ಇತಿಹಾಸ ಪ್ರಸಿದ್ಧ ದಾವಣೆಬೈಲು ಕಪ್ಪಗೋಡು ಶ್ರೀ ಕಪಿಲೇಶ್ವರ ದೇವಸ್ಥಾನ ಜೀರ್ಣೋದ್ದಾರ ಸಂಕಲ್ಪ
ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯಿಂದ ದೇವಸ್ಥಾನ ವೀಕ್ಷಣೆ
Team Udayavani, Feb 24, 2023, 7:15 PM IST
ತೀರ್ಥಹಳ್ಳಿ: ಸಾವಿರಾರು ವರ್ಷಗಳ ಇತಿಹಾಸದ ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ದಾವಣೆಬೈಲು ಕಪ್ಪಗೋಡು ಶ್ರೀ ಕಪಿಲೇಶ್ವರ ದೇವಸ್ಥಾನ ಜೀರ್ಣೋದ್ದಾರ ಹಾಗೂ ದೇವರ ಪುನರ್ ಪ್ರತಿಷ್ಠಾಪನೆ ಮಾಡಲು ಊರ ಗ್ರಾಮಸ್ಥರೆಲ್ಲರೂ ಸೇರಿ ತೀರ್ಮಾನ ತೆಗೆದುಕೊಂಡಿದ್ದು, ಇದರ ಪೂರ್ವಭಾವಿಯಾಗಿ ಶೃಂಗೇರಿಯ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠಾಧೀಶ್ವರ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳನ್ನು ಫೆ.23ರ ಗುರುವಾರ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಂಡರು.
ನಂತರ ಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳವರು ಈ ದೇವಸ್ಥಾನದ ಪುರಾತನ ಶಿಲ್ಪಕಲೆ, ದೇವಸ್ಥಾನ ಒಳಾಂಗಣ, ಗರ್ಭಗುಡಿ, ಶಿವಲಿಂಗ, ಪೀಠವನ್ನು ವೀಕ್ಷಣೆ ಮಾಡಿದರು. ದೇವಸ್ಥಾನದ ಸಂಪೂರ್ಣ ಇತಿಹಾಸವನ್ನು ಇತಿಹಾಸ ಅಜಯ್ ಕುಮಾರ್ ಶರ್ಮಾ ಶಿವಮೊಗ್ಗ ಇವರು ಸ್ವಾಮೀಜಿಗಳಿಗೆ ನೀಡಿದರು. ಗ್ರಾಮಸ್ಥರ ಮನವಿ ಮೇರೆಗೆ ಕೋಣಂದೂರಿನ ಧಾರ್ಮಿಕ ಸಮಾರಂಭಕ್ಕೆ ಹೋಗುತಿದ್ದ ಸ್ವಾಮೀಜಿಗಳು ಈ ಕಪಿಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ದೇವಸ್ಥಾನ ಜೀರ್ಣೋದ್ದಾರ ಹಾಗೂ ದೇವರ ಪುನರ್ ಪ್ರತಿಷ್ಠಾಪನೆಯ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸುವುದಾಗಿ ಸ್ವಾಮೀಜಿಗಳು ತಿಳಿಸಿದರು. ಈ ಸಂದರ್ಭದಲ್ಲಿ ಸುತ್ತ ಮುತ್ತಲಿನ ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.
17 ವರ್ಷಗಳ ಹಿಂದೆ ಆಗ ಶಾಸಕರಾಗಿದ್ದ ಹಾಗೂ ಈಗಿನ ಗೃಹಸಚಿವ ಆರಗ ಜ್ಞಾನೇಂದ್ರ ಅವರು ತಮ್ಮ ವಿಶೇಷ ಪ್ರಯತ್ನದಿಂದ 20 ಲಕ್ಷರೂ.ಗಳ ಅನುದಾನ ಒದಗಿಸಿ ಶಿಥಿಲಾವಸ್ಥೆ ತಲುಪುತ್ತಿದ್ದ ಈ ಕಪಿಲೇಶ್ವರ ದೇವಸ್ಥಾನದ ಪುನರ್ ನಿರ್ಮಾಣ ಮಾಡಿದ್ದರು. ಆದರೆ ಈ ದೇವಸ್ಥಾನಗಳಿಗೆ ದೇವರ ಪ್ರತಿಷ್ಠಾಪನೆಯಾಗಿರಲಿಲ್ಲ, ದೇವಸ್ಥಾನದ ಎದುರು ವಿಶಾಲವಾದ ಕೆರೆ, ಮರ ಗಿಡಗಳು ಇದ್ದೂ ಪ್ರೇಕ್ಷಣೀಯ ಸ್ಥಳವಾಗಿ ಹಲವಾರು ಕಿರುತೆರೆಯ ಧಾರವಾಹಿ ಮತ್ತು ಸಿನಿಮಾಗಳು ಚಿತ್ರೀಕರಣಗಳು ಇಲ್ಲಿ ನಡೆಯುತ್ತಿತ್ತು. ಈಗ ದೇವಸ್ಥಾನಕ್ಕೆ ಹೆಚ್ಚುವರಿಯಾಗಿ ಎರಡು ಎಕ್ರೆ ಜಾಗವನ್ನು ಕೂಡ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಮಂಜೂರು ಮಾಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
Desi Swara: ಮಸ್ಕತ್- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ