ಮಂಗಳೂರು: ಅಭಿವೃದ್ಧಿ ಹಿನ್ನೆಲೆಯಲ್ಲಿ ಮರೆಯಾಗುತ್ತಿವೆ ವೃತ್ತಗಳು! ಹೆಸರು ಮಾತ್ರ ಇನ್ನೂ ಹಸನು

ಮಂಗಳೂರಿನ ಹೆಗ್ಗುರುತಿನಂತಿದ್ದ ವೃತ್ತಗಳ ಹೆಸರು ಮಾತ್ರ ಇನ್ನೂ ಹಸನು

Team Udayavani, Feb 19, 2022, 11:56 AM IST

ಅಭಿವೃದ್ಧಿಯ ಹಿನ್ನೆಲೆಯಲ್ಲಿ ಮರೆಯಾಗುತ್ತಿವೆ ವೃತ್ತಗಳು!

ಮಹಾನಗರ: ಮಂಗಳೂರಿನ ಕೆಲವೊಂದು ಪ್ರದೇಶ ವೃತ್ತಗಳ ಹೆಸರಿನಿಂದಲೇ ಗುರುತಿಸಿಕೊಂಡಿದೆ. ಆದರೆ ಕಾಲ ಸರಿದಂತೆ ಅಭಿವೃದ್ಧಿಯ ದೃಷ್ಟಿಯಲ್ಲಿ ನಗರದ ಕೆಲವೊಂದು ವೃತ್ತಗಳು ಸದ್ಯ ಮರೆಯಾಗಿವೆ. ಆದರೂ ಒಂದು ಕಾಲದ ಹೆಗ್ಗುರಿನಂತಿದ್ದ ವೃತ್ತಗಳ ಹೆಸರು ಮಾತ್ರ ಇನ್ನೂ ಹಸನಾಗಿದೆ.

ಪಂಪ್‌ವೆಲ್‌ ಮಹಾವೀರ ವೃತ್ತ
ಭಗವಾನ್‌ ಶ್ರೀ ಮಹಾವೀರ ಸ್ವಾಮಿಯ 2600ನೇ ಜನ್ಮ ಕಲ್ಯಾಣೋತ್ಸವವನ್ನು ರಾಷ್ಟ್ರಾದ್ಯಂತ 2001ರಿಂದ 2002ರ ವರೆಗೆ ಆಚರಿಸಲು ಕೇಂದ್ರ ಸರಕಾರ ನಿರ್ಧರಿಸಿತ್ತು.
ಅದರಂತೆ ಪಂಪ್‌ವೆಲ್‌ ವೃತ್ತಕ್ಕೆ “ಮಹಾವೀರ ವೃತ್ತ’ ಎಂದು ನಾಮಕರಣ ಮಾಡಲಾಗಿತ್ತು. ಅನಂತರ ಜೈನ್‌ ಸೊಸೈಟಿ, ಜೈನ ಸಮಾಜ ಸೇರಿಕೊಂಡು 43 ಸೆಂಟ್ಸ್‌ ಜಾಗದಲ್ಲಿ ಸುಮಾರು 12 ಲಕ್ಷ ರೂ. ವೆಚ್ಚದಲ್ಲಿ ಸುಂದರ ಮಹಾವೀರ ಸರ್ಕಲ್‌, ಮಂಗಲ ಕಲಶವನ್ನು ಇಲ್ಲಿ ನಿರ್ಮಾಣ ಮಾಡಿದರು. 2003ರಲ್ಲಿ ಇದರ ಕಾಮಗಾರಿ ಆರಂಭವಾಗಿ, 6 ತಿಂಗಳುಗಳ ಬಳಿಕ, ಮಹಾವೀರ ಸರ್ಕಲ್‌, ಕಲಶದ ಉದ್ಘಾಟನೆ ನೆರವೇರಿತ್ತು. ಕಲಶದ ತೂಕ 20 ಟನ್‌ ಇತ್ತು. ಆದರೆ ಪಂಪ್‌ವೆಲ್‌ ಮೇಲ್ಸೇತುವೆ ಕಾಮಗಾರಿ ಉದ್ದೇಶಕ್ಕೆ ಎಂಟು ವರ್ಷಗಳ ಹಿಂದೆ ಈ ವೃತ್ತವನ್ನು ಕೆಡಹಲಾಗಿತ್ತು. ಬಳಿಕ ನಿರ್ಮಾಣವಾಗಿಲ್ಲ.

ಮಂಗಳೂರಿಗೆ “ಐಲ್ಯಾಂಡ್‌’
ನಗರದಲ್ಲಿ ವೃತ್ತಗಳ ಬದಲು ಟ್ರಾಫಿಕ್‌ ಐಲ್ಯಾಂಡ್‌ ನಿರ್ಮಾಣಕ್ಕೆ ಒಲವು ತೋರಲಾಗುತ್ತಿದೆ. ಇದು ನಗರದ ದೃಷ್ಟಿಕೋನದಲ್ಲಿ ಹೊಸ ಪರಿಕಲ್ಪನೆ. ಸುಗಮ ವಾಹನ ಸಂಚಾರಕ್ಕೆ ಅನುಕೂಲವಾಗುವಂತೆ ದ್ವೀಪಗಳ ಮಾದರಿಯನ್ನು ನಿರ್ಮಾಣ ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತದೆ. ಇದರಿಂದಾಗಿ ಲೇನ್‌ಗಳಲ್ಲಿ ವಾಹನಗಳು ವ್ಯವಸ್ಥಿತವಾಗಿ ಸಂಚರಿಸಲು ಸಹಾಯವಾಗುತ್ತದೆ. ಇದಕ್ಕೆ ವೃತ್ತದಷ್ಟು ಸ್ಥಳಾವಕಾಶ ಬೇಕಿಲ್ಲದ ಕಾರಣ ಸರಾಗವಾಗಿ ವಾಹನಗಳು ತಿರುವು ಪಡೆದುಕೊಳ್ಳಲು ಅನುಕೂಲವಾಗುತ್ತದೆ. ಹೊಸ ಸ್ವರೂಪದ ಟ್ರಾಫಿಕ್‌ ಐಲ್ಯಾಂಡ್‌ನ‌ಲ್ಲಿ ಹಚ್ಚ ಹಸುರು ಕಂಗೊಳಿಸುವಂತೆ ಲಾನ್‌, ಬೀದಿ ದೀಪ ಸಹಿತ ಸ್ಮಾರ್ಟ್‌ಪೋಲ್‌ವÂವಸ್ಥೆಗಳನ್ನು ಅಳವಡಿಸಲಾಗುತ್ತದೆ.

ಎ.ಬಿ. ಶೆಟ್ಟಿ ವೃತ್ತ
ನಗರದ ಹೆಗ್ಗುರುತಿನಂತಿದ್ದ ಎ.ಬಿ. ಶೆಟ್ಟಿ ವೃತ್ತವನ್ನು ಕೆಲವು ತಿಂಗಳ ಹಿಂದೆ ಕೆಡಹಲಾಗಿದೆ. ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ನಗರದ ಕ್ಲಾಕ್‌ಟವರ್‌ನಿಂದ ಸ್ಟೇಟ್‌ಬ್ಯಾಂಕ್‌ಗೆ ಹೋಗುವ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಈ ವೃತ್ತವನ್ನು ಕೆಡಹಲಾಗಿದೆ. ಎ.ಬಿ. ಶೆಟ್ಟಿ (ಅತ್ತಾವರ ಬಾಲಕೃಷ್ಣ ಶೆಟ್ಟಿ) ಅವರು ಮೂಲ್ಕಿ ದೊಡ್ಡಮನೆಯಲ್ಲಿ ಜನಿಸಿದ್ದು, ಕೆನರಾ ಮತ್ತು ಸರಕಾರಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದರು. ರಾಜಕೀಯ ರಂಗ, ಶಿಕ್ಷಣ, ಬ್ಯಾಂಕಿಂಗ್‌, ಆಡಳಿತ, ಸಾಮಾಜಿಕ ಮುಂತಾದ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದರು. ಬಂಟ್ಸ್‌ಹಾಸ್ಟೆಲ್‌ನಲ್ಲಿ ಅವರ ಹೆಸರಿನ ಸಭಾಭವನ, ನಿಟ್ಟೆ ಶಿಕ್ಷಣ ಸಮೂಹ ಸಂಸ್ಥೆಯಿಂದ ಎ.ಬಿ. ಶೆಟ್ಟಿ ಸ್ಮಾರಕ ದಂತ ವಿಜ್ಞಾನ ವೈದ್ಯಕೀಯ ಆಸ್ಪತ್ರೆ ಮುಂತಾದುವುಗಳಿವೆ. ಕೆಲವು ತಿಂಗಳುಗಳ ಹಿಂದೆ ಎ.ಬಿ. ಶೆಟ್ಟಿ ಸರ್ಕಲ್‌ ತೆರವು ಮಾಡಲಾಗಿದೆ.

ರಾವ್‌ ಆ್ಯಂಡ್‌ ರಾವ್‌ ವೃತ್ತ
ರಾವ್‌ ಆ್ಯಂಡ್‌ ರಾವ್‌ ವೃತ್ತಕ್ಕೆ ಅನೇಕ ವರ್ಷಗಳ ಇತಿಹಾಸವಿದೆ. ಟೆಲಿಗ್ರಾಫ್‌, ಪೋಸ್ಟಲ್‌ನಲ್ಲಿ ಹಲವಾರು ವರ್ಷಗಳ ಹಿಂದೆಯೇ ರಾವ್‌ ಆ್ಯಂಡ್‌ ರಾವ್‌ ವೃತ್ತ ಎಂದು ನಮೂದಾಗಿತ್ತು. ಈ ಪ್ರದೇಶಕ್ಕೆ 1996ರಲ್ಲಿ ಅಧಿಕೃತ ಹೆಸರು ಇಡುವ ಪ್ರಸ್ತಾವ ಬಂತು. ನಗರದ ಪ್ರಮುಖರ ನಿರ್ಣಯದಂತೆ ರಾವ್‌ ಆ್ಯಂಡ್‌ ರಾವ್‌ ಎಂದು ಹೆಸರಿಡಲು ನಿರ್ಧರಿಸಲಾಯಿತು. ಈಗ ವೃತ್ತ ಇದ್ದ ಪ್ರದೇಶದ ಎದುರು ಈ ಹಿಂದೆ ರಾವ್‌ ಆ್ಯಂಡ್‌ ರಾವ್‌ ಎಂಬ ಹೆಸರಿನ ಆಟೋಮೊಬೈಲ್‌ ಶಾಪ್‌ ಇತ್ತು. ಪಿ. ಹರಿಶ್ಚಂದ್ರ ರಾವ್‌, ವೆಂಕಟ ರಾವ್‌ ಅವರು ಪಾಲುದಾರರಾಗಿ ಆ ಸಂಸ್ಥೆ ನಡೆಸುತ್ತಿದ್ದರು. ಈ ಸಂಸ್ಥೆ ಇರುವ ಪ್ರದೇಶವಾದ ಕಾರಣ ವೃತ್ತಕ್ಕೂ ರಾವ್‌ ಆ್ಯಂಡ್‌ ರಾವ್‌ ಎಂಬ ಹೆಸರಿಡಲು ನಿರ್ಧರಿಸಲಾಯಿತು.

ಹ್ಯಾಮಿಲ್ಟನ್‌ ವೃತ್ತ
ಮಂಗಳೂರು ಮತ್ತು ದೂರದ ಕೆನಡಾ ದೇಶದ ಪ್ರಮುಖ ಪಟ್ಟಣ ಹ್ಯಾಮಿಲ್ಟನ್‌ ನಡುವಿನ ಬಾಂಧವ್ಯದ ಸಂಕೇತದಂತೆ ಸ್ಟೇಟ್‌ಬ್ಯಾಂಕ್‌ ಬಳಿಯ ಜಿಲ್ಲಾಧಿಕಾರಿ ಕಚೇರಿ ಹತ್ತಿರ ಹ್ಯಾಮಿಲ್ಟನ್‌ ವೃತ್ತ ಇತ್ತಿ. ಸುಮಾರು ನಾಲ್ಕು ದಶಕಗಳ ಹಿಂದೆ ಕೆನಡಾದ ಹ್ಯಾಮಿಲ್ಟನ್‌ ಮೇಯರ್‌ ಮಂಗಳೂರಿಗೆ ಆಗಮಿಸಿದ್ದರು. ಆ ಸಂದರ್ಭ ಇಲ್ಲಿನ ಪರಿಸರ, ಹವಾಮಾನ, ಪ್ರಕೃತಿಯ ಸೊಬಗು ಹ್ಯಾಮಿಲ್ಟನ್‌ ಮಾದರಿಯಲ್ಲಿ ಇರುವುದನ್ನು ಕಂಡು ಮಂಗಳೂರು ಮತ್ತು ಹ್ಯಾಮಿಲ್ಟನ್‌ ಮಾದರಿಯಲ್ಲೇ ಇರುವುದನ್ನು ಕಂಡು ಬೆರಗುಗೊಂಡಿದ್ದರು. ಆ ಧೊÂàತಕದಂತೆ ಈ ವೃತ್ತ ನಿರ್ಮಾಣಗೊಂಡಿತ್ತು. ಸ್ಟೇಟ್‌ಬ್ಯಾಂಕ್‌ ವೃತ್ತ ಎಂದು ಪ್ರಸಿದ್ಧಿಯಾಗಿರುವ ಹ್ಯಾಮಿಲ್ಟನ್‌ ಸರ್ಕಲ್‌ ಅನ್ನು ಸ್ಮಾರ್ಟ್‌ಸಿಟಿಯ ಯೋಜನೆಯಲ್ಲಿ ಅಭಿವೃದ್ಧಿ ಉದ್ದೇಶದಿಂದ ಇತ್ತೀಚೆಗೆಯಷ್ಟೇ ಕೆಡಹಲಾಗಿದೆ.

– ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.