Expert’s Opinion: ಗ್ಯಾರಂಟಿ ಭಾರ ಇಲ್ಲದಿದ್ದರೆ ಇನ್ನೂ ಉತ್ತಮ ಆಗಿರುತ್ತಿತ್ತು


Team Udayavani, Feb 16, 2024, 11:44 PM IST

MONEY GONI

14 ಬಜೆಟ್‌ ಮಂಡಿಸಿದ ಅನುಭವ ವಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 15ನೇ ಬಜೆಟನ್ನೂ ಮೇಲ್ನೋಟಕ್ಕೆ ಹೊಸ ತೆರಿಗೆಗಳ ಪ್ರಸ್ತಾಪವಿಲ್ಲದೆ ಸರಿದೂಗಿಸುವ ಪ್ರಯತ್ನ ಮಾಡಿದ್ದಾರೆ. ಆರ್ಥಿಕತೆಯ ಬಗ್ಗೆ ಅಪಾರ ಜ್ಞಾನವುಳ್ಳ ಅವರಿಗೆ ಗ್ಯಾರಂಟಿ ಎಂಬ ‘ರಾಜಕೀಯ ಭಾರ’ ಇಲ್ಲದಿದ್ದರೆ ಮತ್ತಷ್ಟು ಪ್ರಗತಿಪರ ಬಜೆಟ್‌ ಮಂಡಿಸಿರುತ್ತಿದ್ದರೇನೋ.

ಗ್ಯಾರಂಟಿಯೂ ಸೇರಿದಂತೆ ಕಲ್ಯಾಣ ಕಾರ್ಯಕ್ರಮಗಳಿಗೆ 1.20 ಲಕ್ಷ ಕೋಟಿ ರೂ. ಗಳನ್ನು ತೊಡಗಿಸುವ ಪ್ರಸ್ತಾಪ ಮಾಡುವ ಮೂಲಕ ಒಟ್ಟಾರೆ ಬಜೆಟ್‌ನ ಶೇ.32.60ರಷ್ಟನ್ನು ಬಳಕೆ ಮಾಡುತ್ತಿದ್ದಾರೆ. ರಾಜ್ಯವನ್ನು ಹೆಚ್ಚು ಅಭಿವೃದ್ಧಿಯತ್ತ ಕೊಂಡೊಯ್ಯಬಹುದಾದ ಬಂಡವಾಳ ವೆಚ್ಚಕ್ಕಾಗಿ 55877 ಕೋಟಿ ರೂ. ಅಂದರೆ ಶೇ.15.15 ರಷ್ಟನ್ನು ಮಾತ್ರ ತೆಗೆದಿರಿಸಿದ್ದು, ಬಜೆಟ್‌ನ 1.05 ಲಕ್ಷ ಕೋಟಿ ರೂ. (ಶೇ.28.57) ಸಾಲ ಪಡೆಯುತ್ತಿದ್ದಾರೆ. ಹಳೆ ಸಾಲ ಮರುಪಾವತಿಗೆ 24974 ಕೋಟಿ ರೂ. ಮೀಸಲಿಟ್ಟಿದೆ. ಇದೆಲ್ಲವೂ ಗ್ಯಾರಂಟಿಸಹಿತ ಇತರೆ ಕಲ್ಯಾಣ ಕಾರ್ಯಕ್ರಮಗಳ ತೆಗೆದುಕೊಂಡಿರುವ ಸವಾಲನ್ನು ತೋರಿಸುತ್ತಿದೆ. ಎಲ್ಲ ಸವಾಲುಗಳ ನಡುವೆ ಕರ್ನಾಟಕವು ಜಿಎಸ್‌ಟಿ ಸಂಗ್ರಹಣೆಯಲ್ಲಿ 2ನೇ ಸ್ಥಾನದಲ್ಲಿದೆ. ಜನವರಿ ಅಂತ್ಯದವರೆಗೆ 58180 ಕೋಟಿ ರೂ. ಎಸ್‌ಜಿಎಸ್‌ಟಿ ಸಂಗ್ರಹವಾಗಿದ್ದು, ಕಳೆದ ಸಾಲಿಗಿಂತ ಜಿಎಸ್‌ಟಿ ಸಂಗ್ರಹಣೆಯ ಬೆಳವಣಿಗೆ ದರವು ಶೇ.14 ರಷ್ಟಾಗಿದೆ. ಬರಗಾಲದಿಂದ 35 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಂಭವಿಸಿದೆ ಹಾಗೂ ಕೇಂದ್ರ ಸರ್ಕಾರಕ್ಕೆ 18 ಸಾವಿರ ಕೋಟಿ ರೂ.ಗಳ ಪರಿಹಾರ ಕೇಳಿರುವುದಾಗಿ ಅವರೇ ಬಜೆಟ್‌ನಲ್ಲಿ ಪ್ರಸ್ತಾಪಿಸಿದ್ದಾರೆ. ಕೇಂದ್ರ ಸರ್ಕಾರ ಎನ್‌ಡಿಆರ್‌ಎಫ್ನಿಂದ ಬರ ಪರಿಹಾರ ಸಿಕ್ಕರೆ ರಾಜ್ಯ ಸರ್ಕಾರ ಕೊಂಚ ಉಸಿರಾಡಬಹುದು.

ಜಿಎಸ್‌ಟಿ ನ್ಯಾಯಮಂಡಳಿಯಿಂದ ನಿಟ್ಟುಸಿರು: ಜಿಎಸ್‌ಟಿ ಮೇಲ್ಮನವಿ ನ್ಯಾಯಮಂಡಳಿಯ 2 ರಾಜ್ಯಪೀಠ ಸ್ಥಾಪನೆ ಮಾಡುವುದರಿಂದ ಪ್ರಕರಣಗಳ ತ್ವರಿತ ವಿಲೇವಾರಿಗೆ ಸಹಾಯ ಆಗಲಿದೆ.

ದಾರಿ ಸುಲಭದ್ದಲ್ಲ: ವಾಣಿಜ್ಯ ತೆರಿಗೆ ಸಂಗ್ರಹಣೆ 1.10 ಲಕ್ಷ ಕೋಟಿ ರೂ. ಗುರಿ ನಿಗದಿಪಡಿಸಿದೆ. ನೋಂದಣಿ ಮತ್ತು ಮುದ್ರಾಂಕ ಶುಲ್ಕವು ಜನವರಿ ಅಂತ್ಯದವರೆಗೆ 15,692 ಕೋಟಿ ರೂ. ಸಂಗ್ರಹವಾಗಿದ್ದು ,ಶೇ.10 ರಷ್ಟು ಬೆಳವಣಿಗೆ ಆಗಿರುವ ಧೈರ್ಯದಿಂದ 2024-25 ರಲ್ಲಿ 26 ಸಾವಿರ ಕೋಟಿ ರೂ. ಸಂಗ್ರಹಣೆ ಗುರಿ ಕೊಡಲಾಗಿದೆ. ಅಬಕಾರಿಯಿಂದ 28,181 ಕೊಟಿ ರೂ. ಸ್ವೀಕೃತವಾಗಿದ್ದು, ಐಎಂಎಲ್‌, ಬಿಯರ್‌ ಸ್ಲಾಬ್‌ ಪರಿಷ್ಕರಣೆಯೂ ಸೇರಿದಂತೆ 38,225 ಕೋಟಿ ರೂ. ರಾಜಸ್ವ ಸಂಗ್ರಹಣೆ ಗುರಿ ಇಟ್ಟುಕೊಂಡಿದ್ದಾರೆ. ಸಾರಿಗೆಯಲ್ಲೂ ಶೇ.19 ರಷ್ಟು ಬೆಳವಣಿಯಾಗಿದ್ದು, 13 ಸಾವಿರ ಕೋಟಿ ರೂ. ಸಂಗ್ರಹಣೆ ಗುರಿ ಕೊಟ್ಟಿದೆ. ಇದನ್ನು ಸಾಧಿಸುವ ದಾರಿಯಂತೂ ಸುಲಭದ್ದಲ್ಲ.

ಎಸ್‌.ನಂಜುಂಡ ಪ್ರಸಾದ್‌ , ಕರ್ನಾಟಕ ರಾಜ್ಯ ತೆರಿಗೆ ಸಲಹೆಗಾರರ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.