ಚುರುಕುಗೊಂಡ ಮಳೆ: ವಿವಿಧೆಡೆ ಕೃಷಿ, ಮನೆಗೆ ಹಾನಿ


Team Udayavani, Jun 13, 2020, 6:01 AM IST

ಚುರುಕುಗೊಂಡ ಮಳೆ: ವಿವಿಧೆಡೆ ಕೃಷಿ, ಮನೆಗೆ ಹಾನಿ

ಬೆಳ್ತಂಗಡಿ: ಮುಂಗಾರು ಆಗಮನಕ್ಕೂ ಮುನ್ನವೇ ಗಾಳಿ ಮಳೆಯಾಗುತ್ತಿರುವ ಪರಿಣಾಮ ತಾಲೂಕಿನ ಕೆಲವೆಡೆ ಗುರುವಾರ ಸಂಜೆ ಮನೆ, ಅಡಿಕೆ ತೋಟಗಳಿಗೆ ಹಾನಿ ಸಂಭವಿಸಿವೆ.

ಉಪ್ಪಿನಂಗಡಿ-ಗುರುವಾಯನಕೆರೆ ರಸ್ತೆಯಲ್ಲಿ ಕುಪ್ಪೆಟ್ಟಿ ಸಮೀಪ ಬೃಹದಾಕಾರದ ಮರ ಬಿದ್ದು ರಸ್ತೆ ಸಂಚಾರಕ್ಕೆ ಅಡ್ಡಿಯಾಯಿತು. ಬಳಿಕ ಸ್ಥಳೀಯರು ಮರ ತೆರವುಗೊಳಿಸಿ ಸಂಚಾರಕ್ಕೆ ಅನುವುಮಾಡಿಕೊಟ್ಟರು.

ಮುಂಡಾಜೆ: ಕೆಸರುಮಯ ರಸ್ತೆ
ಬೆಳ್ತಂಗಡಿ ತಾ| ನ ಮಿತ್ತಬಾಗಿಲು ಹಾಗೂ ಮಲವಂತಿಗೆ ಗ್ರಾ.ಪಂ.ವ್ಯಾಪ್ತಿಯ ಕೊಲ್ಲಿ-ಬೊಳ್ಳಾಜೆ -ಗಂಪದ ಕೊಡಿ- ಪರಾರಿಗುಡ್ಡೆ-ಪಣಿಕ್ಕಲ್ಲು ಕೂಡು ರಸ್ತೆಯು ಮಳೆಗೆ ಅಲ್ಲಲ್ಲಿ ಸಂಪೂರ್ಣ ಕೆಸರುಮಯವಾಗಿ ವಾಹನ ಸಂಚಾರಕ್ಕೆ ದುಸ್ತರವೆನಿಸಿದೆ. ಇತ್ತೀಚೆಗೆ ಮೊದಲ ಮಳೆಗೆ ಹಾಳಾಗಿದ್ದ ಈ ರಸ್ತೆಯನ್ನು ಶ್ರಮದಾನದ ಮೂಲಕ ಸ್ಥಳೀಯರು ದುರಸ್ತಿ ಪಡಿಸಿ ಸಂಚಾರಕ್ಕೆ ಅನುಕೂಲವಾಗುವಂತೆ ಮಾಡಿದ್ದರು. ಈಗ ಮತ್ತೆ ಮಳೆಗೆ ಹಾಳಾಗಿದೆ. ಬೊಳ್ಳಾಜೆ ಎಂಬಲ್ಲಿ ಮೋರಿಯಲ್ಲಿ ಕಸ ಕಡ್ಡಿ ಸಿಲುಕುವುದರಿಂದ ಆಗಾಗ ಮೋರಿ ತುಂಬಿ ರಸ್ತೆ ಮೇಲೆಯೇ ನೀರು ಹರಿಯುತ್ತದೆ ಎಂದು ಸ್ಥಳೀಯ ವೀರಪ್ಪ ಗೌಡ ತಿಳಿಸಿದ್ದಾರೆ.

ಬಂಟ್ವಾಳ: ಗಾಳಿ ಮಳೆಗೆ ಹಾನಿ
ಬಂಟ್ವಾಳ ತಾಲೂಕಿನಾದ್ಯಂತ ಗುರುವಾರ ಸುರಿದ ಗಾಳಿ ಮಳೆಯ ಹಿನ್ನೆಲೆಯಲ್ಲಿ ವಿವಿಧೆಡೆ ಸಣ್ಣಪುಟ್ಟ ಹಾನಿ ಸಂಭವಿಸಿದೆ.

ಪಂಜಿಕಲ್ಲು ಗ್ರಾಮದ ಜಯ ಅವರ ವಾಸ್ತವ್ಯದ ಮನೆ ಭಾಗಶಃ ಹಾನಿಯಾಗಿದೆ. ಕಾವಳಪಡೂರು ಗ್ರಾಮದ ಕಮಲ ಸುಂದರ ಹಾಗೂ ಕಮಲ ತನಿಯಪ್ಪ, ಭೋಜ ಪೂಜಾರಿ ಅವರ ಭಾಗಶಃ ಹಾನಿಯಾಗಿದೆ. ಕಾರಿಂಜಕ್ರಾಸ್‌ ಬಳಿ ಟ್ರಾನ್ಸ್‌ಫಾರ್ಮರ್‌ ಬಿದ್ದು ಹಾನಿಯಾಗಿದೆ.

ಅರಂತೋಡು ಗಾಳಿ ಮಳೆ
ಅರಂತೋಡು: ಇಲ್ಲಿನ ಪೇಟೆಯ ತೆಕ್ಕಿಲ್‌ ಕಾಂಪ್ಲೆಕ್ಸ್ ಮುಂಭಾಗದಲ್ಲಿರುವ ಮರ ಗಾಳಿಗೆ ಉರುಳಿದೆ. ಗಾಳಿ ಬರುವ ಸ್ವಲ್ಪ ಸಮಯದ ಮೊದಲು ಉದ್ಯಮಿ ನವಾಜ್‌ ಅವರು ಕಾರನ್ನು ಆ ಪ್ರದೇಶದಿಂದ ತೆಗೆದರು. ಹಾಗಾಗಿ ಯಾವುದೇ ಹಾನಿ ಸಂಭವಿಸಿಲ್ಲ.

ಶುಕ್ರವಾರವೂ ಮಳೆ ಮುಂದುವರಿದಿದೆ. ಗುರುವಾರ ಸಂಜೆಯ ವೇಳೆಗೆ ಮಳೆಯಾದ್ದರಿಂದ ಅಲ್ಲಲ್ಲಿ ವಿದ್ಯುತ್‌ ಪೂರೈಕೆ ಕಡಿತಗೊಂಡಿತ್ತು. ಕೆಲವೊಂದೆಡೆ ನೀರಿನ ಚರಂಡಿಗಳು ಮುಚ್ಚಿ ನೀರು ರಸ್ತೆಯಲ್ಲೇ ಹರಿಯುತ್ತಿರುವ ದೃಶ್ಯಗಳು ಕೂಡ ಕಂಡುಬಂದಿದೆ.

ಪುತ್ತೂರು- ಸುಳ್ಯಸಾಧಾರಣ ಮಳೆ
ಪುತ್ತೂರು: ಪುತ್ತೂರು-ಸುಳ್ಯ ತಾಲೂಕಿನಲ್ಲಿ ಜೂ. 11ರಂದು ರಾತ್ರಿ ಹಾಗೂ ಜೂ. 12ರಂದು ಸಾಧಾರಣ ಮಳೆ ಸುರಿದಿದೆ.

ಕಡಬ: ಇಲ್ಲಿನ‌ ಅಂಗಡಿಮನೆ ಕಾಲನಿಯಲ್ಲಿ ಶುಕ್ರವಾರ ಮಧ್ಯಾಹ್ನ ಮಳೆ ಸುರಿಯುತ್ತಿದ್ದ ವೇಳೆ ಸುರೇಶ್‌ ಅವರ ಮನೆಯ ಮೇಲೆ ಮರವೊಂದು ಮುರಿದುಬಿದ್ದ ಮನೆಯ ಛಾವಣಿಗೆ ಹಾನಿಯಾಗಿದೆ. ಕಂದಾಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.