ಅಡಕೆ ಬೆಳೆಯತ್ತ ಚಿತ್ತ ಹರಿಸಿದ ಅನ್ನದಾತ

ಉದ್ಯೋಗ ಖಾತ್ರಿಯಲ್ಲಿ ಅಡಕೆ ಬೆಳೆ ವಿಸ್ತರಣೆಗೆ ಪ್ರೋತ್ಸಾಹ ಹಿನ್ನೆಲೆ ; ಜಿಲ್ಲೆಯ 2494 ಹೆಕ್ಟೇರ್‌ನಲ್ಲಿ ಅಡಕೆ ಬೆಳೆ

Team Udayavani, Jun 12, 2022, 4:47 PM IST

20

ಹಾವೇರಿ: ಅರೆಮಲೆನಾಡು ಪ್ರದೇಶವಾದ ಜಿಲ್ಲೆಯಲ್ಲಿ ತೋಟಗಾರಿಕಾ ಬೆಳೆಗಿಂತ ಕೃಷಿ ಬೆಳೆಗೇ ರೈತರು ಒತ್ತು ನೀಡುತ್ತ ಬರುತ್ತಿದ್ದರು. ಆದರೆ, ಇತ್ತೀಚೆಗೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅಡಕೆ ಬೆಳೆ ವಿಸ್ತರಣೆಗೆ ಪ್ರೋತ್ಸಾಹ ನೀಡುತ್ತಿರುವ ಹಿನ್ನೆಲೆಯಲ್ಲಿ ರೈತರು ಅಡಕೆ ಬೆಳೆಗೆ ಒಲವು ತೋರುತ್ತಿದ್ದು, ಕೇವಲ ಎರಡು ವರ್ಷಗಳಲ್ಲಿ ಜಿಲ್ಲೆಯಲ್ಲಿ ಬರೋಬ್ಬರಿ 2494 ಹೆಕ್ಟೇರ್‌ನಷ್ಟು ಅಡಕೆ ಬೆಳೆ ವಿಸ್ತಾರಗೊಂಡಿದೆ.

ಜಿಲ್ಲೆಯ ಬಹುತೇಕ ರೈತರು ಗೋವಿನಜೋಳ, ಶುಂಠಿ, ಹತ್ತಿ, ಮೆಣಸಿನಕಾಯಿ ಸೇರಿದಂತೆ ಇತರೆ ಪ್ರಮುಖ ಬೆಳೆ ಬೆಳೆಯುತ್ತಿದ್ದರು. ಆದರೆ, ಇತ್ತೀಚಿನ ವರ್ಷಗಳಲ್ಲಿ ಶುಂಠಿ, ಮಾವು ಬೆಳೆಯತ್ತ ಒಲವು ತೋರಿದ್ದ ರೈತರು, ಕಳೆದ ಎರಡು ವರ್ಷಗಳಿಂದ ಅಡಕೆ ಬೆಳೆಯತ್ತ ಚಿತ್ತ ನೆಟ್ಟಿದ್ದಾರೆ. ಹಾನಗಲ್ಲ, ಹಿರೇಕೆರೂರು, ಬ್ಯಾಡಗಿ ತಾಲೂಕುಗಳಲ್ಲಿ ಅಡಕೆ ಕ್ಷೇತ್ರ ಹೆಚ್ಚುತ್ತಿದೆ. ಕ್ವಿಂಟಲ್‌ ಅಡಕೆಗೆ ಸರಿಸುಮಾರು 50 ಸಾವಿರ ರೂ. ಬಂದಿರುವುದೇ ಇದಕ್ಕೆ ಮುಖ್ಯ ಕಾರಣವಾದರೆ, ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅಡಕೆ ಬೆಳೆ ವಿಸ್ತರಣೆಗೆ ಪ್ರೋತ್ಸಾಹ ಸಿಗುತ್ತಿರುವುದು ಮತ್ತೂಂದು ಕಾರಣವಾಗಿದೆ.

ಅಡಕೆಯತ್ತ ರೈತರ ಚಿತ್ತ: ಶಿರಸಿ ತಾಲೂಕಿಗೆ ಹೊಂದಿಕೊಂಡಿರುವ ಹಾನಗಲ್ಲ ತಾಲೂಕು, ಶಿಕಾರಿಪುರದ ಪಕ್ಕದಲ್ಲಿರುವ ಹಿರೇಕೆರೂರು ತಾಲೂಕುಗಳಲ್ಲಿ ಮೊದಲಿನಿಂದಲೂ ಅಡಕೆ ಬೆಳೆಯುವ ರೈತರಿದ್ದರೂ ಅಷ್ಟಾಗಿ ಅಡಕೆ ಬೆಳೆಯುವವರ ಸಂಖ್ಯೆ ಹೆಚ್ಚಾಗಿರಲಿಲ್ಲ. ಗೋವಿನಜೋಳ, ಹತ್ತಿ ಬೆಳೆಯನ್ನೇ ನೆಚ್ಚಿಕೊಂಡಿದ್ದರು. ಬೀಜೋತ್ಪಾದನೆಯೊಂದಿಗೆ ನಿಧಾನವಾಗಿ ಶುಂಠಿ, ಮಾವು ಬೆಳೆಯತ್ತ ಮುಖ ಮಾಡಿದ್ದರು. ಕಳೆದ ಕೆಲ ವರ್ಷಗಳಿಂದ ಹಾನಗಲ್ಲ ಮತ್ತು ಹಿರೇಕೆರೂರು ಭಾಗದಲ್ಲಿ ಅಡಕೆ ಬೆಳೆಯುವವರ ಸಂಖ್ಯೆ ಹೆಚ್ಚಿತ್ತು. ಕಳೆದ ಎರಡು ವರ್ಷಗಳಿಂದ ಅಡಕೆ ಧಾರಣೆ ಗಗನಮುಖೀಯಾಗಿರುವುದರಿಂದ ನೀರಾವರಿ ಸೌಲಭ್ಯ ಇರುವ ರೈತರೆಲ್ಲರೂ ಅಡಕೆ ತೋಟವನ್ನೇ ಮಾಡಲು ಮುಂದಾಗುತ್ತಿದ್ದಾರೆ.

ಧಾರಣೆ-ನೀರಾವರಿ ಸೌಲಭ್ಯ: ಜಿಲ್ಲೆಯ ಹಾನಗಲ್ಲ, ಹಿರೇಕೆರೂರು ಮತ್ತು ಬ್ಯಾಡಗಿ ತಾಲೂಕುಗಳಲ್ಲಿ ಕೆರೆ ತುಂಬಿಸುವ ಯೋಜನೆ, ಹತ್ತಾರು ಏತ ನೀರಾವರಿ ಯೋಜನೆಗಳು ಅನುಷ್ಠಾನಗೊಂಡಿದ್ದರ ಫಲವಾಗಿ ಬಹುವಾರ್ಷಿಕ ಅಡಕೆ ಬೆಳೆಯಲು ರೈತರು ಆಸಕ್ತಿ ತೋರುತ್ತಿದ್ದಾರೆ. ಉತ್ತಮ ಮಳೆಯಾಗುತ್ತಿರುವುದರಿಂದ ಕೆರೆಗಳು ತುಂಬಿರುವುದರಿಂದ ಅಂತರ್ಜಲ ಮಟ್ಟವೂ ಏರಿಕೆಯಾಗಿದೆ. ಬೋರ್‌ವೆಲ್‌ ಮೂಲಕ ನೀರಾವರಿ ಸೌಲಭ್ಯ ಮಾಡಿಕೊಂಡು ಅನೇಕರು ಅಡಕೆ ಬೆಳೆಯುತ್ತಿದ್ದಾರೆ.

ಅಡಕೆ ದರವೂ ರೈತರನ್ನು ಆಕರ್ಷಿಸುತ್ತಿದೆ. ಕಳೆದ ಕೆಲವು ವರ್ಷಗಳಿಂದ ಸ್ಥಿರವಾದ ದರ ಇರುವುದರ ಜತೆಗೆ ಕ್ವಿಂಟಲ್‌ ಅಡಕೆಗೆ 50 ಸಾವಿರ ರೂ., ಆಸುಪಾಸಿನಲ್ಲಿರುವುದರಿಂದ ರೈತರು ಈ ಬೆಳೆಯತ್ತ ಚಿತ್ತ ನೆಟ್ಟಿದ್ದಾರೆ. ಅಡಕೆ ಬೆಳೆಗೆ ಕಾರ್ಮಿಕರ ಸಂಖ್ಯೆಯೂ ಹೆಚ್ಚು ಬೇಕಿಲ್ಲದಿರುವುದು ಅನುಕೂಲಕರವಾಗಿದೆ. ಇದರೊಂದಿಗೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅಡಕೆ ಬೆಳೆ ವಿಸ್ತರಣೆಗೆ ಅವಕಾಶ ದೊರೆತ ಮೇಲೆ ಅನೇಕರು ಇದರ ಪ್ರಯೋಜನ ಪಡೆದಿದ್ದಾರೆ.

ಮಾವು ಕ್ಷೇತ್ರದಲ್ಲಿ ಇಳಿಕೆ:ಹಾನಗಲ್ಲ ಭಾಗದಲ್ಲಿ ಮಾವು ಬೆಳೆಯುತ್ತಿದ್ದ ರೈತರು ಈಗ ಅಲ್ಲಿ ಅಡಕೆ ತೋಟ ಮಾಡುತ್ತಿದ್ದಾರೆ. ಅಕಾಲಿಕ ಮಳೆ, ಅತಿವೃಷ್ಟಿ ಇನ್ನಿತರ ಕಾರಣದಿಂದ ಮಾವು ಬೆಳೆಗಾರರು ನಷ್ಟ ಅನುಭವಿಸುತ್ತ ಬಂದಿದ್ದರು. ಅಲ್ಲದೇ, ಮಾರುಕಟ್ಟೆಯೂ ಸರಿಯಾಗಿ ಇಲ್ಲದಿರುವುದು ಮಾವು ಬೆಳೆಗಾರರಿಗೆ ಸಮಸ್ಯೆಯಾಗಿತ್ತು. ಅಡಕೆಗೆ ಶಿರಸಿ ಮತ್ತು ಶಿವಮೊಗ್ಗ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗುತ್ತಿರುವುದರಿಂದ ಸಣ್ಣ, ದೊಡ್ಡ ರೈತರೆಲ್ಲ ಅಡಕೆ ಬೆಳೆಯತ್ತ ವಾಲುತ್ತಿದ್ದಾರೆ. ಅಡಕೆ ಬೆಳೆಯಿಂದ ನಷ್ಟವಿಲ್ಲ ಎಂಬ ಅಭಿಪ್ರಾಯಕ್ಕೆ ರೈತರು ಬಂದಿದ್ದಾರೆ.

2494 ಹೆಕ್ಟೇರ್‌ ಅಡಕೆ ಬೆಳೆ ವಿಸ್ತರಣೆ:

ಜಿಲ್ಲೆಯಲ್ಲಿ 2020ರವರೆಗೆ 7087 ಹೆಕ್ಟೇರ್‌ ಪ್ರದೇಶದಲ್ಲಿ ಅಡಕೆ ಬೆಳೆಯಿತ್ತು. ಅಲ್ಲಿಂದ ಕೇವಲ 2 ವರ್ಷಗಳ ಅವಧಿಯಲ್ಲಿ ಅದು 10 ಸಾವಿರ ಹೆಕ್ಟೇರ್‌ಗೆ ವಿಸ್ತಾರಗೊಂಡಿದೆ. 2021ನೇ ಸಾಲಿನಲ್ಲಿ 899 ಹೆಕ್ಟೇರ್‌ ಹೆಚ್ಚಿದರೆ, 2021-22ನೇ ಸಾಲಿನಲ್ಲಿ 1593 ಹೆಕ್ಟೇರ್‌ನಲ್ಲಿ ಅಡಕೆ ಬೆಳೆಯಲಾಗಿದೆ. ಅದರಲ್ಲೂ ಹಾನಗಲ್ಲ ತಾಲೂಕಿನಲ್ಲಿ 1016 ಹೆಕ್ಟೇರ್‌, ಹಿರೇಕೆರೂರು ತಾಲೂಕಿನಲ್ಲಿ 812, ಬ್ಯಾಡಗಿ ತಾಲೂಕಿನಲ್ಲಿ 391 ಹೆಕ್ಟೇರ್‌, ರಾಣಿಬೆನ್ನೂರು ತಾಲೂಕಿನಲ್ಲಿ 133 ಹೆಕ್ಟೇರ್‌, ಶಿಗ್ಗಾವಿ ತಾಲೂಕಿನಲ್ಲಿ 100 ಹೆಕ್ಟೇರ್‌ ಸೇರಿದಂತೆ ಎರಡು ವರ್ಷಗಳ ಅವಧಿಯಲ್ಲಿ 2494 ಹೆಕ್ಟೇರ್‌ ಅಡಕೆ ಬೆಳೆ ಪ್ರದೇಶ ವಿಸ್ತರಣೆಯಾಗಿದೆ.

‌ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಅಡಕೆ ಬೆಳೆ ಪ್ರದೇಶ ಏಕಾಏಕಿ ಹೆಚ್ಚಾಗಿದೆ. ಉತ್ತಮ ದರ ಸಿಗುತ್ತಿರುವುದು ಹಾಗೂ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅಡಕೆ ಕ್ಷೇತ್ರ ವಿಸ್ತರಣೆಗೆ ಅವಕಾಶ ಇರುವುದರಿಂದ ರೈತರು ಆ ಬೆಳೆಯತ್ತ ಆಸಕ್ತಿ ತೋರುತ್ತಿದ್ದಾರೆ. ಎರಡೇ ವರ್ಷಗಳಲ್ಲಿ ಸುಮಾರು ಎರಡೂವರೆ ಸಾವಿರ ಹೆಕ್ಟೇರ್‌ ಅಡಕೆ ಬೆಳೆ ಕ್ಷೇತ್ರ ಹೆಚ್ಚಿದೆ. –ಎಲ್‌.ಪ್ರದೀಪ್‌, ತೋಟಗಾರಿಕಾ ಇಲಾಖೆ ಉಪನಿರ್ದೇಶಕರು     

-ವಿಶೇಷ ವರದಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.