ಕಾರ್ಖಾನೆಯಲ್ಲಿ ಆಯತಪ್ಪಿ ಬಿದ್ದು ಕಾರ್ಮಿಕ ಸಾವು: ಕುಟುಂಬಸ್ಥರ ಆಕ್ರೋಶ
Team Udayavani, Jan 23, 2022, 11:29 AM IST
ಸೇಡಂ: ಇಲ್ಲಿನ ವಾಸವದತ್ತಾ ಕಾರ್ಖಾನೆಯ ರಾವ್ ಮಿಲ್ನ ಯೂನಿಟ್ 4ರ ಗುತ್ತಿಗೆ ಕಾರ್ಮಿಕನೊಬ್ಬ ಮೇಲಿನಿಂದ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಬಾಬಾ ಪಟೇಲ ಮಶಾಕ್ ಪಟೇಲ್ ಮೃತಪಟ್ಟ ಕಾರ್ಮಿಕ. ಈ ಘಟನೆಯಿಂದಾಗಿ ಕಾರ್ಖಾನೆಯಲ್ಲಿ ಕೆಲಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಆಕ್ರೋಶಗೊಂಡ ಮೃತನ ಸಂಬಂಧಿಕರು ಕಾರ್ಖಾನೆಯ ಕಿಟಕಿ ಗಾಜು, ಕುರ್ಚಿಗಳನ್ನು ಪುಡಿಪುಡಿ ಮಾಡಿದ್ದಾರೆ.
ಮೃತನ ಕುಟುಂಬಕ್ಕೆ 50 ಲಕ್ಷ ರೂ., ಇಬ್ಬರಿಗೆ ನೌಕರಿ ನೀಡುವಂತೆ ರಾಜ್ಯ ಹಾಪಕಾಮ್ಸ್ ಅಧ್ಯಕ್ಷ ಬಸವರಾಜ ಪಾಟೀಲ ಊಡಗಿ, ಭಾರತೀಯ ಮಜ್ದೂರ ಸಂಘದ ಅಧ್ಯಕ್ಷ ಅನಿಲಕುಮಾರ ಪಾಟೀಲ ತೇಲ್ಕೂರ, ಬಿಜೆಪಿ ಮುಖಂಡ ಶಿವಕುಮಾರ ಪಾಟೀಲ (ಜಿಕೆ) ಹಾಗೂ ಕಾರ್ಖಾನೆ ಅಧಿ ಕಾರಿಗಳನ್ನು ಆಗ್ರಹಿಸಿದರು.
ಇದಕ್ಕೆ ಆಡಳಿತ ಮಂಡಳಿ ಒಪ್ಪದಿದ್ದಾಗ ಕೆಲಹೊತ್ತು ಮಾತಿನ ಚಕಮಕಿ ನಡೆಯಿತು ಎನ್ನಲಾಗಿದೆ. ಕೂಡಲೇ ಪರಿಹಾರ ಕಲ್ಪಿಸಬೇಕು ಇಲ್ಲವಾದಲ್ಲಿ ಶವವಿಟ್ಟು ಕಾರ್ಖಾನೆ ಬಂದ್ ಮಾಡಿ ಪ್ರತಿಭಟನೆಗೆ ಮುಂದಾಗುವುದಾಗಿ ಬಸವರಾಜ ಪಾಟೀಲ ಎಚ್ಚರಿಸಿದರು. ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ