ಮಾಜಿ ಸಚಿವ ಕಾಗೋಡು ತಿಮ್ಮಪ್ಪರಿಗೆ ಕೋವಿಡ್ : ಬೇರೆಯವರಿಂದ ಮಾಹಿತಿ!

ಮಾಜಿ ಆರೋಗ್ಯ ಸಚಿವರಿಗೆ ಈ ಸ್ಥಿತಿ ಆದರೆ ಜನಸಾಮಾನ್ಯರ ಪಾಡೇನು ?

Team Udayavani, Jan 20, 2022, 7:23 PM IST

1-swwqrwq

ಸಾಗರ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಕೋವಿಡ್ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಅವರ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಪಡುವಂತೆ ಕಾಗೋಡು ಪುತ್ರಿ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಡಾ. ರಾಜನಂದಿನಿ ಮನವಿ ಮಾಡಿದ್ದಾರೆ.

ಗುರುವಾರ ತುರ್ತಾಗಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಗೋಡು ತಿಮ್ಮಪ್ಪ ಅವರಿಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರನ್ನು ನೋಡಲು, ಆರೋಗ್ಯ ವಿಚಾರಿಸಲು ಕಾರ್ಯಕರ್ತರು, ಅಭಿಮಾನಿಗಳು ಮನೆಗೆ ಬರಬಾರದು ಎಂದು ಅವರು ತಿಳಿಸಿದರು.

ಈಚೆಗೆ ಕಾಗೋಡು ತಿಮ್ಮಪ್ಪ ಅವರು ಮೀಸಲು ಅರಣ್ಯಕ್ಕೆ ಸಂಬಂಧಪಟ್ಟಂತೆ ಉಪವಿಭಾಗಾಧಿಕಾರಿಗಳ ಕಚೇರಿ, ಅರಣ್ಯ ಇಲಾಖೆ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಜೊತೆಗೆ ಚಿಕ್ಕನೆಲ್ಲೂರು, ಚಕ್ಕೋಡಿ ಗ್ರಾಮದಲ್ಲಿ ನಡೆದ ಮೀಸಲು ಅರಣ್ಯ ಸಮಾಲೋಚನಾ ಸಭೆಯಲ್ಲಿ ಸಹ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅನೇಕ ಜನರು ಅವರ ಸಂಪರ್ಕದಲ್ಲಿದ್ದರು. ಸಂಪರ್ಕದಲ್ಲಿದ್ದವರಿಗೆ ಕೋವಿಡ್ ಸಂಬಂಧಿ ಯಾವುದಾದರೂ ಲಕ್ಷಣ ಇದ್ದಲ್ಲಿ ತಕ್ಷಣ ವೈದ್ಯರ ಬಳಿ ತಪಾಸಣೆ ಮಾಡಿಸಿಕೊಳ್ಳುವಂತೆ ಹೇಳಿದರು.

ಬೇರೆಯವರಿಂದ ಮಾಹಿತಿ

ಕಾಗೋಡು ಮಂಗಳವಾರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದರು. ಪರೀಕ್ಷಾ ವರದಿಯು ಗುರುವಾರ ಬಂದಿದೆ. ಆದರೆ ಕಾಗೋಡು ತಿಮ್ಮಪ್ಪ ಅವರಿಗೆ ಪಾಸಿಟಿವ್ ಬಂದಿರುವುದನ್ನು ಆರೋಗ್ಯ ಇಲಾಖೆ ತಿಳಿಸಿಲ್ಲ. ಎಪಿಎಂಸಿ ಸದಸ್ಯ ಕೆ.ಹೊಳೆಯಪ್ಪ ಅವರು ಆಸ್ಪತ್ರೆಗೆ ಹೋದಾಗ ವಿಷಯ ಗೊತ್ತಾಗಿ ನಮಗೆ ತಿಳಿಸಿದ್ದಾರೆ. ಮಾಜಿ ಆರೋಗ್ಯ ಸಚಿವರಿಗೆ ಈ ಸ್ಥಿತಿ ಆದರೆ ಜನಸಾಮಾನ್ಯರ ಪಾಡೇನು ಎಂದು ಪ್ರಶ್ನಿಸಿದ ಅವರು, ಪಾಸಿಟಿವ್ ಬಂದಾಗ ಆರೋಗ್ಯ ಇಲಾಖೆ ಸಂಬಂಧಪಟ್ಟವರಿಗೆ ತಿಳಿಸಿ, ಎಚ್ಚರಿಸುವ ಕೆಲಸ ಮಾಡಬೇಕು ಎಂದರು.

ಹಿಂದಿನ ಎರಡೂ ಅಲೆಯಲ್ಲೂ ಕಾಗೋಡು ತಿಮ್ಮಪ್ಪ ಅವರಿಗೆ ಕೋವಿಡ್ ಲಕ್ಷಣ ಕಂಡು ಬಂದಿತ್ತು. ಆದರೆ ಗಂಭೀರ ಸ್ವರೂಪದ್ದಾಗಿರಲಿಲ್ಲ. ತಕ್ಷಣ ಅವರಿಗೆ ಚಿಕಿತ್ಸೆ ಕೊಡಿಸಲಾಗಿತ್ತು. ಈ ಸಾರಿ ಸಹ ಅಂತಹ ಗಂಭೀರವಾದ ಸಮಸ್ಯೆಯಿಲ್ಲ. ಮಾಮೂಲಿ ಜ್ವರ, ಕಫ ಇದ್ದು, ಮನೆಯಲ್ಲೆ ಕ್ವಾರಂಟೈನ್ ಆಗಿದ್ದು, ಶೀಘ್ರ ಗುಣಮುಖರಾಗುತ್ತಾರೆ ಎಂದು ಹೇಳಿದರು.

ಸುದ್ದಿ ಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಮುಖರಾದ ಮಧುಮಾಲತಿ, ಎನ್.ಲಲಿತಮ್ಮ, ವೆಂಕಟೇಶ್ ಮೆಳವರಿಗೆ, ಸಚಿನ್ ಹಾಜರಿದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.