ಬದುಕಿಗಾಗಿ ಹೋರಾಟ; ಹೋರಾಟಕ್ಕಾಗಿ ಬದುಕು


Team Udayavani, May 1, 2021, 7:00 AM IST

ಬದುಕಿಗಾಗಿ ಹೋರಾಟ; ಹೋರಾಟಕ್ಕಾಗಿ ಬದುಕು

ಮೇ 1 – ವಿಶ್ವ ಕಾರ್ಮಿಕರ ದಿನಾಚರಣೆ ಎಂದೊಡನೆಯೇ 8 ತಾಸುಗಳ ಕೆಲಸದ ಅವಧಿಯ ಬೇಡಿಕೆಯನ್ನು ಮುಂದಿಟ್ಟು 1886 ರ ಮೇ ಒಂದರಂದು ಅಮೆರಿಕದ ಚಿಕಾಗೋದ ಇಲಿನಾಯ್ಸ್ ಪ್ರದೇಶದಲ್ಲಿ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಲಕ್ಷಾಂತರ ಸಂಖ್ಯೆಯ ಕಾರ್ಮಿಕರು ನಡೆಸಿದ ಅಭೂತಪೂರ್ವ ಹೋರಾಟವು ನೆನಪಿಗೆ ಬರುತ್ತದೆ. ಅಂದು ದಿನದ 24 ತಾಸುಗಳ ಕಾಲವೂ ಮಾಲಕರ ಕಾರ್ಖಾನೆಗಳಲ್ಲಿ ದುಡಿಯಬೇಕಾಗಿದ್ದ ಕೆಲಸಗಾರರು ವಿಶ್ರಾಂತಿ, ಕೌಟುಂಬಿಕ ಜೀವನ ಹಾಗೂ ಸಾಮಾಜಿಕ ಜೀವನದಿಂದ ವಂಚಿತರಾಗಿದ್ದರು. 19 ನೇ ಶತಮಾನವು ಅಮೆರಿಕ ಮತ್ತು ಐರೋಪ್ಯ ರಾಷ್ಟ್ರಗಳಲ್ಲಿ ಕೈಗಾರಿಕ ಕ್ರಾಂತಿಗೆ ಸಾಕ್ಷಿಯಾಗಿದ್ದ ಪರಿಣಾಮವಾಗಿ ಅಸಂಖ್ಯಾತ ಉದ್ಯೋಗ ಸೃಷ್ಟಿಗೆ ಕಾರಣೀಭೂತವಾಗಿದ್ದರೂ ಸಹ ಕಾರ್ಮಿಕರ ಬದುಕು ಮಾತ್ರ ಅತ್ಯಂತ ನಿಕೃಷ್ಟವಾದ ಸ್ಥಿತಿಯಲ್ಲಿತ್ತು. ಕಾರ್ಮಿಕರಿಗೆ ಕನಿಷ್ಠ ಸೌಲಭ್ಯವೂ ಸಿಗುತ್ತಿರಲಿಲ್ಲ. ಪ್ರಾಣಿಗಳ ರೀತಿ ಕಾರ್ಮಿಕರನ್ನು ನಡೆಸಿಕೊಳ್ಳಲಾಗುತ್ತಿತ್ತು. ಕಾರ್ಮಿಕರ ಶ್ರಮ, ಬೆವರು ಮಾಲಕರ ಖಜಾನೆ ತುಂಬಿಸುತ್ತಿತ್ತೇ ಹೊರತು ಲಾಭದ ಒಂದಂಶವೂ ಕಾರ್ಮಿಕರಿಗೆ ತಲುಪುತ್ತಿರಲಿಲ್ಲ. ಮೂಲ ಸೌಕರ್ಯ, ವೈದ್ಯಕೀಯ, ಶಿಕ್ಷಣ ಸೌಲಭ್ಯಗಳಂತೂ ಮರೀಚಿಕೆಯಾಗಿತ್ತು. ಕಾರ್ಮಿಕರ ಹಿತ ರಕ್ಷಣೆಯ ಯಾವುದೇ ಕಾನೂನುಗಳು, ಒಪ್ಪಂದಗಳು ಇರದಿದ್ದ ಕಾಲವದು. ಅಂತಹ ಪ್ರತಿಕೂಲದ ಕಾಲಘಟ್ಟದಲ್ಲಿ ಕಾರ್ಮಿಕರನ್ನು ಸಂಘಟಿಸಿ, ಒಗ್ಗೂಡಿಸಿ, ಹೋರಾಟಕ್ಕೆ ಅಣಿಗೊಳಿಸಿ 1886 ರ ಮೇ ಯಲ್ಲಿ ನಡೆಸಿದ ಹೋರಾಟ ಚಾರಿತ್ರಿಕವಾಗಿ ದಾಖಲಾಯಿತು. ಅದೊಂದು ಸಾಮಾನ್ಯ ಹೋರಾಟವಾಗಿರಲಿಲ್ಲ. ರಕ್ತ ಕ್ರಾಂತಿಯೇ ಆಯಿತು. ಹೋರಾಟವನ್ನು ದಮನಿಸಲು ಮಾಲಕ ವರ್ಗದಿಂದ ವಾಮಮಾರ್ಗದ ಮೂಲಕ ಅನೇಕ ಕ್ರೂರ ಪ್ರಯತ್ನಗಳು ನಡೆದವು. ಕಾರ್ಮಿಕರ ಮೇಲೆ ದಾಳಿ ಮಾಡಿಸಲಾಯಿತು. ಕಾರ್ಮಿಕ ಸಂಘಟನೆಗಳು ಎದೆಗುಂದಲಿಲ್ಲ. ಕಾರ್ಮಿಕರು ಹಿಂದಡಿಯಿಡಲಿಲ್ಲ.

ಕೊನೆಗೂ ಕಾರ್ಮಿಕರ ನಿರಂತರ ಹೋರಾಟ, ತ್ಯಾಗ, ಬಲಿದಾನದ ಫ‌ಲವಾಗಿ ಹೋರಾಟವು ವಿಜಯದಲ್ಲಿ ಅಂತ್ಯಗೊಂಡಿತು. ನ್ಯಾಯಯುತ ಬೇಡಿಕೆಯಾದ ಕಾರ್ಮಿಕರಿಗೆ ದಿನದ 8 ತಾಸುಗಳ ಕೆಲಸದ ಅವಧಿ ಜಾರಿಗೆ ಬಂತು. 8 ತಾಸು ಕೆಲಸ, 8 ತಾಸು ಸಾಮಾಜಿಕ ಜೀವನ ಮತ್ತು ಉಳಿದ 8 ಗಂಟೆ ವಿಶ್ರಾಂತಿ ಎಂಬ ಪರಿಕಲ್ಪನೆಯು ವಿಶ್ವಾದ್ಯಂತ ಜಾರಿಯಾಯಿತು. ಕಾರ್ಮಿಕರನ್ನು ಸಂಘಟಿಸಿ ಹೋರಾಟವನ್ನು ರೂಪಿಸಿ ವಿಜಯವನ್ನು ತಂದುಕೊಟ್ಟ ಕೀರ್ತಿ ಕಾರ್ಮಿಕ ಸಂಘಟನೆಗಳಿಗೆ ಸಲ್ಲುತ್ತದೆ ಎನ್ನುವುದು ಇಲ್ಲಿ ಗಮ ನಾರ್ಹ. ಹೋರಾಟ ನಡೆದ ಸ್ಥಳವಾದ ಚಿಕಾಗೋ ನಗರಿಯ ಇಲಿನಾಯ್ಸ್ ಪ್ರದೇಶದ ಹೇ ಮಾರ್ಕೆಟ್‌ ಚೌಕ ಇಂದಿಗೂ ಕಾರ್ಮಿಕರ ಬಲಿದಾನದ ದ್ಯೋತಕ ವಾಗಿ ಚಿರಸ್ಥಾಯಿಯಾಗಿ ಉಳಿದಿದೆ. ಈ ಚರಿತ್ರಾರ್ಹ ಹೋರಾಟದ ನೆನಪಿಗಾಗಿ ಪ್ರತೀ ವರ್ಷ ಮೇ ಒಂದರಂದು ವಿಶ್ವಾದ್ಯಂತ ಕಾರ್ಮಿಕ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಯಿತು. ಇದನ್ನು ಮೇ ಡೇ, ಲೇಬರ್‌ ಡೇ ಎನ್ನುವ ಹೆಸರುಗಳಿಂದಲೂ ಕರೆಯಲಾಗುತ್ತದೆ.

1886 ರಿಂದ ಆರಂಭಗೊಂಡು ಇಲ್ಲಿಯ ತನಕ ಅಸಂಖ್ಯಾತ ಕಾರ್ಮಿಕ ಚಳವಳಿಗಳು ಮತ್ತು ಹೋರಾಟಗಳು ನಡೆದಿವೆ. ಅದೇ ರೀತಿಯಲ್ಲಿ ಕಾರ್ಮಿಕ ಸಂಘಟನೆಗಳೂ ಅಸಂಖ್ಯಾತ ಸಂಖ್ಯೆ ಯಲ್ಲಿವೆ. ನಿರಂತರವಾದ ಸಂಘಟನಾತ್ಮಕ ಕೆಲಸ, ಅವಿರತ ಹೋರಾಟವೇ ಕಾರ್ಮಿಕ ಸಂಘಗಳ ಉಸಿರು. ಹೋರಾಟದ ಕಿಚ್ಚು ನಂದಿತು ಎಂದಾದರೆ ಕಾರ್ಮಿಕ ವರ್ಗದ ಸ್ಥಿತಿ 1886 ರ ಪೂರ್ವ ಪರಿಸ್ಥಿತಿಗೆ ಮರಳುವುದರಲ್ಲಿ ಸಂಶಯವಿಲ್ಲ. ಒಂದೆಡೆ ಇಲ್ಲಿ ತನಕ ಹೋರಾಟದ ಮೂಲಕ ಗಳಿಸಿರುವ ಸೌಲಭ್ಯಗಳನ್ನು ರಕ್ಷಿಸಿಕೊಳ್ಳುವ ಸವಾಲು, ಇನ್ನೊಂದೆಡೆ ಪಡೆಯಬೇಕಾಗಿರುವ ಸೌಲಭ್ಯಗಳಿಗಾಗಿ ಹೋರಾಟ. ಒಟ್ಟಿನಲ್ಲಿ “ಬದುಕಿಗಾಗಿ ಹೋರಾಟ -ಹೋರಾಟಕ್ಕಾಗಿ ಬದುಕು’. ಸರಕಾರಗಳು ಯಾವತ್ತಿಗೂ ಮಾಲಕರ ಪರವೇ ಇರುವುದರಿಂದ ಯಾವಾಗಲೂ ವಿಪಕ್ಷದ ನೆಲೆಯಲ್ಲಿಯೇ ನಿಂತು ಹೋರಾಡಬೇಕಾದ ಅನಿ ವಾರ್ಯ ಕಾರ್ಮಿಕ ಸಮಘಟನೆಗಳು ಮತ್ತು ಕಾರ್ಮಿಕರದ್ದಾಗಿದೆ.

ನಮ್ಮನ್ನಾಳುವ ಸರಕಾರಗಳನ್ನು ಸದಾ ಕಾಲ ವಿರೋಧಿಸಿಕೊಂಡೇ ಹೋರಾಡು ವುದು ಸಂಘಟನೆಗಳಿಗೆ ನಿಜಕ್ಕೂ ಸವಾಲಿನ ಕೆಲಸ. ಪ್ರತಿ ಯೊಂದು ನ್ಯಾಯಯುತ ಬೇಡಿಕೆಗಳ ಈಡೇರಿಕೆಗೂ ಹೋರಾಟದ ಮೊರೆ ಹೋಗಬೇಕಾದ ಪರಿಸ್ಥಿತಿ ಇದೆ. ದೇಶದ ಅಭಿವೃದ್ಧಿಗೆ ಕಾರ್ಮಿಕರೂ ಕಾರಣ ಎನ್ನುವುದನ್ನು ಅರಿತುಕೊಂಡು ಅವರಿಗೆ ನ್ಯಾಯವಾಗಿ ಸಲ್ಲಬೇಕಾದ ಸೌಲಭ್ಯಗಳನ್ನು ಒದಗಿಸುವ ಉದಾರತೆ ಸರಕಾರ ನಡೆಸುವವರಿಗೆ ಇರಬೇಕಾದ್ದು ಅತ್ಯಗತ್ಯವಾಗಿದೆ.

1991 ರ ಅಅನಂತರ ಕೇಂದ್ರ ಸರಕಾರ ಜಾರಿಗೆ ತಂದ ಖಾಸಗೀಕರಣ, ಜಾಗತೀಕರಣ, ಉದಾರೀಕರಣದ ಕರಿನೆರಳು ಕಾರ್ಮಿಕ ವರ್ಗವನ್ನು ಹೈರಾಣಾಗಿಸಿದೆ. ಮಾಲಕರ ಒತ್ತಡದಿಂದಾಗಿ ಆಗಿಂದಾಗ್ಗೆ ಕಾರ್ಮಿಕರ ಕಾಯ್ದೆಗೆ ತಿದ್ದುಪಡಿಯನ್ನು ತರುವುದರ ಮೂಲಕ ಸರಕಾರಗಳು ಕಾರ್ಮಿಕರ ಪರವಾದ ಕಾನೂನುಗಳನ್ನು ದುರ್ಬಲಗೊಳಿಸಿವೆ. ಇದು ಕಾರ್ಮಿಕ ಸಂಘಟನೆಗಳಿಗೆ ಇನ್ನಷ್ಟು ಮುಳುವಾಗುತ್ತಿದೆ. ಸಂಸತ್ತಿನಲ್ಲಿ ಕಾರ್ಮಿಕರ ಪರವಾಗಿ ಮಾತನಾಡುವ ಜನಪ್ರತಿನಿಧಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿರುವುದು ಕಾರ್ಮಿಕ ಕಾನೂನುಗಳಿಗೆ ತಿದ್ದುಪಡಿ ತರಲು ಸರಕಾರಕ್ಕೆ ಸಹಕಾರಿಯಾಗಿದೆ. ದೇಶದ ಅತ್ಯಂತ ದೊಡ್ಡ ಸಂಖ್ಯೆಯಲ್ಲಿರುವ ಕಾರ್ಮಿಕ ವರ್ಗ ರಾಜಕೀಯ ಶಕ್ತಿಯಾಗಿ ರೂಪಾಂತರಗೊಳ್ಳದಿರುವುದೇ ಇಂಥ ಸಂದಿಗ್ಧತೆ ಸೃಷ್ಟಿಗೆ ಕಾರಣವಾಗಿದೆ. ಕಾರ್ಮಿಕರಲ್ಲಿ ರಾಜಕೀಯ ಪ್ರಜ್ಞೆ ಮೂಡಿಸುವುದು ಕೂಡ ಕಾರ್ಮಿಕ ಸಂಘಗಳಿಗೆ ಸವಾಲಿನ ಕೆಲಸವಾಗಿದೆ. ಈ ಸವಾಲನ್ನು ಸಂಘಟನೆಗಳು ಯಶಸ್ವಿಯಾಗಿ ನಿರ್ವಹಿಸಿದಲ್ಲಿ ಮಾತ್ರ ಕಾರ್ಮಿಕ ವರ್ಗ ನೆಮ್ಮದಿಯ ಜೀವನ ಸಾಗಿಸುವ ವಾತಾವರಣ ಸೃಷ್ಟಿಯಾಗಬಹುದೇನೋ.

ಈ ಎಲ್ಲ ಸಮಸ್ಯೆ, ಸವಾಲುಗಳ ನಡುವೆಯೇ ಇನ್ನೊಂದು “ಮೇ ಡೇ’ ಬಂದಿದೆ. ಕಳೆದ ವರ್ಷದಂತೆ ಈ ವರ್ಷವೂ ಕೋವಿಡ್‌-19 ಸಾಂಕ್ರಾಮಿಕ ಕಾಯಿಲೆಯ ಪರಿಣಾಮವಾಗಿ ವಿಶ್ವಾದ್ಯಂತ ಕಾರ್ಮಿಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಾಧ್ಯವಾಗುತ್ತಿಲ್ಲ. ಕಾರ್ಮಿಕರು ಒಂದೆಡೆ ಸೇರುವ ಹಾಗಿಲ್ಲ. ಮೆರವಣಿಗೆಯನ್ನು ನಡೆಸುವ ಹಾಗಿಲ್ಲ. ಸಾಮಾಜಿಕವಾಗಿ ದೈಹಿಕ ಅಂತರವನ್ನು ಕಾಪಾಡಿಕೊಳ್ಳಬೇಕಾಗಿರುವುದು ಅನಿವಾರ್ಯವಾಗಿದೆ. ಇದರಿಂದಾಗಿ ಶತಮಾನದ ಪರಂಪರೆಯಿರುವ ಮೇ ದಿನದ ಆಚರಣೆ ಸಪ್ಪಗಾಗಿದೆ. ಆದರೆ ಒಬ್ಬ ಪ್ರಜ್ಞಾವಂತ, ಜವಾಬ್ದಾರಿಯುತ ಮತ್ತು ನಿಷ್ಠಾವಂತ ಕಾರ್ಮಿಕ ತನ್ನ ಮನಸ್ಸಿನಲ್ಲಿಯೇ ಕಾರ್ಮಿಕ ವರ್ಗದ ಪ್ರಸ್ತುತ ಸನ್ನಿವೇಶ, ಮುಂದಿರುವ ಸಮಸ್ಯೆಗಳು ಸವಾಲುಗಳು, ಅದಕ್ಕೆ ತಕ್ಕನಾಗಿ ಭವಿಷ್ಯದಲ್ಲಿ ರೂಪಿಸಬೇಕಾದ ಹೋರಾಟ ಇವುಗಳ ಕುರಿತಾಗಿ ಚಿಂತನೆ ನಡೆಸಿ ತಣ್ತೀ-ಸಿದ್ಧಾಂತಗಳ ಮೂಲಕ ಪ್ರಬಲ ಕಾರ್ಮಿಕ ಮುಖಂಡನಾಗಿ ಹೊರಹೊಮ್ಮಿ ಕಾರ್ಮಿಕ ವರ್ಗವನ್ನು ಮುನ್ನೆಡೆಸುವ ಪ್ರತಿಜ್ಞೆಯನ್ನು ಮಾಡುವ ಮೂಲಕ ಕಾರ್ಮಿಕ ದಿನವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಿಕೊಳ್ಳಬಹುದಾಗಿದೆ.

ಕೊರೊನಾ ಇದೆ ಅಂದ ಮಾತ್ರಕ್ಕೆ ಕಾರ್ಮಿಕರು ತಮ್ಮ ಬದುಕನ್ನು ಕಟ್ಟಿಕೊಳ್ಳುವುದನ್ನು ನಿಲ್ಲಿಸಲಾಗದು. ಜತೆಗೆ ಸಂಘಟನೆ, ಹೋರಾಟ, ಚಳವಳಿಗಳು ಎಲ್ಲವೂ ಸಾಗಬೇಕು. ಹಾಗಾಗಿಯೇ ಬದುಕಿಗಾಗಿ ಹೋರಾಟ -ಹೋರಾಟಕ್ಕಾಗಿ ಬದುಕು. ವಿಶ್ವ ಕಾರ್ಮಿಕರ ಏಕತೆ ಚಿರಾಯುವಾಗಲಿ.

– ಕೆ.ರಾಘವೇಂದ್ರ ನಾಯರಿ, ದಾವಣಗೆರೆ

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.