ಸಿಕ್ಕೀತೇ ರಾಜ್ಯಕ್ಕೆ ನ್ಯಾಯ? ಕೇಂದ್ರ ಬಜೆಟ್‌ನಲ್ಲಿ ಕನ್ನಡಿಗರ ಹಲವು ನಿರೀಕ್ಷೆ

ಮೂಲಸೌಕರ್ಯಕ್ಕೆ ಉತ್ತೇಜನ, ಜಿಎಸ್‌ಟಿ ಪರಿಹಾರ

Team Udayavani, Jan 31, 2022, 6:50 AM IST

ರಾಜ್ಯಕ್ಕೆ ಕೇಂದ್ರದಿಂದ ಬಜೆಟ್‌ ಭರಪೂರ ಯೋಜನೆಗಳ ನಿರೀಕ್ಷೆ

ಬೆಂಗಳೂರು: ರಾಜ್ಯದ ಪಾಲಿನ ಜಿಎಸ್‌ಟಿ ಪರಿಹಾರ ಸಿಕ್ಕೀತೇ? ಕೃಷ್ಣ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳಿಗೆ ರಾಷ್ಟ್ರೀಯ ಮಾನ್ಯತೆ ದೊರೆಯಬಹುದೇ? ರಾಜ್ಯದ ಪಾಲಿನ ಅನುದಾನ ಹೆಚ್ಚಳವಾದೀತೇ? ಹೊಸ ರೈಲ್ವೇ ಯೋಜನೆಗಳೇನಾದರೂ ಘೋಷಣೆಯಾಗಲಿವೆಯೇ?

ಇಂಥ ಹಲವಾರು ನಿರೀಕ್ಷೆಗಳೊಂದಿಗೆ ರಾಜ್ಯವು ಕೇಂದ್ರದ ಬಜೆಟ್‌ ಅನ್ನು ಎದುರು ನೋಡುತ್ತಿದೆ. ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ  ನಿರ್ಮಲಾ ಸೀತಾರಾಮನ್‌ ಅವರ ಬಜೆಟ್‌ನಲ್ಲಿ ರಾಜ್ಯಕ್ಕೆ ಭರಪೂರ ಯೋಜನೆಗಳು ಹರಿದುಬರಬಹುದು. ಜತೆಗೆ ಮುಂದಿನ ವರ್ಷವೇ ರಾಜ್ಯದಲ್ಲಿ ಚುನಾವಣೆ ಇರುವುದರಿಂದ ದೊಡ್ಡ ಕೊಡುಗೆಗಳ  ನಿರೀಕ್ಷೆ ಜನರಲ್ಲಿದೆ.

ಜಿಎಸ್‌ಟಿ ಪರಿಹಾರ ಹೆಚ್ಚಳ
ಪ್ರಮುಖವಾಗಿ ದೇಶದಲ್ಲಿ ಅತಿ ಹೆಚ್ಚು ಜಿಎಸ್‌ಟಿ ಒದಗಿಸುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕವೂ ಒಂದು, ದೇಶದ ಶೇ 48 ರಷ್ಟು ಜಿಎಸ್‌ಟಿ ಹಣವನ್ನು ದಕ್ಷಿಣದ ನಾಲ್ಕು ರಾಜ್ಯಗಳು ನೀಡುತ್ತಿವೆ. ಕೇಂದ್ರ ಸರ್ಕಾರ ಜನಸಂಖ್ಯೆ ಆಧಾರದಲ್ಲಿ ಜಿಎಸ್‌ಟಿ ಹಣವನ್ನು ರಾಜ್ಯಗಳಿಗೆ ಹಂಚಿಕೆ ಮಾಡುತ್ತಿದ್ದು, ರಾಜ್ಯಕ್ಕೆ ಒಂದು ರೂಪಾಯಿಯಲ್ಲಿ 40 ಪೈಸೆ ದೊರೆಯುತ್ತಿದೆ. ಉತ್ತರ ರಾಜ್ಯಗಳಾದ ಯುಪಿಗೆ 4.80 ರೂ. ಬಿಹಾರ್‌ಗೆ 3.60 ರೂ. ದೊರೆಯುತ್ತಿದೆ. ಇದರಿಂದ ರಾಜ್ಯದ ಆದಾಯ ಬೇರೆ ರಾಜ್ಯಗಳ ಪಾಲಾಗುತ್ತಿದ್ದು, ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದು, ರಾಜ್ಯದ ಪಾಲಿನ ಜಿಎಸ್‌ಟಿ ಪರಿಹಾರ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇದೆ. ಈ ಬಜೆಟ್‌ನಲ್ಲಿ ಹೆಚ್ಚಿನ ಜಿಎಸ್‌ಟಿ ಪರಿಹಾರ ದೊರೆಯುವ ನಿರೀಕ್ಷೆ ಇದೆ.

ಪರ್ಯಾಯ ಆದಾಯದ ನಿರೀಕ್ಷೆ
15 ನೇ ಹಣಕಾಸು ಆಯೋಗ ಬಂದ ನಂತರ ರಾಜ್ಯಕ್ಕೆ ಬರುವ ಆದಾಯದ ಪ್ರಮಾಣ ಕಡಿಮೆಯಾಗಿದೆ. ಶೇಕಡಾ 10 ರಷ್ಟು ರಾಜ್ಯಕ್ಕೆ ಬರುವ ಪಾಲು ಕಡಿಮೆಯಾಗಿದ್ದು, ಅದನ್ನು ಕೇಂದ್ರ ಸರ್ಕಾರ ಬೇರೆ ಯೋಜನೆಗಳ ಮೂಲಕ ಪರ್ಯಾಯವಾಗಿ ರಾಜ್ಯಕ್ಕೆ ನೆರವು ನೀಡಬೇಕೆಂಬ ಬೇಡಿಕೆ.

ಕರ್ನಾಟಕ ಸರ್ಕಾರದ ಆದಾಯ ಬೇರೆ ರಾಜ್ಯಗಳಿಗೆ ಹೋಗುತ್ತಿದ್ದು, ಕರ್ನಾಟಕ ಸರ್ಕಾರ ಅಭಿವೃದ್ಧಿ ಯೋಜನೆಗಳು ಮತ್ತು ರಾಜ್ಯ ನಿರ್ವಹಣೆಗೆ 4 ಲಕ್ಷ ಕೋಟಿ ಸಾಲ ಮಾಡಿದೆ. ಎರಡು ವರ್ಷದಲ್ಲಿ 86 ಸಾವಿರ ಕೋಟಿ ಬಡ್ಡಿ ಕಟ್ಟಲಾಗಿದೆ. ಅದ್ದರಿಂದ ರಾಜ್ಯಕ್ಕೆ ಪರ್ಯಾಯ ಆರ್ಥಿಕ ಸಹಾಯ ಮಾಡಬೇಕೆಂಬ ಬೇಡಿಕೆ ರಾಜ್ಯ ಸರ್ಕಾರದ್ದಾಗಿದೆ.

ಇದನ್ನೂ ಓದಿ:ಲಾಠಿ ಹಿಡಿದು ಯುದ್ಧಕ್ಕೆ ಮುಂದಾಗಿರಲಿಲ್ಲ; ಪಾದಯಾತ್ರೆ ಹೊರಟಿದ್ದೆವಷ್ಟೆ : ಡಿಕೆಶಿ

ಪ್ರವಾಹ ಪರಿಹಾರದ ನಿರೀಕ್ಷೆ
ರಾಜ್ಯದಲ್ಲಿ ಸತತ ಮೂರು ವರ್ಷಗಳಿಂದ ಪ್ರವಾಹ ಉಂಟಾಗಿದ್ದು, ಕೇಂದ್ರದ ಎನ್‌ಡಿಆರ್‌ಎಫ್ ನಿಯಮಗಳ ಪ್ರಕಾರ ರಾಜ್ಯ ಸರ್ಕಾರಕ್ಕೆ 62 ಸಾವಿರ ಕೋಟಿ ಪರಿಹಾರ ಬರಬೇಕಿತ್ತು. ಆದರೆ, ಇಲ್ಲಿವರೆಗೂ ಮೂರು ವರ್ಷದಲ್ಲಿ 3200 ಕೋಟಿ ಮಾತ್ರ ಬಿಡುಗಡೆ ಮಾಡಿದ್ದು, ಇದರಿಂದ ಪ್ರವಾಹಕ್ಕೆ ಸಿಲುಕಿ ಮನೆ ಹಾಗೂ ಆಸ್ತಿ ಪಾಸ್ತಿ ಕಳೆದುಕೊಂಡವರನ್ನು ಪುನರ್‌ ವಸತಿ ಮಾಡಲು ಕೇಂದ್ರದ ಹಣಕಾಸಿನ ನೆರವಿನ ಅಗತ್ಯವಿದೆ. ಎನ್‌ಡಿಆರ್‌ಎಫ್ ಪ್ರವಾಹ ಪರಿಹಾರದ ಹಣವನ್ನು ಪುನರ್ವಸತಿ ಯೋಜನೆಗಳಿಗೆ ಅನುದಾನ ನೀಡಬೇಕೆಂಬ ಬೇಡಿಕೆ ಹಾಗೂ ನಿರೀಕ್ಷೆ ಇದೆ.

ಪ್ರಧಾನ ಮಂತ್ರಿ ಫ‌ಸಲ್‌ಭಿಮಾ ಯೋಜನೆ ಪರಿಹಾರ
ರೈತರಿಗೆ ಅನುಕೂಲ ಕಲ್ಪಸಲು ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಫ‌ಸಲ್‌ ಭಿಮಾ ಯೋಜನೆ ಜಾರಿಗೊಳಿಸಿದೆ. ಈ ಯೋಜನೆಗೆ ರಾಜ್ಯದ ರೈತರು ಕಳೆದ ವರ್ಷ 26 ಸಾವಿರ ಕೋಟಿ ರೂ. ತಮ್ಮ ಪಾಲಿನ ವಂತಿಗೆ ಕಟ್ಟಿದ್ದಾರೆ. ಆದರೆ, ವಿಮಾ ಕಂಪನಿಯಿಂದ ರೈತರಿಗೆ ಕೇವಲ 4000 ಕೋಟಿ ಮಾತ್ರ ನೀಡಲಾಗಿದೆ. ಇದರಿಂದ ರೈತರಿಗೆ ಅನುಕೂಲಕ್ಕಿಂತ ನಷ್ಟವೇ ಆಗಿದೆ. ಹೀಗಾಗಿ ಈ ಯೋಜನೆ ಮೂಲಕ ರೈತರಿಗೆ ವಿಮಾ ಹಣ ದೊರಕಿಸಿಕೊಡುವ ನಿಟ್ಟಿನಲ್ಲಿ ಬಜೆಟ್‌ನಲ್ಲಿ ಘೋಷಣೆಯಾಗುತ್ತದೆ ಎಂಬ ನಿರೀಕ್ಷೆ ಇದೆ.

ರಾಷ್ಟ್ರೀಯ ಹೆದ್ದಾರಿಗಳ ಪಾಲು
ರಾಷ್ಟ್ರೀಯ ಹೆದ್ದಾರಿಗೆ ನಮ್ಮ ರಾಜ್ಯದ ಯೋಜನೆಗಳಿಗೆ ಸಂಪೂರ್ಣ ಹಣ ಬಿಡುಗಡೆಡಯಾಗಿಲ್ಲ. ಕಳೆದ ಮೂರು ವರ್ಷದಲ್ಲಿ ಶೇ 60 ರಷ್ಟು ಹಣ ಮಾತ್ರ ಬಂದಿದೆ. ಕೊರೊನಾ ಹೆಸರಿನಲ್ಲಿ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳನ್ನು ಘೋಷಣೆ ಮಾಡಿದ್ದರೂ, ಹಣ ಬಿಡುಗಡೆಯಾಗಿಲ್ಲ. ಹೀಗಾಗಿ ಈ ಬಜೆಟ್‌ನಲ್ಲಿ ರಾಜ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ದೊರೆಯಲಿದೆ ಎಂಬ ನಿರೀಕ್ಷಿ ಇದೆ.

ಬಿಸಿಯೂಟ ಯೋಜನೆಗೆ ಅನುದಾನ ನಿರೀಕ್ಷೆ
ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಕಳೆದ ಮೂರು ವರ್ಷದಿಂದ ಕೇಂದ್ರದಿಂದ ಬರುವ ಹಣ ಬರುತ್ತಿಲ್ಲ. ಇದರಿಂದ ರಾಜ್ಯ ಸರ್ಕಾರದ ಮೇಲೆ ಸಂಪೂರ್ಣ ಆರ್ಥಿಕ ಹೊರೆಯಾಗುತ್ತಿದೆ. ಅದನ್ನು ನಿಭಾಯಿಸಲು ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುವಂತಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಬಜೆಟ್‌ನಲ್ಲಿ ಬಿಸಿಯೂಟ ಯೋಜನೆಗೆ ಅನುದಾನದ ಭರವಸೆ ನೀಡುವ ನೀರಿಕ್ಷೆ ಇಟ್ಟುಕೊಳ್ಳಲಾಗಿದೆ.

ಆರೋಗ್ಯ ಕ್ಷೇತ್ರಕ್ಕೆ ಬೇಡಿಕೆ
ಕೊರೋನಾ ಸಾಂಕ್ರಾಮಿಕದ ಮೂರನೇ ಅಲೆ ಬಂದಿರುವುದರಿಂದ ಆರೋಗ್ಯ ಕ್ಷೇತ್ರದಲ್ಲಿ ಮೂಲ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಆಕ್ಸಿಜನ್‌ ಘಟಕ, ಪಿಎಚ್‌ಸಿಗಳಲ್ಲಿ ವೆಂಟಿಲೇಟರ್‌ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಒದಗಿಸುವ ಭರವಸೆ ಇಟ್ಟುಕೊಳ್ಳಲಾಗಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಕೇಂದ್ರದಿಂದ ಹೆಚ್ಚಿನ ಅನುದಾನದ ನಿರೀಕ್ಷೆ ಇಟ್ಟುಕೊಂಡಿದೆ.

ನೀರಾವರಿಗೆ ನಿರೀಕ್ಷೆ
ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಬಹಳಷ್ಟು ನಿರೀಕ್ಷೆಗಳನ್ನು ರಾಜ್ಯ ಸರ್ಕಾರ ಇಟ್ಟುಕೊಂಡಿದೆ. ವಿಶೇಷವಾಗಿ ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳನ್ನಾಗಿ ಘೋಷಣೆ ಮಾಡಲಾಗುತ್ತದೆ ಎಂಬ ನೀರೀಕ್ಷೆ ಇದೆ. ಇದರಿಂದ ಎರಡೂ ಯೋಜನೆಗಳಿಗೂ ಒಟ್ಟು ಯೋಜನಾ ವೆಚ್ಚದ ಶೇ 60 ರಷ್ಟು ಹಣಕಾಸಿನ ನೆರವು ಕೇಂದ್ರ ಸರ್ಕಾರದಿಂದ ದೊರೆಯಲಿದೆ.

ಜೊತೆಗೆ ಮೇಕೆದಾಟು ಹಾಗೂ ಮಹದಾಯಿ ಯೋಜನೆಗಳಿಗೆ ಕೇಂದ್ರ ಪರಿಸರ ಇಲಾಖೆಯ ಅನುಮತಿ ನೀಡುವ ಬಗ್ಗೆ ಬಜೆಟ್‌ನಲ್ಲಿ ಭರವಸೆ ನೀಡಬಹುದೆಂಬ ನಿರೀಕ್ಷೆ ರಾಜ್ಯದ್ದಾಗಿದೆ.

ವಿವಿಧ ವಲಯದಲ್ಲಿ ರಾಜ್ಯಕ್ಕೆ ಬಹಳಷ್ಟು ನಿರೀಕ್ಷೆಗಳಿವೆ, ನೆನೆಗುದಿಗೆ ಬಿದ್ದಿರುವ ರೈಲ್ವೆ ಯೋಜನೆಗಳು, ಜಿಎಸ್‌ಟಿ ಪರಿಹಾರ ಹೆಚ್ಚಳ ಮಾಡುವ ನಿರೀಕ್ಷೆಯಲ್ಲಿ ನಾವಿದ್ದೇವೆ. ಈ ಸರಿ ನಾವು ಆಶಾದಾಯಕವಾಗಿದ್ದೇವೆ.
-ಜಿ.ಸಿ. ಚಂದ್ರಶೇಖರ, ರಾಜ್ಯಸಭಾ ಸದಸ್ಯ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.