ಪೊಲೀಸರ ಹಿಂಸೆಗೆ ತಂದೆ, ಮಗ ಬಲಿ?
Team Udayavani, Jun 28, 2020, 10:48 AM IST
ಚೆನ್ನೈ: ಪೊಲೀಸ್ ಬಂಧನಕ್ಕೊಳಪಟ್ಟಿದ್ದ ಅಂಗಡಿ ಮಾಲಕ ಪಿ.ಜಯರಾಜ್ ಹಾಗೂ ಅವರ ಪುತ್ರ ಬೆನಿಕ್ಸ್ ಅವರು ಬಂಧನದಿಂದ ಬಿಡುಗಡೆಯಾಗಿ ಬಂದ 4 ದಿನದಲ್ಲಿ ಮೃತಪಟ್ಟಿದ್ದು, ಪೊಲೀಸರ ಹಿಂಸೆಯಿಂದಲೇ ಅವರು ಸಾವನ್ನಪ್ಪಿರುವ ಬಗ್ಗೆ ಅನುಮಾನಗಳು ಎದ್ದಿವೆ. ಈ ಬಗ್ಗೆ ರಾಜಕೀಯ, ಸಾಮಾಜಿಕ ವಲಯಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಕಳೆದ ಶುಕ್ರವಾರದಂದು ಲಾಕ್ಡೌನ್ ನಿಯಮಗಳನ್ನು ಮೀರಿಯೂ ತಮ್ಮ ಮೊಬೆ„ಲ್ ಮಳಿಗೆಯನ್ನು ತೆಗೆದಿದ್ದ ಕಾರಣಕ್ಕೆ ಅಪ್ಪ-ಮಗನಾದ ಪಿ.ಜಯರಾಜ್ ಮತ್ತು ಬೆನಿಕ್ಸ್ ಅವರನ್ನು ಸಾಥನ್ಕುಲಂ ಪೊಲೀಸರು ವಶಕ್ಕೆ ಪಡೆದು, ಠಾಣೆಗೆ ಕರೆದೊಯ್ದಿದ್ದರು. ಸಣ್ಣ ಕಾರಣಕ್ಕಾಗಿ ಠಾಣೆಯಲ್ಲಿ ಅವರಿಬ್ಬರ ಮೇಲೆ ಪೊಲೀಸರು ಮನಸೋಯಿಚ್ಛೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಪರಿಣಾಮ ಠಾಣೆಯಿಂದ ಬಿಡುಗಡೆ ಯಾಗಿ ಬಂದ ನಾಲ್ಕೇ ದಿನದಲ್ಲಿ ತಂದೆ, ಮಗ ಇಬ್ಬರೂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ವಿಚಾರ ವೈರಲ್ ಆಗುತ್ತಿದ್ದಂತೆ, ನೆಟ್ಟಿಗರು ಈ ಪ್ರಕರಣವನ್ನು ಇತ್ತೀಚೆಗೆ ಅಮೆರಿಕದಲ್ಲಿ ಪೊಲೀಸ್ ದೌರ್ಜನ್ಯದಿಂದ ಮೃತಪಟ್ಟ ಫ್ಲಾಯ್ಡ ಪ್ರಕರಣಕ್ಕೆ ಹೋಲಿಸಿದ್ದಾರೆ. ಡಿಎಂಕೆ ನಾಯಕ ಸ್ಟಾಲಿನ್ ಅವರು ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇದೇ ವೇಳೆ, ಎಡಿಎಂಕೆ ನಾಯಕರು ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಪೊಲೀಸರಿಗೆ ಕಾನೂನನ್ನು ಕೈಗೆ ತೆಗೆದುಕೊಳ್ಳುವ ಅವಕಾಶವನ್ನು ಸರಕಾರವೇ ಕೊಟ್ಟಿದೆ ಎಂದಿದ್ದಾರೆ. ನಟಿಯರಾದ ಪ್ರಿಯಾಂಕಾ ಚೋಪ್ರಾ, ಸಮಂತಾ, ಕಾಜೋಲ್ ಅಗರ್ವಾಲ್, ಕ್ರಿಕೆಟಿಗ ಶ್ರೀಖರ ಧವನ್ ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ