Agri: ರೈತರ ಸಾಲ ಮನ್ನಾ ಮಾಡಿ: ಅಶೋಕ್
ಸಾಲ ಮನ್ನಾಕ್ಕೆ ಆಗ್ರಹಿಸಿ ಅಧಿವೇಶನದಲ್ಲಿ ನಿಲುವಳಿ
Team Udayavani, Nov 22, 2023, 12:24 AM IST
ಕಲಬುರಗಿ: ರಾಜ್ಯದಲ್ಲಿ ಮುಂಗಾರು-ಹಿಂಗಾರು ಎರಡೂ ಸಂಪೂರ್ಣ ಕೈ ಕೊಟ್ಟಿದ್ದರಿಂದ ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು, ರಾಜ್ಯ ಸರಕಾರ ಕೂಡಲೇ ಸಾಲ ಮನ್ನಾ ಮಾಡಿ ಅವರಲ್ಲಿ ಆತ್ಮವಿಶ್ವಾಸ ತುಂಬಬೇಕೆಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದರು.
ವಿಪಕ್ಷ ನಾಯಕರಾದ ಅನಂತರ ಕಲ್ಯಾಣ ಕರ್ನಾಟಕದ ತೊಗರಿ ನಾಡು ಕಲಬುರಗಿಯಿಂದ ಬರ ಅಧ್ಯಯನ ಆರಂಭಿಸಿ, ವಾಸ್ತವ ಸ್ಥಿತಿಗತಿ ಅವಲೋಕಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಹಿಂದೆ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಆಡಳಿತದ ಅವ ಧಿಯಲ್ಲಿ ಬರ ಮತ್ತು ಪ್ರವಾಹದಿಂದ ಆದ ಹಾನಿಗೆ ತಿಂಗಳೊಳಗೆ ರಾಜ್ಯ ಸರಕಾರದಿಂದ ಮೊದಲು ಪರಿಹಾರ ನೀಡಿ ಅನಂತರ ಕೇಂದ್ರಕ್ಕೆ ಸಹಾಯದ ಪರಿಹಾರ ಕೇಳಲಾಗಿದೆ. ಬೇಕಿದ್ದರೆ ಸಿಎಂ-ಡಿಸಿಎಂ ದಾಖಲೆಗಳನ್ನು ನೋಡಲಿ ಎಂದು ಸವಾಲು ಹಾಕಿದರು.
ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾವ
ರಾಜ್ಯದ ಬರಗಾಲ ಪರಿಸ್ಥಿತಿ, ರೈತರಿಗೆ ಸಮರ್ಪಕ ಪರಿಹಾರ ದೊರಕುವ ಮತ್ತು ಸಾಲ ಮನ್ನಾ ಹಾಗೂ ರಾಜ್ಯ ಸರಕಾರದ ವೈಫಲ್ಯಗಳನ್ನು ಬೆಳಗಾವಿ ಅ ಧಿವೇಶನದಲ್ಲಿ ನಿಲುವಳಿ ಮಂಡಿಸಲಾಗುವುದು. ಸರಕಾರದ ವಿರುದ್ಧ ಪ್ರಬಲವಾಗಿ ಹೋರಾಡಲು ಸರಕಾರದರೇ ಆಸ್ತ್ರಗಳನ್ನು ನೀಡಿದ್ದಾರೆ. ಸಮರ್ಪಕ ಪರಿಹಾರ ದೊರಕುವವರೆಗೂ ತಾವು ಹೋರಾಟದಿಂದ ವಿಶ್ರಮಿಸುವುದಿಲ್ಲ ಎಂದರು.
ಪಹಣಿ ದರ ಹೆಚ್ಚಳಕ್ಕೆ ಆಕ್ರೋಶ
ಜಿಲ್ಲೆಯ ಕಡಗಂಚಿ ಗ್ರಾಮದಲ್ಲಿ ಬರಗಾಲ ವೀಕ್ಷಿಸಿ ರೈತರೊಂದಿಗೆ ಸಂವಾದ ನಡೆಸಿದ ವೇಳೆ ರೈತರೊಬ್ಬರು ಸರಕಾರ ರಾತ್ರೋರಾತ್ರಿ ಪಹಣಿ ದರ ಹೆಚ್ಚಿಸಿದ ಬಗ್ಗೆ ಅಲವತ್ತುಕೊಂಡರು. ಬರಗಾಲದಿಂದ ತತ್ತರಿಸಿರುವ ರೈತರಿಗೆ ಗಾಯದ ಮೇಲೆ ಗೆರೆ ಎಳೆದಿರುವಂತೆ ಪಹಣಿ ದರ 10 ರೂ. ಇದ್ದಿರುವುದನ್ನು ಒಮ್ಮೆಲೆ 25 ರೂ.ಗೆ ಹೆಚ್ಚಳ ಮಾಡಲಾಗಿದೆ. ಪಹಣಿ ದರ ಹೆಚ್ಚಳ ವಾಪಸ್ ಪಡೆಯಬೇಕೆಂದು ವಿಪಕ್ಷ ನಾಯಕ ಅಶೋಕ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ