ವಿಧಾನಸಭೆಯಲ್ಲಿ ಫೈಟರ್ಸ್ “ಫ್ರೆಂಡ್ಸ್’ ಆದ್ರು
Team Udayavani, Jul 30, 2019, 3:06 AM IST
ಬೆಂಗಳೂರು: ವಾರದ ಹಿಂದೆ ವಿಧಾನಸಭೆಯಲ್ಲಿ ನಿರ್ಮಾಣವಾಗಿದ್ದ ಬಿಸಿ ವಾತಾವರಣ ಸೋಮವಾರದ ವೇಳೆಗೆ ತಿಳಿ ಹಾಗೂ ಶಾಂತ ಸ್ಥಿತಿಗೆ ಬಂದಿತ್ತು. ಪರಸ್ಪರ ಆರೋಪಗಳಲ್ಲಿ ತೊಡಗಿ “ಫೈಟರ್’ಗಳಾಗಿದ್ದ ನಾಯಕರು “ಫ್ರೆಂಡ್ಸ್’ಗಳಂತಾಗಿದ್ದರು. ಪ್ರಮುಖವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸದನಕ್ಕೆ ಆಗಮಿಸಿದ ತಕ್ಷಣ ಪ್ರತಿಪಕ್ಷ ಸ್ಥಾನದಲ್ಲಿ ಕುಳಿತಿದ್ದ ಸಿದ್ದರಾಮಯ್ಯ ಅವರತ್ತ ಬಂದು ಕೈ ಕುಲುಕಿದರು. ಸಿದ್ದರಾಮಯ್ಯ ಅವರು ಗುಡ್ಲಕ್ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಗ್ಯಾಲರಿಯಲ್ಲಿದ್ದ ಮಾಧ್ಯಮದ ಛಾಯಾಗ್ರಾಹಕರು ಇತ್ತ ತಿರುಗಿ ಕೈ ಕುಲುಕುವಂತೆ ಕೋರಿದರು. ಆಗ, ಛಾಯಾಗ್ರಾಹಕರತ್ತ ತಿರುಗಿ ಇಬ್ಬರೂ ಕೈ ಕುಲುಕಿ ನಕ್ಕರು. ವಿಶ್ವಾಸಮತ ನಿರ್ಣಯ ಮಂಡಿಸಿ ಯಡಿಯೂರಪ್ಪ ಮಾತನಾಡುವಾಗ, ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿಯವರು ದ್ವೇಷದ ರಾಜಕಾರಣ ಮಾಡಿಲ್ಲ. ನಾನೂ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದರು.
ಆ ನಂತರ ಮಾತನಾಡಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ನಾನು ಮತ್ತು ಯಡಿಯೂರಪ್ಪ ಅವರು ಸಾರ್ವಜನಿಕ ಜೀವನಕ್ಕೆ ಒಟ್ಟಿಗೆ ಒಂದೇ ಅವಧಿಯಲ್ಲಿ ಬಂದವರು. ಅವರು ಹದಿನೈದನೇ ವಿಧಾನಸಭೆಯ ಉಳಿದ ಅವಧಿ ಪೂರ್ತಿ ಮುಖ್ಯಮಂತ್ರಿಯಾಗಿರಲಿ ಎಂಬುದು ನನ್ನ ಆಸೆ. ಆದರೆ, ಎಷ್ಟು ದಿನ ಅಧಿಕಾರದಲ್ಲಿರುತ್ತಾರೋ ಗೊತ್ತಿಲ್ಲ ಎಂದು ಚಟಾಕಿ ಹಾರಿಸಿದರು. ಅಭಿವೃದ್ಧಿ ಕಾರ್ಯಕ್ಕೆ ನಮ್ಮ ಸಹಕಾರ ಇದ್ದೇ ಇರುತ್ತದೆ ಎಂದು ಸಿದ್ದರಾಮಯ್ಯ ಅವರು ಹೇಳಿದರು. ಸರ್ಕಾರ ಹಾದಿ ತಪ್ಪಿದಾಗ ಎಚ್ಚರಿಸಿ ಎಂದು ಯಡಿಯೂರಪ್ಪ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು