ಮಂಗಳೂರಿನಲ್ಲಿ ಫಿನ್‌ ಟೆಕ್‌ ಎಕ್ಸೆಲೆನ್ಸ್‌ ಸೆಂಟರ್‌: ಡಾ| ಅಶ್ವತ್ಥ ನಾರಾಯಣ


Team Udayavani, Oct 30, 2021, 6:25 AM IST

ಮಂಗಳೂರಿನಲ್ಲಿ ಫಿನ್‌ ಟೆಕ್‌ ಎಕ್ಸೆಲೆನ್ಸ್‌ ಸೆಂಟರ್‌: ಡಾ| ಅಶ್ವತ್ಥ ನಾರಾಯಣ

ಮಂಗಳೂರು: ಮಂಗಳೂರನ್ನು ರಾಜ್ಯ ಮಾತ್ರವಲ್ಲದೆ ದೇಶದಲ್ಲೇ ಪ್ರಮುಖ ಐಟಿ ಕೇಂದ್ರವಾಗಿ ರೂಪಿಸುವ ನಿಟ್ಟಿನಲ್ಲಿ ಸರಕಾರ ಪೂರಕ ಕ್ರಮಗಳನ್ನು ಕೈಗೊಂಡಿದ್ದು, ಇಲ್ಲಿ ಫಿನ್‌ಟೆಕ್‌ ಎಕ್ಸಲೆನ್ಸ್‌ ಸೆಂಟರ್‌ ಸ್ಥಾಪಿಸಲಾಗುವುದು ಎಂದು ರಾಜ್ಯ ಐಟಿಬಿಟಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್‌. ಅಶ್ವತ್ಥ್ ನಾರಾಯಣ್‌ ತಿಳಿಸಿದ್ದಾರೆ.

ಬೆಂಗಳೂರು ಬಿಯಾಂಡ್‌ ಉಪಕ್ರಮದಡಿಯಲ್ಲಿ ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್‌ (ಕೆಡಿಇಎಂ) ವತಿಯಿಂದ ಮಂಗಳೂರಿನಲ್ಲಿ ಶುಕ್ರವಾರ ಆಯೋಜಿಸಿದ್ದ ಮಂಗಳೂರು ಟೆಕ್ನಾ ವಾಂಜಾ ಕಾರ್ಯಕ್ರಮದಲ್ಲಿ ಕೆಡಿಇಎಂ ಮಂಗಳೂರು ಕ್ಲಸ್ಟರ್‌ ಅನ್ನು ಉದ್ಘಾಟಿಸಿ ಅವರು ಮಾತನಾಡಿದ‌ರು. ಮಂಗಳೂರಿನಲ್ಲಿ ಉದ್ದೇಶಿತ ಐಟಿ ಪಾರ್ಕ್‌ ಸ್ಥಾಪನೆಗೆ ಪೂರಕ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸಲಾಗುವುದು. ಸಾರ್ಟ್‌ ಅಪ್‌ಗ್ಳಿಗೆ ನೆರವು ನೀಡಲಾಗುವುದು ಎಂದರು.

ಶೀಘ್ರ ನೂತನ ಟೆಲಿಕಾಂ ನೀತಿ
ಟೆಲಿಕಾಂ ಸೇವಾದಾರರಿಗೆ ಉತ್ತೇಜನ ನಿಟ್ಟಿನಲ್ಲಿ ಸರಕಾರ ಶೀಘ್ರ ನೂತನ ಟೆಲಿಕಾಂ ನೀತಿಯನ್ನು ಘೋಷಿಸಲಿದೆ. ಗ್ರಾಮೀಣ ಪ್ರದೇಶದಲ್ಲಿ ಸ್ಯಾಟಲೈಟ್‌ ಸೇವೆಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

5 ವರ್ಷದಲ್ಲಿ ಜಾಗತಿಕ ಐಟಿ
ನಕಾಶೆಯಲ್ಲಿ ಮಂಗಳೂರು
ಐಟಿ-ಬಿಟಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಡಾ| ಇ.ವಿ. ರಮಣ ರೆಡ್ಡಿ ಮಾತನಾಡಿ, ಬೆಂಗಳೂರು ಬಿಯಾಂಡ್‌ ಉಪಕ್ರಮದಡಿ ಬೆಂಗಳೂರು ಹೊರತುಪಡಿಸಿ ಇತರ ಜಿಲ್ಲೆಗಳಲ್ಲಿ ಐಟಿ ಉದ್ಯಮಗಳ ಸ್ಥಾಪನೆ ನೆರವು ನೀಡಲಾಗುತ್ತಿದೆ. ಮುಂದಿನ 5 ವರ್ಷಗಳಲ್ಲಿ ಮಂಗಳೂರನ್ನು ಜಾಗತಿಕ ಐಟಿ ನಕಾಶೆಯಲ್ಲಿ ಪ್ರಮುಖ ತಾಣವಾಗಿ ಗುರುತಿಸುವಂತೆ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದರು.

ಇದನ್ನೂ ಓದಿ:ಟಿ20 ವಿಶ್ವಕಪ್‌: ಪಾಕಿಸ್ಥಾನ ಗೆಲುವಿನ ಹ್ಯಾಟ್ರಿಕ್‌

ಬಯೋ ತಂತ್ರಜ್ಞಾನಕ್ಕೆ ಅವಕಾಶ
ಅರಿನ್‌ ಕ್ಯಾಪಿಟಲ್‌ ಸಹ-ಸಂಸ್ಥಾಪಕ ಹಾಗೂ ಅಧ್ಯಕ್ಷ ಮೋಹನ್‌ದಾಸ್‌ ಪೈ ಮಾತನಾಡಿ, ಮಂಗಳೂರು ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸೇವೆಗಳ ಪ್ರಮುಖ ಕೇಂದ್ರವಾಗಿ ಗುರುತಿಸಿಕೊಂಡಿದ್ದು, ಇಲ್ಲಿ ಬಯೋ ತಂತ್ರಜ್ಞಾನಕ್ಕೆ ಹೆಚ್ಚಿನ ಅವಕಾಶವಿದೆ ಎಂದರು.

ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯಕ್ಕಾಗಿನ ಸರಕಾರದ ಮುಖ್ಯ ಕಾರ್ಯದರ್ಶಿ ಡಾ| ಎಸ್‌. ಸೆಲ್ವಕುಮಾರ್‌, ವಿಷನ್‌ ಗ್ರೂಪ್‌ ಅಧ್ಯಕ್ಷ ಕ್ರಿಸ್‌ ಗೋಪಾಲಕೃಷ್ಣ, ಕರ್ನಾಟಕ ಸ್ಟಾರ್ಟಅಪ್‌ ವಿಷನ್‌ ಗ್ರೂಪ್‌ ಅಧ್ಯಕ್ಷ ಪ್ರಶಾಂತ್‌ ಪ್ರಕಾಶ್‌, ಕೆಡಿಇಎಂ ಅಧ್ಯಕ್ಷ ಬಿ.ವಿ. ನಾಯ್ಡು ಮಾತನಾಡಿದರು.

ಸಂಸದ ನಳಿನ್‌ ಕುಮಾರ್‌ ಕಟೀಲು, ಶಾಸಕ ವೇದವ್ಯಾಸ ಕಾಮತ್‌, ಮೇಯರ್‌ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ, ಜಿಲ್ಲಾ ಪಂಚಾಯತ್‌ ಸಿಇಒ ಡಾ| ಕುಮಾರ್‌, ಹಿರಿಯ ಅಧಿಕಾರಿ ಮೀನಾ ನಾಗರಾಜ್‌, ಲಹರಿ ಎಂಡಿ ಹಾಗೂ ಸಿಇಒ ಸಂಜೀವ್‌ ಗುಪ್ತಾ, ಟೆಕ್ನಿಕಲ್‌ ಇಂಡಿಯಾದ ಮುಖ್ಯಸ್ಥ ಬೀರೇನ್‌ ಘೋಷ್‌, ಮಂಗಳೂರು ಇನ್ಫೋಟೆಕ್‌ ಸೊಲ್ಯೂಷನ್ಸ್‌ ನಿರ್ದೇಶಕ ಪ್ರಶಾಂತ್‌ ಶೆಣೈ, ರಝೋರ್‌ ಪೇ ಸಿಇಒ ಹರ್ಷಿಲ್‌ ಮಾಥಾರ್‌, ರೋಬೋಸಾಫ್ಟ್‌ ಸಿಇಒ ಹಾಗೂ ಸಂಸ್ಥಾಪಕ ರೋಹಿತ್‌ ಭಟ್‌, ನ್ಯಾಸ್ಕಾಂ ಉಪಾಧ್ಯಕ್ಷ ಕೆ.ಎಸ್‌. ವಿಶ್ವನಾಥನ್‌ ಉಪಸ್ಥಿತರಿದ್ದರು.ನೋವಿಗೊ ಸೊಲೋಷನ್ಸ್ ಪ್ರೈ.ಲಿ.ನ ವ್ಯವಸ್ಥಾಪಕ ನಿರ್ದೇಶಕ ಪ್ರವೀಣ್‌ ಕುಮಾರ್‌ ಕಲ್ಬಾವಿ ಸ್ವಾಗತಿಸಿದರು.

ಡಿಜಿಟಲ್‌ ಆರ್ಥಿಕತೆಗೆ ಕೆಡಿಇಎಂ
ರಾಜ್ಯದಲ್ಲಿ ಡಿಜಿಟಲ್‌ ಆರ್ಥಿಕತೆಯ ಪಾಲನ್ನು ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರಕಾರ ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್‌ (ಕೆಡಿಇಎಂ) ಸ್ಥಾಪಿಸಿದ್ದು, ಉದ್ಯಮ ಹಾಗೂ ಸರಕಾರದ ನಡುವೆ ಜ್ಞಾನಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯದಲ್ಲಿ ಮಂಗಳೂರು, ಮೈಸೂರು, ಹುಬ್ಬಳ್ಳಿ ಕ್ಲಸ್ಟರ್‌ಗಳಿವೆ. ಮಂಗಳೂರು ಕ್ಲಸ್ಟರ್‌ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಕೊಡಗು ಜಿಲ್ಲೆಗಳನ್ನು ಒಳಗೊಂಡಿದೆ. ಬಿಯಾಂಡ್‌ ಬೆಂಗಳೂರು ಉಪಕ್ರಮವು 2026ರ ವೇಳೆಗೆ ಮೂರು ಕ್ಲಸ್ಟರ್‌ಗಳಲ್ಲಿ 5,000 ಐಟಿ ಕಂಪೆನಿಗಳು ಹಾಗೂ ಸ್ಟಾರ್ಟ್‌ಅಪ್‌ಗ್ಳನ್ನು ಆಕರ್ಷಿಸುವ ಮತ್ತು ನೆಲೆ ಒದಗಿಸುವ ಗುರಿಯನ್ನು ಹೊಂದಿದೆ.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.