ನಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲಿಸುವ ಮಾತೇ ಇಲ್ಲ: ರೈತರು
Team Udayavani, Dec 10, 2020, 12:28 PM IST
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣಾಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆಗಳನ್ನು
ರದ್ದುಪಡಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬುಧವಾರ ನಡೆಯುತ್ತಿರುವ ಬಾರುಕೋಲು ಚಳವಳಿಯಲ್ಲಿ ಭಾಗವಹಿಸಲು ತಾಲೂಕಿನಿಂದ ತೆರಳುತ್ತಿದ್ದ ರೈತರನ್ನು ಪೊಲೀಸರು ತಡೆದ ಘಟನೆ ನಡೆಯಿತು. ಆನಂತರ ಕಡಿಮೆ ಸಂಖ್ಯೆಯಲ್ಲಿ ಬೆಂಗಳೂರಿಗೆ ತೆರಳಲು ಅವಕಾಶ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ, ತಾಲೂಕು ಅಧ್ಯಕ್ಷ ಹನುಮೇಗೌಡ, ಮುಖಂಡರಾದ ಸತೀಶ್, ಉಮಾದೇವಿ, ಶಿರವಾರ ರವಿ,ಕೊರೊನಾ ಲಾಕ್ ಡೌನ್ ಆದಾಗ ರೈತರ ನೆರವಿಗೆ ಬಾರದ ಸರ್ಕಾರ ಈಗ ರೈತರ ವಿರುದ್ಧ ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೆ ತಂದಿದೆ.
ಪ್ರಜಾಪ್ರಭುತ್ವ ವಿರೋಧಿ ಮಾರ್ಗದ ಮೂಲಕ ಕಾನೂನುಗಳನ್ನು ಜಾರಿಗೆ ತರುವ ಜನವಿರೋಧಿ ಆಡಳಿತವಾಗಿದೆ ಎಂದರು. ಇಡೀ ದೇಶದಲ್ಲಿ ಇವತ್ತು ಬಿಜೆಪಿ ಆಡಳಿತದ ವಿರುದ್ಧ ರೈತರು ತಿರುಗಿಬಿದ್ದಿದ್ದಾರೆ. ಇನ್ನಾದರು ರೈತಪರಕಾಯ್ದೆ ಜಾರಿಗೆ ತರಬೇಕು. ಇಲ್ಲದಿದ್ದರೆ ಬಾರುಕೋಲಿನ ಮೂಲಕ ಬಡಿದೆಚ್ಚರಿಸಲಾಗುವುದು. ರೈತರು ಮಾಡುವುದು ಸದಾ ಶಾಂತಿಯುತ, ಗಾಂಧೀಜಿ ಮಾರ್ಗದ ಹೋರಾಟ. ಇದಕ್ಕೆ ಅಡ್ಡಿಪಡಿಸುವ ಹಕ್ಕು ಯಾರಿಗೂ ಇಲ್ಲ. ನಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲಿಸುವ
ಮಾತೇ ಇಲ್ಲ ಎಂದರು.ಬೆಂಗಳೂರಿನಲ್ಲಿ ನಡೆಯುತ್ತಿರುವ ಬಾರುಕೋಲು ಹೋರಾಟಕ್ಕೆ ತಾಲೂಕಿನಿಂದಲು ಚಾಟಿಗಳೊಂದಿಗೆ ಭಾಗವಹಿಸಿದ್ದರು.
ಇದನ್ನೂ ಓದಿ:“ಎಲ್ಲಿದ್ದರು ಇವರೆಲ್ಲಾ”? ರೈತ ನಾಯಕರ ಮುಂದೆ ಸಾಲು ಸಾಲು ಪ್ರಶ್ನೆಯಿಟ್ಟ ಕುಮಾರಸ್ವಾಮಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ