ಪಿಂಚಣಿ ಇಲ್ಲದ ಬದುಕು ಕಷ್ಟ: ದಯಾಮರಣ ಕೋರಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ನಿವೃತ್ತ ಶಿಕ್ಷಕಿ
Team Udayavani, Sep 23, 2020, 6:36 PM IST
ಬಂಕಾಪುರ: ಸರ್ಕಾರ ನಿವೃತ್ತಿ ಮಾಡಿ ಕನಿಷ್ಠ ಸೌಲಭ್ಯ ನೀಡದೇ ಬರಿಗೈಯಿಂದ ಕಳುಹಿಸುವ ಮೂಲಕ ಇಳಿ ವಯಸ್ಸಿನಲ್ಲಿ ಪಿಂಚಣಿ ಇಲ್ಲದೇ ಬದುಕು ಸಾಗಿಸುವುದು ಕಷ್ಟಕರವಾಗಿದೆ. ಹೀಗಾಗಿ, ದಯಾಮರಣಕ್ಕೆ ಅನುಮತಿ ನೀಡಬೇಕೆಂದು ಪಟ್ಟಣದ ನಿವೃತ್ತ ಶಿಕ್ಷಕಿ ಸುಮಂಗಲಾ ಪರ್ವತಗೌಡ ಪಾಟೀಲ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ್ದಾರೆ.
ಕಳೆದ 1989ರಲ್ಲಿ ಅನುದಾನ ರಹಿತ ಬಂಕಾಪುರ ಕೀರ್ತಿ ಪ್ರೌಢಶಾಲೆಯಲ್ಲಿ ಕನ್ನಡ ವಿಷಯ ಬೋಧನೆ ಶಿಕ್ಷಕಿಯಾಗಿ ನೇಮಕಾತಿ ಹೊಂದಿದ್ದು, ಸತತ 17 ವರ್ಷ ಅಂದರೆ 2006ವರೆಗೆ ಉಚಿತ ಸೇವೆ ಸಲ್ಲಿಸಿದ್ದೇನೆ. ನಂತರ 12 ವರ್ಷ 7 ತಿಂಗಳು ಸರ್ಕಾರದ ವೇತನ ಪಡೆದು ಸೇವೆ ಸಲ್ಲಿಸಿದ್ದೇನೆ.
2018ರಲ್ಲಿ ಸೇವೆಯಿಂದ ವಯೋ ನಿವೃತ್ತಿ ಹೊಂದಿದ್ದೇನೆ. ಸರ್ಕಾರ ನಿವೃತ್ತಿ ನಂತರ ಯಾವುದೇ ಸೌಲಭ್ಯ ನೀಡಿಲ್ಲ.
ಕುಟುಂಬದಲ್ಲಿ ನನಗೆ ಪತಿ ಬಿಟ್ಟು ಬೇರೆ ಯಾರೂ ಇಲ್ಲ. ಕೂಲಿ ನಾಲಿ ಮಾಡಿ ಬದುಕಬೇಕೆಂದರೆ ಶಕ್ತಿ ಇಲ್ಲ. ವಾಸ ಮಾಡಲು ಸರಿಯಾಗಿ ಮನೆಯಿಲ್ಲ. ಹೀಗಾಗಿ ಬಾಡಿಗೆ ಮನೆಯಲ್ಲೇ ಜೀವನ ಕಳೆಯುತ್ತಿದ್ದೇವೆ. ಅನುದಾನಿತ ಶಾಲೆಗಳಲ್ಲಿ ಸೇವೆ ಸಲ್ಲಿಸಿ ಸಾವಿರಾರು ಮಕ್ಕಳಿಗೆ ವಿದ್ಯಾದಾನ ಮಾಡಿರುವ ತೃಪ್ತಿಯೊಂದನ್ನು ಬಿಟ್ಟರೆ ಬೇರಾವ ಸೌಕರ್ಯಗಳು ನನಗೆ ಸಿಕ್ಕಿಲ್ಲ. ಆದರೆ ಈ ಸಂಧ್ಯಾ ವಯಸ್ಸಿನಲ್ಲಿ ಪಿಂಚಣಿಗಾಗಿ ಹೋರಾಟ ಮಾಡುವುದು ಅನಿವಾರ್ಯ. ಬದುಕು ಬೀದಿ ಪಾಲಾಗುವ ಮುನ್ನ ಸರ್ಕಾರ ಪಿಂಚಣಿ ಯೋಜನೆ ಜಾರಿಗೆ ತರಬೇಕೆಂದು ರಾಷ್ಟ್ರಪತಿಗಳಲ್ಲಿ ಮನವಿ ಮಾಡಿದ್ದಾರೆ.
ಇಲ್ಲವಾದಲ್ಲಿ ನನ್ನ ಕುಟುಂಬ ಪರಿವಾರಕ್ಕೆ ದಯಾಮರಣಕ್ಕೆ ಅನುಮತಿ ನೀಡಬೇಕೆಂದು ಮನವಿ ಮಾಡಿಕೊಂಡಿರುವುದಾಗಿ ಪತ್ರಿಕೆಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ