ಸುಳ್ಳು ಜಾತಿ ಪತ್ರ: ಮೂವರ ವಿರುದ್ಧ ಪ್ರಕರಣ
Team Udayavani, Nov 12, 2021, 3:36 PM IST
ಸಾಗರ: ಇಲ್ಲಿನ ನಗರಸಭೆ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಗಣಾಧೀಶ್ ಅವರಿಗೆ ಸುಳ್ಳು ಜಾತಿ ದೃಢೀಕರಣ ಪತ್ರ ವಿತರಿಸಿದ ಸಂಬಂಧ ಮೂವರ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಹಿಂದೆ ಇಲ್ಲಿ ತಹಶೀಲ್ದಾರ್ ಆಗಿದ್ದ ಶಾಂತಿ ನಾಯ್ಕ್, ರಾಜಸ್ವ ನಿರೀಕ್ಷಕ ದಾನಪ್ಪ, ಗ್ರಾಮ ಲೆಕ್ಕಾಧಿಕಾರಿ ರೇಣುಕಪ್ಪ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಗಣಾಧೀಶ್ ಅವರು ಆದಿ ಕರ್ನಾಟಕ ಜಾತಿಗೆ ಸೇರಿದವರು ಎಂದು ಜಾತಿ ದೃಢೀಕರಣ ಪತ್ರ ನೀಡಲಾಗಿತ್ತು. ಆದರೆ ಅವರು ಅರುಂಧತಿ ಜಾತಿಗೆ ಸೇರಿದವರು ಎಂದು ಬೆಂಗಳೂರಿನ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ ದೂರು ದಾಖಲಾಗಿತ್ತು.
ಇದನ್ನೂ ಓದಿ:ಪರಿಷತ್ ಚುನಾವಣೆಯಲ್ಲಾದರೂ ಬ್ರಾಹ್ಮಣರಿಗೆ ಬಿಜೆಪಿ ಟಿಕೆಟ್ ಕೊಡಿ; ಮಸನ ಎಚ್ಚರಿಕೆ
ಬೆಂಗಳೂರಿನ ಜಾರಿ ನಿರ್ದೇಶನಾಲಯ ಈ ಬಗ್ಗೆ ತನಿಖೆ ನಡೆಸುವಂತೆ ದಾವಣಗೆರೆಯ ನಿರ್ದೇಶನಾಲಯದ ಕಚೇರಿಗೆ ಸೂಚನೆ ನೀಡಿತ್ತು. ದಾವಣಗೆರೆಯ ಕಚೇರಿಯ ಕೋರಿಕೆಯಂತೆ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದ ಜಾತಿ ಪರಿಶೀಲನಾ ಸಮಿತಿ ಗಣಾಧೀಶ್ ಅವರ ಜಾತಿ ಕುರಿತು ವಿಚಾರಣೆ ನಡೆಸಿ ಅವರಿಗೆ ನೀಡಿದ್ದ ಆದಿ ಕರ್ನಾಟಕ ಜಾತಿ ಧೃಢೀಕರಣ ಪತ್ರವನ್ನು ರದ್ದುಗೊಳಿಸುವಂತೆ ಸಾಗರದ ತಹಶೀಲ್ದಾರ್ರಿಗೆ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’