ಪೌಷ್ಟಿಕ ಆಹಾರ ಪೂರೈಕೆ ಹಿಂದಿನಂತೆ ವಿಸ್ತರಣೆ

ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ

Team Udayavani, Jul 10, 2020, 5:41 AM IST

ಪೌಷ್ಟಿಕ ಆಹಾರ ಪೂರೈಕೆ ಹಿಂದಿನಂತೆ ವಿಸ್ತರಣೆ

ವಿಶೇಷ ವರದಿ-ಬೆಳ್ತಂಗಡಿ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ (ಐಟಿಡಿಪಿ)ಯ ಮೂಲಕ ಮೂಲ ನಿವಾಸಿ ಕೊರಗ ಮತ್ತು ಮಲೆಕುಡಿಯ ಕುಟುಂಬಗಳಿಗೆ ಉಚಿತ ಪೌಷ್ಟಿಕ ಆಹಾರ ಸಾಮಗ್ರಿ ಪೂರೈಕೆ ಯೋಜನೆಯ ಕಂತನ್ನು ಲಾಕ್‌ಡೌನ್‌ನಿಂದಾಗಿ 2 ತಿಂಗಳುಗಳ ಕಾಲ ವಿಸ್ತರಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕುಗಳಲ್ಲಿ ಕೊರಗ ಸಮುದಾಯದ 1,218 ಮತ್ತು ಮಲೆಕುಡಿಯ ಸಮುದಾಯದ 1,729 ಸೇರಿ ಒಟ್ಟು 2,497 ಕುಟುಂಬ ಗಳಿವೆ. ಜಿಲ್ಲೆಯಲ್ಲಿ ಕೊರಗ ಸಮುದಾಯಕ್ಕೆ 2008- 09ರಿಂದಲೇ ಈ ಯೋಜನೆ ಅನುಷ್ಠಾನಗೊಂಡಿದ್ದು, ಮಲೆಕುಡಿಯರಿಗೆ 2012- 13ರಿಂದ ಪೂರೈಸಲು ಆದೇಶಿಸಲಾಗಿತ್ತು.

ಹೊಸ ಅರ್ಜಿ ಪರಿಷ್ಕರಣೆ
ಆರಂಭದಲ್ಲಿ ವರ್ಷಕ್ಕೆ 6 ಕಂತುಗಳಲ್ಲಿ ಆಹಾರ ಪೂರೈಕೆ ಯಾಗುತ್ತಿದ್ದು, 2019-20ನೇ ಸಾಲಿನಲ್ಲಿ 4 ಕಂತುಗಳಿಗೆ ಕಡಿತಗೊಳಿಸಲಾಗಿತ್ತು. ಪ್ರಸಕ್ತ ಲಾಕ್‌ಡೌನ್‌ನಿಂದ ಮತ್ತೆ 6 ತಿಂಗಳುಗಳಿಗೆ ವಿಸ್ತರಿಸಲಾಗಿದೆ. 2020-21ನೇ ಸಾಲಿನಲ್ಲಿ ಪೌಷ್ಟಿಕ ಆಹಾರ ಯೋಜನೆಯ ಅನುಷ್ಠಾನಕ್ಕಾಗಿ ಇಲಾಖೆ ವತಿಯಿಂದ ಹೊಸದಾಗಿ ಅರ್ಜಿ ಕರೆಯಲಾಗಿತ್ತು. ಈ ಸಮುದಾಯದವರಾಗಿದ್ದರೂ 2.50 ಲಕ್ಷ ರೂ. ವಾರ್ಷಿಕ ಆದಾಯ ಮಿತಿಗಿಂತ ಹೆಚ್ಚಿದ್ದವರು, ಸರಕಾರಿ, ಅರೆಸರಕಾರಿ ಹುದ್ದೆಯಲ್ಲಿದ್ದವರು ಈ ಸೌಲಭ್ಯದಿಂದ ಹೊರಗುಳಿಯುತ್ತಾರೆ. ಕೋವಿಡ್ ಮುನ್ನೆಚ್ಚರಿಕೆ ಇತ್ಯಾದಿ ಕಾರಣಗಳಿಂದ ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕ ನಿಗದಿ ಪಡಿಸಿರಲಿಲ್ಲ.

ಜೂನ್‌ ತಿಂಗಳ ಆಹಾರ ವಿತರಣೆ
ಜೂನ್‌ ತಿಂಗಳ ಆಹಾರ ಸಾಮಗ್ರಿ ದೊರಕಿವೆ. 15 ಕೆ.ಜಿ. ಅಕ್ಕಿ (ಕಳೆದ ವರ್ಷ 8 ಕೆ.ಜಿ.), 1 ಕೆ.ಜಿ. ತೊಗರಿಬೇಳೆ (ಕಳೆದ ವರ್ಷ 3 ಕೆ.ಜಿ.) ತಲಾ 1 ಕೆ.ಜಿ. ಕಡಲೆಕಾಳು, ಶೇಂಗಾ ಬೀಜ, ಅಲಸಂಡೆ ಕಾಳು, ಹುರುಳಿ, ಹೆಸರುಕಾಳು, ಸಕ್ಕರೆ, ಬೆಲ್ಲ, 30 ಮೊಟ್ಟೆ, 1 ಲೀ. ಸೂರ್ಯಕಾಂತಿ ಎಣ್ಣೆ (ಕಳೆದ ವರ್ಷ 2 ಲೀ.), ಅರ್ಧ ಕೆ.ಜಿ. ನಂದಿನಿ ತುಪ್ಪ ನೀಡಲಾಗಿದೆ. ತೊಗರಿಬೇಳೆ, ಸೂರ್ಯಕಾಂತಿ ಎಣ್ಣೆ ಕಡಿತಗೊಳಿಸಿ ಅಕ್ಕಿ ಹೆಚ್ಚಿಸಲಾಗಿದೆ. ತಲಾ 1,490.93 ರೂ.ಗಳಷ್ಟು ಮೊತ್ತದ ಆಹಾರ ಸಾಮಗ್ರಿಗಳ ಕಿಟ್‌ಗಳನ್ನು ಸ್ಥಳೀಯ ಅಂಗನವಾಡಿ ಕೇಂದ್ರಗಳ ಮೂಲಕ ವಿತರಿಸಲಾಗುತ್ತದೆ.

ಬದಲಿ ಕಿಟ್‌ ಪೂರೈಕೆ
ನಾಲ್ಕು ಕಂತುಗಳಲ್ಲಿ ನೀಡುತ್ತಿದ್ದ ಪೌಷ್ಟಿಕ ಆಹಾರವನ್ನು ಲಾಕ್‌ಡೌನ್‌ ಕಾರಣಕ್ಕಾಗಿ ಈ ಹಿಂದಿನಂತೆ ವಿಸ್ತರಿಸಲಾಗಿದ್ದು, 45 ದಿನಗಳ ಅಂತರದ 6 ಕಂತುಗಳಾಗಿ ಒದಗಿಸಲಾಗುತ್ತದೆ. ಕೆಲವೆಡೆ ಕಳಪೆ ಆಹಾರ ಸರಬರಾಜಾಗಿರುವುದು ಗಮನಕ್ಕೆ ಬಂದಿದೆ. ಅಲ್ಲಿಗೆ ಬದಲಿ ಕಿಟ್‌ ಪೂರೈಸಲಾಗಿದೆ. ಮುಂದಿನ ದಿನಗಳಲ್ಲಿ ಸರಬರಾಜುದಾರರು ಫಲಾನುಭವಿಗಳ ಮುಖಂಡರಿಗೆ ಮತ್ತು ಸ್ಥಳೀಯ ಅಂಗನವಾಡಿಗೆ ಮುಂಗಡವಾಗಿ ದಿನಾಂಕ ತಿಳಿಸಿ ತೆರಳುವಂತೆ ಸೂಚನೆ ನೀಡಲಾಗುವುದು.
-ಹೇಮಲತಾ, ಯೋಜನ ಸಮನ್ವಯಾಧಿಕಾರಿ,
ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಮಂಗಳೂರು

ನೆರಿಯದಲ್ಲಿ ಕಳಪೆ ಆಹಾರ
ನೆರಿಯದ 180 ಕುಟುಂಬಗಳಿಗೆ ಜು.7ರಂದು ಕಳಪೆ ಪೌಷ್ಟಿಕ ಆಹಾರ ಸರಬರಾಜಾಗಿದೆ. 80 ಆಹಾರ ಪೊಟ್ಟಣಗಳಲ್ಲಿ ಕೊಳೆತ ಮೊಟ್ಟೆ, ಅಕ್ಕಿಯಲ್ಲಿ ಹುಳು ಪತ್ತೆಯಾಗಿದೆ. ತತ್‌ಕ್ಷಣ ಸ್ಥಳೀಯ ಸಮುದಾಯ ಮುಖಂಡರ ಉಪಸ್ಥಿತಿಯಲ್ಲಿ ಆಹಾರ ಕಿಟ್‌ ಹಿಂದಿರುಗಿಸಲಾಗಿದೆ. ಆಹಾರ ಸರಬರಾಜು ಮಾಡುವವರು ಮಾಹಿತಿ ನೀಡದೆ ಅಂಗನವಾಡಿಗಳಲ್ಲಿ ಶೇಖರಿಸಿಡುವುದರಿಂದ ಸಮಯಕ್ಕೆ ಸರಿಯಾಗಿ ವಿತರಣೆಯಾಗದೆ ಆಹಾರ ವಸ್ತು ಹಾಳಾಗಿ, ಪೋಲಾಗುತ್ತಿದೆ.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.