ಬಿಜೆಪಿ ಕಚೇರಿ ಭೇಟಿಗೆ ಕೆಲ ಸಚಿವರ ಹಿಂದೇಟು?


Team Udayavani, Feb 24, 2020, 3:09 AM IST

bjp-logo-2

ಬೆಂಗಳೂರು: ವಿವಿಧ ಇಲಾಖೆಯ ಸಚಿವರು ಸುಲಭವಾಗಿ ಕಾರ್ಯಕರ್ತರಿಗೆ ಹಾಗೂ ಸಾರ್ವಜನಿಕರಿಗೆ ಲಭ್ಯವಾಗಬೇಕೆಂಬ ಸದುದ್ದೇಶದಿಂದ ಬಿಜೆಪಿ ಕೇಂದ್ರ ಕಚೇರಿಗೆ ವಾರಕ್ಕೆ ಓರ್ವ ಸಚಿವ ಭೇಟಿ ನೀಡಬೇಕು ಎಂಬ ಸೂಚನೆಯನ್ನು ರಾಜ್ಯಾಧ್ಯಕ್ಷರೇ ನೀಡಿದ್ದರೂ, ಪಾಲನೆ ಮಾತ್ರ ಸಮರ್ಪಕವಾಗಿ ಆಗುತ್ತಿಲ್ಲ.

ಹೀಗಾಗಿ ಕಾರ್ಯಕ್ರಮದ ರೂಪುರೇಷೆಯಲ್ಲೆ ಕೆಲವೊಂದು ಬದಲಾವಣೆ ಮಾಡಿ, ಸಚಿವರನ್ನು ಕಚೇರಿಗೆ ಕರತಲು ವಿಭಿನ್ನ ಪ್ರಯತ್ನಕ್ಕೆ ರಾಜ್ಯ ಬಿಜೆಪಿ ಮುಂದಾಗಿದೆ. ವಾರದಲ್ಲಿ ಯಾವುದಾದರೂ ಒಂದು ದಿನ ಓರ್ವ ಸಚಿವ ಬಿಡುವು ಮಾಡಿಕೊಂಡು ಕಚೇರಿಗೆ ಬರಬೇಕು. ಅದಕ್ಕಾಗಿ ಸಚಿವರ ತಿಂಗಳ ಪ್ರವಾಸದಲ್ಲೇ ಇದನ್ನು ಸೇರಿಸಿ, ಪೂರ್ವನಿಗದಿಯ ಕಾರ್ಯಕ್ರಮದಂತೆ ಕಾರ್ಯರೂಪಕ್ಕೆ ತರಲು ಗಂಭೀರ ಚಿಂತನೆ ನಡೆಯುತ್ತಿದೆ ಮತ್ತು ಮುಂದಿನ ವಾರದಿಂದಲೇ ಈ ವ್ಯವಸ್ಥೆ ಜಾರಿಗೆ ಬರುವ ಸಾಧ್ಯತೆಯೂ ಇದೆ ಎಂದು ಬಿಜೆಪಿಯ ಉನ್ನತ ಮೂಲ ಖಚಿತಪಡಿಸಿದೆ.

ಬಿಜೆಪಿ ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದಿದೆ. ಆದರೂ, ಬಹುತೇಕ ಸಚಿವರು ಕಚೇರಿಗೆ ಬಂದು ಹೋಗಿರುವುದು ಬಿಟ್ಟರೆ ಕಾರ್ಯಾಲಯದಲ್ಲಿ ಕುಳಿತು ಕಾರ್ಯಕರ್ತರ ಅಹವಾಲನ್ನು ಆಲಿಸಿಲ್ಲ. ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಅವರು ಈಗಾಗಲೇ ನಾಲ್ಕು ಬಾರಿ, ಚಿಕ್ಕಮಗಳೂರು ನಗರದ ಶಾಸಕರಾಗಿರುವ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಮೂರು ಬಾರಿ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ, ಗಣಿ ಸಚಿವ ಸಿ.ಸಿ.ಪಾಟೀಲ್‌, ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್‌ ಹಾಗೂ

-ಮುಜರಾಯಿ ಮತ್ತು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಈಗಾಗಲೇ ತಲಾ 2 ಬಾರಿ ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಕುಂದುಕೊರತೆ ನೀಗಿಸುವ ನಿಟ್ಟಿನಲ್ಲಿ ಅಹವಾಲುಗಳನ್ನು ಸ್ವೀಕರಿಸಿದ್ದಾರೆ. ಅಲ್ಲದೆ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಹಿತವಾಗಿ ಕೆಲವು ಸಚಿವರು ಒಂದೊಂದು ಬಾರಿ ಭೇಟಿ ನೀಡಿದ್ದಾರೆ. ಕಾನೂನು ಸಚಿವ ಮಾಧುಸ್ವಾಮಿ ಸಹಿತವಾಗಿ ಕೆಲವು ಬೆಂಗಳೂರಿನ ಮತ್ತು ಉತ್ತರ ಕರ್ನಾಟಕ ಭಾಗದ ಸಚಿವರು ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿಲ್ಲ ಎಂದು ಬಿಜೆಪಿ ಮೂಲಗಳು ಖಚಿತಪಡಿಸಿವೆ.

ನೂತನ ಸಚಿವರು ಬಂದು ಹೋಗಿದ್ದು ಮಾತ್ರ!: ಎರಡು ವಾರಗಳ ಹಿಂದೆ ಸಂಪುಟ ಸೇರಿಕೊಂಡಿರುವ ನೂತನ ಸಚಿವರಾದ ಎಸ್‌.ಟಿ.ಸೋಮಶೇಖರ್‌, ಬೈರತಿ ಬಸವರಾಜ, ನಾರಾಯಣ ಗೌಡ. ಆನಂದ ಸಿಂಗ್‌, ಶ್ರೀಮಂತ ಪಾಟೀಲ್‌, ಗೋಪಾಲಯ್ಯ, ಶಿವರಾಮ್‌ ಹೆಬ್ಟಾರ್‌, ಬಿ.ಸಿ.ಪಾಟೀಲ್‌, ಡಾ.ಸುಧಾಕರ್‌ ಅವರು ಈಗಾಗಲೇ ಪಕ್ಷದ ಕಚೇರಿಗೆ ಭೇಟಿ ನೀಡಿ, ಮುಖಂಡರೊಂದಿಗೆ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರನ್ನು ಭೇಟಿ ಮಾಡಲು ಪಕ್ಷದ ಕಚೇರಿಗೆ ಕೆಲವರು ಹೋಗಿದ್ದರು. ಆದರೆ, ಸಣ್ಣ ನೀರಾವರಿ ಸಚಿವರಾದ ರಮೇಶ್‌ ಜಾರಕಿಹೊಳಿಯವರು ಪಕ್ಷದ ಕಚೇರಿಗೆ ಇನ್ನೂ ಭೇಟಿ ನೀಡಿಲ್ಲ ಎಂದು ಬಿಜೆಪಿಯ ಹಿರಿಯ ಕಾರ್ಯಕರ್ತರೊಬ್ಬರು ಮಾಹಿತಿ ನೀಡಿದರು.

ಅಧ್ಯಕ್ಷರ ಸೂಚನೆ ಏನಾಗಿತ್ತು?: ಪಕ್ಷದ ಕಚೇರಿಗೆ ವಾರಕ್ಕೆ ಒರ್ವ ಸಚಿವರು ಭೇಟಿ ನೀಡಿ, ಕಾರ್ಯಕರ್ತರ ಕುಂದುಕೊರತೆ ಆಲಿಸಬೇಕು. ಕಾರ್ಯಕರ್ತರು ಯಾವೆಲ್ಲ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ ಎಂಬುದನ್ನು ಹತ್ತಿರದಿಂದ ಅರಿಯಬೇಕು. ಸಾಮಾನ್ಯ ಜನರು, ಬಿಜೆಪಿ ಬೆಂಬಲಿಗರು ಮತ್ತು ಹಿತೈಶಿಗಳು ಆಗಾಗ್ಗೆ ಪಕ್ಷದ ಕಚೇರಿಗೆ ಬರುತ್ತಿರುವುದರಿಂದ ಸಚಿವರನ್ನು ಭೇಟಿ ಮಾಡಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ವಾರಕ್ಕೆ ಒಮ್ಮೆ ಓರ್ವ ಸಚಿವ ಪಕ್ಷದ ಕಚೇರಿಗೆ ಬಂದು ಕಾರ್ಯಕರ್ತರ ಅಹವಾಲು ಸ್ವೀಕರಿಸಬೇಕು ಎಂದು ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಈ ಹಿಂದೆ ನಿರ್ದೇಶನ ನೀಡಿದ್ದರು. ಆದರೆ, ಈ ಸೂಚನೆ ಮೂಲ ಬಿಜೆಪಿಗರಲ್ಲಿ ಸಚಿವರಾದ ಕೆಲವರು ಮಾತ್ರ ಪಾಲನೆ ಮಾಡುತ್ತಿದ್ದು, ಇನ್ನು ಕೆಲವರು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಬಿಜೆಪಿ ಕಾರ್ಯಕರ್ತರೇ ಆರೋಪಿಸುತ್ತಿದ್ದಾರೆ.

* ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.