ಭ್ರೂಣ ಹತ್ಯೆ: ಸ್ಕ್ಯಾನಿಂಗ್ ಯಂತ್ರಗಳ ಡಾಟಾ ಅಳಿಸಿ ಹಾಕಿದ ಸೆಂಟರ್ಗಳು
Team Udayavani, Dec 20, 2023, 11:42 PM IST
ಮಂಡ್ಯ: ಸ್ಕ್ಯಾನಿಂಗ್ ಯಂತ್ರಗಳಲ್ಲಿರುವ ಡಾಟಾವನ್ನು ಅಳಿಸಿ ಹಾಕಿರುವ ಹಿನ್ನೆಲೆಯಲ್ಲಿ ನಾಗಮಂಗಲ ಪಟ್ಟಣದ ಎರಡು ಸ್ಕ್ಯಾನಿಂಗ್ ಸೆಂಟರ್ಗಳಿಗೆ ಅ ಧಿಕಾರಿಗಳು ಬೀಗ ಜಡಿದಿದ್ದಾರೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗವೇ ಇರುವ ಲಕ್ಷ್ಮೀ ಡಯಾಗ್ನೊಸ್ಟಿಕ್ ಸೆಂಟರ್ ಮತ್ತು ಕಾವೇರಿ ಡಯಾಗ್ನೊàಸ್ಟಿಕ್ ಸೆಂಟರ್ಗಳ ಮೇಲೆ ಉಪವಿಭಾಗಾಧಿ ಕಾರಿ ನಂದೀಶ್ ನೇತೃತ್ವದ ಆರೋಗ್ಯ ಅಧಿಕಾರಿಗಳ ತಂಡ ದಾಳಿ ನಡೆಸಿ ಸೀಜ್ ಮಾಡಿದೆ.
ಸ್ಕ್ಯಾನಿಂಗ್ ಸೆಂಟರ್ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ವೈದ್ಯರು ಅಲ್ಲಿಂದ ಕಾಲ್ಕಿತ್ತರೆ, ಸಿಬಂದಿ ಗಲಿಬಿಲಿಗೊಂಡಿದ್ದಾರೆ. ಅಧಿ ಕಾರಿಗಳ ಪರಿಶೀಲನೆಗೆ ಸಿಬಂದಿ ಕಳ್ಳಾಟ ಆಡಿದ್ದಾರೆ. ಸಿಸ್ಟಂನಲ್ಲಿದ್ದ ಡಾಟಾ ಅಳಿಸಿ ಹಾಕುವ ಮೂಲಕ ಅಧಿಕಾರಿಗಳ ಕಣ್ತಪ್ಪಿಸಲು ಯತ್ನ ನಡೆಸಿದ್ದಾರೆ. ಅಲ್ಲದೆ, ಅಧಿಕಾರಿಗಳಿಗೆ ಸಮರ್ಪಕವಾದ ದಾಖಲೆ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ. ಕಾವೇರಿ, ಲಕ್ಷ್ಮೀ ಡಯಾಗ್ನೊಸ್ಟಿಕ್ ಸೆಂಟರ್ನಲ್ಲಿ 2 ವರ್ಷಗಳ ಮಾಹಿತಿ ಅಳಿಸಿ ಹಾಕಿರುವ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ದೊರೆತಿದೆ. ಅಲ್ಲದೆ, ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ತಂತ್ರ (ದುರ್ಬಳಕೆ ಮತ್ತು ತಡೆ) ಕಾಯ್ದೆಯ ನಿಯಮ ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ 2 ಸ್ಕ್ಯಾನಿಂಗ್ ಸೆಂಟರ್ಗಳನ್ನು ಬೀಗ ಜಡಿದು ಸೀಜ್ ಮಾಡಿದ್ದಾರೆ. ಜತೆಗೆ ಸಮರ್ಪಕ ಉತ್ತರ ನೀಡುವಂತೆ ನೋಟಿಸ್ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ
108 ಆ್ಯಂಬುಲೆನ್ಸ್ ಸಿಬಂದಿ ಮುಷ್ಕರ: ಇಂದು ನಿರ್ಧಾರ
Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್
D. K. Shivakumar ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ
ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ
Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ
Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ
Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ
ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’