Mandya: ಶೆಡ್‌ನ‌ಲ್ಲಿ ನಡೆಯುತ್ತಿತ್ತು ಭ್ರೂಣಲಿಂಗ ಪತ್ತೆ

-ಮಂಡ್ಯ ತಾಲೂಕಿನ ಹಾಡ್ಯ ಗ್ರಾಮದ ಆಲೆಮನೆ ಶೆಡ್‌- ಯಾರಿಗೂ ತಿಳಿಯದಂತೆ ಪ್ಲಾನ್‌ ಮಾಡಿದ್ದ ಖತರ್ನಾಕ್‌ ಗ್ಯಾಂಗ್‌

Team Udayavani, Nov 26, 2023, 8:08 PM IST

crime scene

ಮಂಡ್ಯ: ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಪೊಲೀಸರು ಬೇ ಧಿಸಿರುವ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣವು ರಾಜಾÂದ್ಯಂತ ಸದ್ದು ಮಾಡುತ್ತಿದೆ. ಆದರೆ ಅದರ ಮೂಲ ಮಂಡ್ಯದ ಆಲೆಮನೆಯಲ್ಲಿ ಎಂಬುದನ್ನು ಕೇಳಿ ಜಿಲ್ಲೆ ಸೇರಿದಂತೆ ಇಡೀ ರಾಜ್ಯಕ್ಕೆ ಶಾಕ್‌ ಹೊಡೆದಂತಾಗಿದೆ.

ತಾಲೂಕಿನ ದುದ್ದ ಹೋಬಳಿಯ ಹಾಡ್ಯ ಗ್ರಾಮದ ಜನನಿಬಿಡ ಪ್ರದೇಶದ ಆಲೆಮನೆಗೆ ಹೊಂದಿಕೊಂಡಂತಿರುವ ಶೆಡ್‌ನ‌ಲ್ಲಿ ಕೃತ್ಯ ನಡೆಯುತ್ತಿತ್ತು. ಮಂಡ್ಯದ ಆಲೆಮನೆ ದಂಧೆಕೋರರಿಗೆ ಹಾಟ್‌ ಸ್ಪಾಟ್‌ ಆಗಿದ್ದರ ಬಗ್ಗೆ ರೋಚಕ ಸಂಗತಿ ಪತ್ತೆಯಾಗಿದೆ.

ಸ್ಕ್ಯಾನಿಂಗ್‌ ಮಾಡುತ್ತಿದ್ದ ಜಾಗ ನೋಡಿದ ಪೊಲೀಸರಿಗೂ ಶಾಕ್‌ ಆಗಿತ್ತು. ಸ್ಪಾಟ್‌ ಮಹಜರ್‌ಗೆ ಬಂದಿದ್ದ ಬೈಯಪ್ಪನಹಳ್ಳಿ ಪೊಲೀಸರೂ ಅಚ್ಚರಿ ವ್ಯಕ್ತಪಡಿಸಿದ್ದಾರೆನ್ನಲಾಗಿದೆ. ಆಲೆಮನೆಗೆ ಹೊಂದಿಕೊಂಡಂತಿದ್ದ ಗದ್ದೆ ಬಯಲಿನಲ್ಲಿ ಸಣ್ಣ ಶೆಡ್‌ನ‌ಲ್ಲಿ ನಡೆಯುತ್ತಿತ್ತು. ಚಿಕ್ಕ ಶೆಡ್‌ನ‌ಲ್ಲಿ ಸ್ಕಾÂನಿಂಗ್‌ ಯಂತ್ರ ಬಳಸಿ ಭ್ರೂಣ ಲಿಂಗ ಪತ್ತೆ ಮಾಡಲಾಗುತ್ತಿತ್ತು. ಆರೋಪಿ ನವೀನ್‌ ಸಂಬಂಧಿಕರಿಗೆ ಸೇರಿದ್ದ ಆಲೆಮನೆಯಾಗಿತ್ತು. ಗುತ್ತಿಗೆ ಆಧಾರದಲ್ಲಿ ನವೀನ್‌ ಆಲೆಮನೆ ನಡೆಸುತ್ತಿದ್ದ. ಮತ್ತೂಬ್ಬ ಆರೋಪಿ ನಯನ್‌ಕುಮಾರ್‌ ಜೊತೆ ಸೇರಿ ಆಲೆಮನೆ ಜೊತೆಗೆ ಭ್ರೂಣ ಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆ ದಂಧೆ ನಡೆಸಲಾಗುತ್ತಿತ್ತು. ನವೀನ್‌ ಹಾಗೂ ನಯನ್‌ಕುಮಾರ್‌ ಭಾವ ಭಾಮೈದುನರಾಗಿದ್ದರು ಎಂದು ತಿಳಿದು ಬಂದಿದೆ.

ಮಧ್ಯವರ್ತಿಗಳು ಹಾಗೂ ವೈದ್ಯರೊಂದಿಗೆ ಸೇರಿ ದಂಧೆಯಲ್ಲಿ ತೊಡಗಿದ್ದರು. ಜಿಲ್ಲೆಯ ನಾಗಮಂಗಲ, ಮಳವಳ್ಳಿ, ಕೆ.ಆರ್‌.ಪೇಟೆ ತಾಲೂಕಿಗೂ ಸ್ಕ್ಯಾನಿಂಗ್‌ ಯಂತ್ರದ ಮೂಲಕ ಪತ್ತೆ ಮಾಡಿ ನಂತರ ಇಲ್ಲಿಗೆ ಕರೆತಂದು ಭ್ರೂಣಹತ್ಯೆ ಮಾಡಲಾಗುತ್ತಿತ್ತು. ಹಾಡ್ಯ ಗ್ರಾಮದ ಮಧ್ಯೆಯೇ ಕೃತ್ಯ ನಡೆದರೂ ಯಾರಿಗೂ ಗೊತ್ತಾಗದಂತೆ ಆರೋಪಿಗಳು ಪ್ಲ್ಯಾನ್‌ ಮಾಡಿದ್ದರು. ಗೂಗಲ್‌ ಮ್ಯಾಪ್‌ನಲ್ಲೂ ಸ್ಥಳ ಪತ್ತೆ ಹಚ್ಚಲು ಸಾಧ್ಯವಾಗುವುದಿಲ್ಲ. ಅಲ್ಲದೆ, ಸ್ಥಳೀಯರಿಗೂ ವಿಳಾಸ ಗೊತ್ತಾಗದಂತೆ ಸ್ಥಳದಲ್ಲಿ ಕೃತ್ಯ ನಡೆಯುತ್ತಿತ್ತು.

ಕಳೆದ 2 ವರ್ಷಗಳಿಂದ ಇದುವರೆಗೂ 900ಕ್ಕೂ ಹೆಚ್ಚು ಭ್ರೂಣ ಹತ್ಯೆ ಮಾಡಲಾಗಿದೆ ಎಂದು ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರ ತನಿಖೆಯಲ್ಲಿ ಹೊರಬಿದ್ದಿದೆ. ಈಗಾಗಲೇ ಪ್ರಕರಣ ಸಂಬಂಧ 9 ಜನರನ್ನು ಬಂಧಿಸಲಾಗಿದೆ.

ಈಗಾಗಲೇ ನಯನ್‌ಕುಮಾರ್‌, ನವೀನ್‌, ಶಿವನಂಜೇಗೌಡ, ವಿರೇಶ್‌ ಎಂಬುವರನ್ನು ಬಂ ಧಿಸಲಾಗಿದೆ. ತನಿಖೆ ನಂತರ ಇಬ್ಬರು ವೈದ್ಯರು, ಲ್ಯಾಬ್‌ ಟೆಕ್ನಿಷಿಯನ್‌ ಹಾಗೂ ರಿಸೆಪ್ಷನಿಸ್ಟ್‌ ಅವರನ್ನು ಬಂಧಿ ಸಲಾಗಿದೆ.

138 ಮಂದಿ ಅಪ್ರಾಪ್ತರು
ಭ್ರೂಣಹತ್ಯೆ ಹಾಗೂ ಲಿಂಗಾನುಪಾತದ ಪರಿಣಾಮ ಮಂಡ್ಯ ಜಿಲ್ಲೆಯಲ್ಲಿ ಕಳೆದ ಏಪ್ರಿಲ್‌ನಿಂದ ಅಕ್ಟೋಬರ್‌ ತಿಂಗಳವರೆಗೆ 9425 ಗರ್ಭಿಣಿಯರ ನೋಂದಣಿಯಾಗಿದ್ದು, ಅದರಲ್ಲಿ 138 ಅಪ್ರಾಪ್ತ ವಯಸ್ಕರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಅದರಲ್ಲಿ ಮಂಡ್ಯ ತಾಲೂಕಿನ 79, ಕೆ.ಆರ್‌.ಪೇಟೆ-7, ನಾಗಮಂಗಲ-20, ಶ್ರೀರಂಗಪಟ್ಟಣ-22 ಹಾಗೂ ಪಾಂಡವಪುರ ತಾಲೂಕಿನಲ್ಲಿ 10 ಪ್ರಕರಣ ವರದಿಯಾಗಿರುವುದು ಮತ್ತೂಂದು ಆತಂಕಕ್ಕೆ ಕಾರಣವಾಗಿದೆ.

ಯಾರ್ಯಾರು ಇದರಲ್ಲಿ ಭಾಗಿಯಾಗಿದ್ದಾರೆ ಅವರಿಗೆ ತಕ್ಕ ಶಿಕ್ಷೆಯಾಗಬೇಕು. ಅ ಧಿಕಾರಿಗಳ ಜೊತೆ ಮಾತನಾಡಿ ಸೂಕ್ತ ಕ್ರಮ ವಹಿಸಲಾಗುವುದು. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು.
-ದರ್ಶನ್‌ ಪುಟ್ಟಣ್ಣಯ್ಯ, ಮೇಲುಕೋಟೆ ಶಾಸಕ

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.