Kerala: ಉಗ್ರರು, ಮತಾಂಧ ಶಕ್ತಿಗಳಿಗೆ ಆಶ್ರಯ ಸಲ್ಲದು


Team Udayavani, Oct 29, 2023, 11:28 PM IST

pinarayi vijayan

ದೇವರ ಸ್ವಂತ ನಾಡು ಕೇರಳದಲ್ಲಿ ಮತ್ತೂಮ್ಮೆ ಬಾಂಬ್‌ಗಳು ಸ್ಫೋಟಿಸಿ, ರಾಜ್ಯ ಮಾತ್ರವಲ್ಲದೆ ಇಡೀ ದೇಶದ ಜನರಲ್ಲಿ ಆತಂಕ ಸೃಷ್ಟಿಸಿದೆ. ಕ್ರೈಸ್ತರ ಪ್ರಾರ್ಥನಾ ಮಂದಿರದಲ್ಲಿ ಈ ಸರಣಿ ಸ್ಫೋಟ ಸಂಭವಿಸಿ, ಇಬ್ಬರು ಸಾವನ್ನಪ್ಪಿದ್ದರೆ 45 ಮಂದಿ ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಮುಂದೆ ಶರಣಾಗಿರುವ ಕ್ರೈಸ್ತ ಧರ್ಮವೊಂದರ ಗುಂಪಿಗೆ ಸೇರಿದ ಆರೋಪಿಯೋರ್ವ ಧರ್ಮದೊಳಗಿನ ಗುಂಪು ಸಂಘರ್ಷದ ಕಾರಣಕ್ಕಾಗಿ ಈ ಕೃತ್ಯ ಎಸಗಿರುವುದಾಗಿ ಹೇಳಿಕೊಂಡಿದ್ದಾನೆ. ಮೇಲ್ನೋಟಕ್ಕೆ ಆರೋಪಿ ನೀಡಿರುವ ಹೇಳಿಕೆ ನಿಜವಾಗಿ ರುವಂತೆ ಕಾಣುತ್ತಿದ್ದರೂ ಇದರ ಹಿಂದೆ ಯಾವುದಾದರೂ ಭಯೋತ್ಪಾದನ ಸಂಘಟನೆಯ ಕೈವಾಡ ಅಥವಾ ಇನ್ನಾವುದೇ ಷಡ್ಯಂತ್ರವಿದೆಯೇ ಎಂಬುದು ಉನ್ನತ ಮಟ್ಟದ ತನಿಖೆಯ ಬಳಿಕವಷ್ಟೇ ಖಚಿತವಾಗಲಿದೆ.

ಧಾರ್ಮಿಕ ಮೂಲಭೂತವಾದಿಗಳು ಮತ್ತು ಭಯೋತ್ಪಾದಕರಿಗೆ ಕೇರಳ ಸುರಕ್ಷಿತ ತಾಣವಾಗುತ್ತಿದೆ ಎಂಬ ಆರೋಪಗಳು ಇಂದು ನಿನ್ನೆಯದಲ್ಲ. ಕಳೆದ ಕೆಲವು ದಶಕಗಳಿಂದ ರಾಜ್ಯದಲ್ಲಿ ಉಗ್ರರು ಸದ್ದಿಲ್ಲದೆ ತಮ್ಮ ದುಷ್ಕೃತ್ಯಗಳನ್ನು ಎಸ ಗುವ ಮೂಲಕ ಅಮಾಯಕರ ಪ್ರಾಣಕ್ಕೆ ಸಂಚಕಾರ ತಂದೊಡ್ಡುತ್ತಲೇ ಬಂದಿದ್ದರು. ಸಿಮಿ, ಪಿಎಫ್ಐ ಸಹಿತ ವಿವಿಧ ಭಯೋತ್ಪಾದಕ ಸಂಘಟನೆಗಳನ್ನು ಕೇಂದ್ರ ಸರಕಾರ ನಿಷೇಧಿಸಿ, ಈ ಸಂಘಟನೆಗಳ ನೆಲೆಗಳು ಮತ್ತು ಪದಾಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಂಡ ಬಳಿಕ ಕೇರಳದಲ್ಲಿ ಹಿಂಸಾಚಾರ ಒಂದಿಷ್ಟು ತಹ ಬಂದಿಗೆ ಬಂದಿತ್ತು. ಆದರೂ ರಾಜ್ಯದಲ್ಲಿ ಉಗ್ರಗಾಮಿ ಸಂಘಟ® ೆ ಗಳು ಅತ್ಯಂತ ರಹಸ್ಯವಾಗಿ ಕಾರ್ಯಾಚರಿಸುತ್ತಿವೆ ಎಂಬ ಗುಮಾನಿಯನ್ನು ಕೇಂದ್ರದ ವಿವಿಧ ತನಿಖಾ ಸಂಸ್ಥೆಗಳು ಪದೇ ಪದೆ ವ್ಯಕ್ತಪಡಿಸುತ್ತಲೇ ಬಂದಿದ್ದು ವಲ್ಲದೆ ಇತ್ತೀ ಚೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ ನಡೆಸಿದ ಹಲವು ದಾಳಿಗಳಲ್ಲಿ ಈ ಆರೋಪಕ್ಕೆ ಪುಷ್ಟಿ ನೀಡುವಂಥ ಸಾಕ್ಷ್ಯಾಧಾರಗಳು ಲಭಿಸಿದ್ದವಲ್ಲದೆ ಕೆಲವು ಉಗ್ರರನ್ನು ಬಂಧಿಸಿತ್ತು.

ಶುಕ್ರವಾರ ಕೇರಳದ ಮಲಪ್ಪುರಂನಲ್ಲಿ ನಡೆದ ಗಾಜಾ ಪರ ರ್ಯಾಲಿಯ ವೇಳೆ ಹಮಾಸ್‌ ಉಗ್ರ ಸಂಘಟನೆಯ ನಾಯಕ ವರ್ಚುವಲ್‌ ಆಗಿ ಪಾಲ್ಗೊಂಡು ಮಾತನಾಡಿರುವುದು ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ವ್ಯಾಪಕ ಖಂಡನೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಭಯೋತ್ಪಾದಕ ಸಂಘಟನೆಯ ನಾಯಕನೋರ್ವನ ವರ್ಚುವಲ್‌ ಭಾಷಣವನ್ನು ಪ್ರತಿಭಟನೆ ವೇಳೆ ಪ್ರಸಾರ ಮಾಡಲು ಅವಕಾಶ ನೀಡಿದ ಪೊಲೀಸರ ಕಾರ್ಯವೈಖರಿ ವಿರುದ್ಧ ವಿವಿಧ ರಾಜಕೀಯ ಪಕ್ಷಗಳು ಕಿಡಿಕಾರಿವೆ. ಈ ಎಲ್ಲ ಬೆಳವಣಿಗೆಗಳ ನಡುವೆ ರವಿವಾರ ಕ್ರೈಸ್ತ ಪ್ರಾರ್ಥನಾ ಮಂದಿರದಲ್ಲಿ ಸ್ಫೋಟ ಸಂಭವಿಸಿರುವುದು ಸಹಜವಾಗಿಯೇ ಕೇರಳ ಪೊಲೀಸರು ಮತ್ತು ಸರಕಾರದ ವೈಫ‌ಲ್ಯವನ್ನು ಎತ್ತಿ ತೋರಿಸಿವೆ. ಸ್ಫೋಟ ಪ್ರಕರಣದ ತನಿಖೆಗೆ ಎನ್‌ಐಎ ಸಹಿತ ಸಂಪೂರ್ಣ ಸಹಕಾರ ನೀಡುವುದಾಗಿ ಕೇಂದ್ರ, ಕೇರಳ ಸರಕಾರಕ್ಕೆ ಭರವಸೆ ನೀಡಿದೆ. ಆದರೆ ಕೇರಳ ಸರಕಾರ ತನ್ನ ಮೂಗಿನಡಿಯಲ್ಲಿ ಕಾರ್ಯಾಚರಿಸುತ್ತಿರುವ ಸಮಾಜದ್ರೋಹಿ ಸಂಘಟನೆಗಳು ಮತ್ತು ಶಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳದೇ ಹೋದಲ್ಲಿ ಇಂಥ ದುಸ್ಸಾಹಸಕ್ಕೆ ಇನ್ನಷ್ಟು ಮತಾಂಧ ಶಕ್ತಿಗಳು ಮುಂದಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೇರಳ ಸರಕಾರ ಇನ್ನಾದರೂ ಎಚ್ಚೆತ್ತುಕೊಂಡು ಇಂತಹ ಶಕ್ತಿಗಳನ್ನು ಬೇರು ಸಹಿತ ಕಿತ್ತೂಗೆಯಲು ಪಣತೊಡಬೇಕಿದೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.