಲ್ ಹಡಗು ಎಂವಿ ಕೆಮ್ ಫ್ಲುಟೋ, ಮತ್ತೂಂದು ಹಡಗು ಎಂವಿ ಸಾಯಿ ಬಾಬಾ ಮೇಲೆ ಡ್ರೋನ್ ದಾಳಿ ನಡೆಸಿದವರನ್ನು ಸಮುದ್ರದ ಆಳದಲ್ಲಿ ಇದ್ದರೂ ಸೆರೆ ಹಿಡಿದು ಹೆಡೆಮುರಿ ಕಟ್ಟುವೆವು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಮುಂಬೈನ ಹಡಗು ಕಟ್ಟೆಯಲ್ಲಿ “ಐಎನ್ಎಸ್ ಇಂಫಾಲ್” ಹೆಸರಿನ ಕ್ಷಿಪಣಿ ವಿಧ್ವಂಸಕ ಯುದ್ಧ ನೌಕೆಯನ್ನು ನೌಕಾಪಡೆಯ ಪಶ್ಚಿಮ ಕಮಾಂಡ್ಗೆ ಹಸ್ತಾಂತರ ಮಾಡಿ ಅವರು ಮಾತನಾಡಿದರು.
ಈ ಪ್ರದೇಶದಲ್ಲಿ ಭಾರತ ಆರ್ಥಿಕವಾಗಿ ಮತ್ತು ವ್ಯೂಹಾತ್ಮಕವಾಗಿ ಪ್ರಬಲವಾಗುತ್ತಿದೆ. ಹೀಗಾಗಿ, ಕೆಲವೊಂದು ಶಕ್ತಿಗಳು ನಮ್ಮನ್ನು ನೋಡಿ ಹೊಟ್ಟೆಕಿಚ್ಚು ಪಡುವಂತಾಗಿದೆ ಎಂದರು ಸಚಿವ ರಾಜನಾಥ್ ಸಿಂಗ್. ಕೇಂದ್ರ ಸರ್ಕಾರ ಸರಕು ಸಾಗಣೆ ಹಡಗುಗಳ ಮೇಲಿನ ದಾಳಿಯನ್ನು ಗಂಭೀರವಾಗಿ ಪರಿಗಣಿಸಿದೆ. ಇತ್ತೀಚಿನ ದಾಳಿಗಳ ನಂತರ ಭಾರತೀಯ ನೌಕಾ ಪಡೆ ಅರಬೀ ಸಮುದ್ರ ವ್ಯಾಪ್ತಿಯಲ್ಲಿ ತನ್ನ ಗಸ್ತನ್ನು ಹೆಚ್ಚಿಸಿದೆ’ ಎಂದರು. “ಸಂಪೂರ್ಣ ಹಿಂದೂಮಹಾಸಾಗರ ಪ್ರದೇಶಕ್ಕೆ ಪ್ರಮುಖವಾಗಿ ಭಾರತವು ಭದ್ರತೆಯನ್ನು ಒದಗಿಸುತ್ತಿದೆ. ಪ್ರದೇಶದಲ್ಲಿ ಕಡಲ ವ್ಯಾಪಾರ ಸುರಕ್ಷತೆಯನ್ನು ಖಾತ್ರಿಪಡಿಸಲು ನಾವು ಮಿತ್ರ ರಾಷ್ಟ್ರಗಳೊಂದಿಗೆ ಕೆಲಸ ಮಾಡುತ್ತೇವೆ” ಎಂದರು.
ಪಶ್ಚಿಮ ನೌಕಾ ಕಮಾಂಡ್ಗೆ ಸೇರ್ಪಡೆಯಾದ “ಐಎನ್ಎಸ್ ಇಂಫಾಲ್”ನಲ್ಲಿ ಸೂಪರ್ಸಾನಿಕ್ ಬ್ರಹ್ಮೋಸ್ ಕ್ಷಿಪಣಿಯನ್ನು ಉಡಾಯಿಸುವ ಸಾಮರ್ಥ್ಯ ಸೇರಿ ಹಲವಾರು ವೈಶಿಷ್ಟéಗಳನ್ನು ಹೊಂದಿದೆ. ಇದೇ ಮೊದಲ ಬಾರಿಗೆ ಈಶಾನ್ಯ ರಾಜ್ಯದ ಹೆಸರನ್ನು ನೌಕೆಗೆ ಇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ