ಆರ್ಟಿಐ ಕಾರ್ಯಕರ್ತ ಸಹಿತ ಪತ್ನಿ, ಮಕ್ಕಳು ನಾಪತ್ತೆ?
Team Udayavani, Dec 20, 2020, 11:23 AM IST
ಸಿದ್ದಾಪುರ: ಅಮಾಸೆಬೈಲು ಗ್ರಾ.ಪಂ. ವ್ಯಾಪ್ತಿಯ ಮಚ್ಚಟ್ಟು ಗ್ರಾಮದ ತೊಂಬಟ್ಟು ಕಬ್ಬಿನಾಲೆ ನಿವಾಸಿ ಆರ್ಟಿಐ ಕಾರ್ಯಕರ್ತ ಅಶೋಕ ಶೆಟ್ಟಿಗಾರ್ (49) ಹಾಗೂ ಅವರ ಪತ್ನಿ ಶ್ರೀನಿಧಿ (40), ಮಗ ಅಶ್ವಿನ್ (16), ಮಗಳು ಆಶಿಕಾ (14) ಅವರು ಡಿ. 15ರಿಂದ ನಾಪತ್ತೆಯಾಗಿದ್ದಾರೆ ಎಂದು ಅವರ ಅಳಿಯ ಶಿವಕುಮಾರ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಆರ್ಟಿಐ ಕಾರ್ಯಕರ್ತರಾಗಿರುವ ಅಶೋಕ ಶೆಟ್ಟಿಗಾರ್ ಅವರ ಮನೆಗೆ ಡಿ. 15ರಿಂದ ಬೀಗ ಹಾಕಿರುವುದರಿಂದ ಅನುಮಾನಗೊಂಡ ಅಳಿಯ ಶಿವಕುಮಾರ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಮಕ್ಕಳಿಬ್ಬರು ಹಾಲಾಡಿಯ ಶಾಲೆಯೊಂದರ ಹೈಸ್ಕೂಲ್ ವಿದ್ಯಾರ್ಥಿಗಳಾಗಿದ್ದರು.
ಮೊಬೈಲ್ ಸ್ವಿಟ್ಚ್ಡ್ ಆಫ್
ಯಾವ ಕಾರಣಕ್ಕೆ ಕಾಣಿಯಾಗಿದ್ದಾರೆ ಎನ್ನುವ ಮಾಹಿತಿ ಗೊತ್ತಾಗಿಲ್ಲ. ಅವರ ಮೊಬೈಲ್ ಕೂಡ ಸ್ವಿಟ್ಚ್ಡ್ ಆಫ್ ಆಗಿದೆ ಎಂದು ಪೊಲೀಸರು ಹೇಳಿದ್ದಾರೆ. ಅಕ್ಕಪಕ್ಕದ ಮನೆಯವರಿಗಾಗಲಿ ಅಥವಾ ಸಂಬಂಧಿಕರಿಗಾಗಲಿ ಅವರು ನಾಪತ್ತೆಯಾಗಿದ್ದಾರೆಯೇ ಅಥವಾ ಎಲ್ಲಿಗಾದರೂ ಹೋಗಿದ್ದಾರೆಯೇ ಎನ್ನುವ ಖಚಿತತೆ ಸಿಕ್ಕಿಲ್ಲ. ಅಮಾಸೆಬೈಲು ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನಾಮಪತ್ರ ಸಲ್ಲಿಸಿದ್ದರು
ಅಶೋಕ್ ಶೆಟ್ಟಿಗಾರ್ ಅವರು ಗ್ರಾ.ಪಂ. ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ರಾಜಕೀಯ ಒತ್ತಡದಿಂದ ಚುನಾವಣೆ ಮುಗಿಯುವವರೆಗೆ ಬೇರೆಡೆ ಇರೋಣವೆಂದು ಹೋಗಿರಬಹುದೇ? ಅಥವಾ ರಾಜಕೀಯದಿಂದ ಅಪಹರಣ ಮಾಡಿರಬಹುದೇ ಎನ್ನುವ ದೃಷ್ಟಿಕೋನದಲ್ಲೂ ತನಿಖೆ ಸಾಗಿದೆ.
ಬಳ್ಳಾರಿಯಲ್ಲಿದ್ದಾರೆಯೇ?
ನಾಪತ್ತೆ ಪ್ರಕರಣ ದಾಖಲಿಸಿ ಕೊಂಡಿರುವ ಪೊಲೀಸರು ತನಿಖೆ ಪ್ರಾರಂಭಿಸಿದ್ದು, ಅವರು ಬಳ್ಳಾರಿಯಲ್ಲಿ ಇರುವ ಶಂಕೆ ವ್ಯಕ್ತಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ