ನಕಲಿ ಮೆಡಿಕಲ್‌ ಸರ್ಟಿಫಿಕೆಟ್‌: ರೈಲ್ವೇ ಅಧಿಕಾರಿ ಸಹಿತ ಮೂವರ ಬಂಧನ


Team Udayavani, Jun 12, 2022, 1:22 AM IST

ನಕಲಿ ಮೆಡಿಕಲ್‌ ಸರ್ಟಿಫಿಕೆಟ್‌: ರೈಲ್ವೇ ಅಧಿಕಾರಿ ಸಹಿತ ಮೂವರ ಬಂಧನ

ಮಂಗಳೂರು: ಮಂಗಳೂರು ಸೆಂಟ್ರಲ್‌ ರೈಲ್ವೇ ನಿಲ್ದಾಣದ ಬಳಿಯ ಆರೋಗ್ಯ ಘಟಕದಲ್ಲಿ ನಿಯಮ ಬಾಹಿರವಾಗಿ ನಕಲಿ ಮೆಡಿಕಲ್‌ ಸರ್ಟಿಫಿಕೆಟ್‌ ಒದಗಿಸುತ್ತಿರುವ ಆರೋಪದಲ್ಲಿ ರೈಲ್ವೇ ಅಧಿಕಾರಿ ಸಹಿತ ಮೂವರನ್ನು ಬೆಂಗಳೂರಿನ ಸಿಬಿಐ ಭ್ರಷ್ಟಾಚಾರ ತಡೆ ದಳದವರು ಬಂಧಿಸಿದ್ದಾರೆ.

ಬಂಧಿತರಲ್ಲಿ ಅಸಿಸ್ಟೆಂಟ್‌ ಚೀಫ್‌ ಮೆಡಿಕಲ್‌ ಸೂಪರಿಂಟೆಂಡೆಂಟ್‌ ಕೂಡ ಸೇರಿರುವುದಾಗಿ ತಿಳಿದುಬಂದಿದೆ. ಸಾಮಾನ್ಯವಾಗಿ ರೈಲ್ವೇಯಂತಹ ಇಲಾಖೆಗಳ ವಿಚಾರದಲ್ಲಿ ಸಿಬಿಐ ತನಿಖೆ ನಡೆಸುವುದು ಕಡಿಮೆ, ರೈಲ್ವೇ ವಿಚಕ್ಷಣ ದಳದವರೇ ತನಿಖೆ ನಡೆಸುತ್ತಾರೆ, ಆದರೆ ಇಲ್ಲಿ ಯಾವುದೋ ಗಂಭೀರ ದೂರಿನ ಹಿನ್ನೆಲೆಯಲ್ಲಿ ಸಿಬಿಐ ತಂಡ ಆಗಮಿಸಿರಬಹುದು ಎಂದು ಮೂಲಗಳು ತಿಳಿಸಿವೆ.

ಕಳೆದೊಂದು ವರ್ಷದಿಂದಲೇ ಈ ನಕಲಿ ಸರ್ಟಿಫಿಕೆಟ್‌ ನೀಡುವ ಜಾಲ ಕಾರ್ಯವೆಸಗುತ್ತಿತ್ತು. ದಕ್ಷಿಣ ರೈಲ್ವೇ, ನೈಋತ್ಯ ರೈಲ್ವೇಗೆ ಸೇರಿದ ಸಿಬಂದಿಗಳಿಗೆ 1,500ಕ್ಕೂ ಅಧಿಕ ನಕಲಿ ಮೆಡಿಕಲ್‌ ಸರ್ಟಿಫಿಕೆಟ್‌ ನೀಡಿದ್ದಾಗಿ ತಿಳಿದುಬಂದಿದೆ.

ಶುಕ್ರವಾರ ಬೆಂಗಳೂರಿನಿಂದ ಆಗಮಿಸಿದ ಸಿಬಿಐ ಅಧಿಕಾರಿಗಳ ತಂಡ ರಾತ್ರಿಯವರೆಗೂ ಆರೋಗ್ಯ ಘಟಕದಲ್ಲಿ ಕಾರ್ಯಾಚರಣೆ, ತಪಾಸಣೆ ನಡೆಸಿದ್ದಲ್ಲದೆ ಸಂಬಂಧಿತ ದಾಖಲೆಗಳನ್ನು ಕಲೆಹಾಕಿದೆ.

ರೈಲ್ವೇಯೊಂದಿಗೆ ಕೆಲಸ ಮಾಡುವ ನೂರಾರು ಪರವಾನಿಗೆಯುಳ್ಳ ವರ್ತಕರು, ಪೋರ್ಟರುಗಳು, ಹೌಸ್‌ಕೀಪಿಂಗ್‌ ಸಿಬಂದಿ, ಕೇಟರರ್‌ಗಳು ಕಡ್ಡಾಯವಾಗಿ ಮೆಡಿಕಲ್‌ ಫಿಟ್‌ನೆಸ್‌ ಸರ್ಟಿಫಿಕೆಟನ್ನು ವರ್ಷಕ್ಕೊಮ್ಮೆ ರೈಲ್ವೇಗೆ ನೀಡಬೇಕಾಗುತ್ತದೆ. ಅದಿದ್ದರೆ ಮಾತ್ರವೇ ಅವರಿಗೆ ರೈಲ್ವೇ ನಿಲ್ದಾಣ ಮತ್ತು ರೈಲುಗಳಲ್ಲಿ ಕೆಲಸಕ್ಕೆ ಬಿಡಲಾಗುತ್ತದೆ. ದಲ್ಲಾಳಿಗಳ ನೆರವಿನೊಂದಿಗೆ ಆರೋಗ್ಯ ಘಟಕದಲ್ಲಿರುವ ಅಧಿಕಾರಿಗಳು ಯಾರದ್ದೇ ಆದರೂ ಆಧಾರ್‌ ಕಾರ್ಡ್‌ ನೀಡಿದರೆ ಅವರಿಗೆ ವಾಟ್ಸ್‌ ಆ್ಯಪ್‌ ಮೂಲಕ ಸರ್ಟಿಫಿಕೆಟ್‌ ಒದಗಿಸುತ್ತಿದ್ದರು. ಇದಕ್ಕೆ ಅವರು 525 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕಿತ್ತು.

ಯಾವುದೇ ರೀತಿ ಆರೋಗ್ಯ ತಪಾಸಣೆ ನಡೆಸದೆ ಯಾರಿಗಾದರೂ ಸರ್ಟಿಫಿಕೆಟ್‌ ನೀಡುವುದು ನಿಯಮಕ್ಕೆ ವಿರುದ್ಧ. ಈ ಅಕ್ರಮ ಕಾರ್ಯವನ್ನು ಯಾರೋ ಸಿಬಿಐವರೆಗೂ ತಲಪಿಸಿದ್ದರಿಂದ ಅದರ ಭ್ರಷ್ಟಾಚಾರ ತಡೆ ಘಟಕವೇ ರಂಗಕ್ಕಿಳಿದು ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.