ವಿದ್ಯಾರ್ಥಿಗಳ ಭವಿಷ್ಯಕ್ಕೆ ಕವಿದ ಕಾರ್ಮೋಡ!

ಗೊಂದಲದಲ್ಲಿ ವಿವಿಧ ಶೈಕ್ಷಣಿಕ ಕೋರ್ಸ್‌ಗಳ ಅಂತಿಮ ವರ್ಷದ ವಿದ್ಯಾರ್ಥಿಗಳು

Team Udayavani, Apr 5, 2020, 6:06 AM IST

ವಿದ್ಯಾರ್ಥಿಗಳ ಭವಿಷ್ಯಕ್ಕೆ ಕವಿದ ಕಾರ್ಮೋಡ!

ಬೆಂಗಳೂರು: ರಾಜ್ಯದ ವಿವಿಧ ಕಾಲೇಜು, ವಿಶ್ವವಿದ್ಯಾನಿಲಯ ಮತ್ತು ವೃತ್ತಿಪರ ಕೋರ್ಸ್‌ಗಳಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೋವಿಡ್ 19 ಬರಸಿಡಿಲಿನಂತೆ ಬಡಿದಿದೆ.

412 ಸರಕಾರಿ ಕಾಲೇಜು, 500ಕ್ಕೂ ಅಧಿಕ ಖಾಸಗಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಪದವಿಯ ಅಂತಿಮ ವರ್ಷದಲ್ಲಿ ಒಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು, ಬೆಂಗಳೂರು, ಮಂಗಳೂರು, ಮೈಸೂರು ಸಹಿತ ವಿವಿಧ ವಿವಿಗಳಲ್ಲಿ ಅಂತಿಮ ವರ್ಷದ ಸ್ನಾತಕೋತ್ತರ ಪದವಿಯಲ್ಲಿ ರುವ ಸಾವಿರಾರು ವಿದ್ಯಾ ರ್ಥಿಗಳು, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ, ಜಿಕೆವಿಕೆ, ಪಶುವೈದ್ಯಕೀಯ ಮತ್ತು ಕೃಷಿ ಕಾಲೇಜುಗಳಲ್ಲಿ ಎಂಜಿನಿಯರಿಂಗ್‌ ಸಹಿತ ವಿವಿಧ ವೃತ್ತಿಪರ ಕೋರ್ಸ್‌ಗಳ ಅಂತಿಮ ವರ್ಷದಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳು ಅಂತಿಮ ಪರೀಕ್ಷೆ, ಕ್ಯಾಂಪಸ್‌ ಸಂದರ್ಶನ ಮತ್ತು ಇಂಟರ್ನ್ಶಿಪ್‌ಗ್ಳಿಲ್ಲದೆ ಸಂದಿಗ್ಧ ಸ್ಥಿತಿಯಲ್ಲಿದ್ದಾರೆ.

ಎಸೆಸೆಲ್ಸಿ ಪರೀಕ್ಷೆ ಸ್ವಲ್ಪ ವಿಳಂಬವಾಗಿ ನಡೆದರೂ ಪಿಯುಸಿ, ಐಟಿಐ ಮೊದಲಾದ ಕೋರ್ಸ್‌ಗಳಿಗೆ ಸೇರಿಕೊಳ್ಳಲು ಅವಕಾಶ ಇರುತ್ತದೆ ಮತ್ತು ಸರಕಾರವೇ ಇದಕ್ಕೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಿದೆ. ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಪದವಿ, ವೃತ್ತಿಪರ ಕೋರ್ಸ್‌ಗಳಿರುತ್ತದೆ. ಆದರೆ ಪದವಿಯ ಅಂತಿಮ ಘಟ್ಟದಲ್ಲಿದ್ದು, ಮುಂದೇ ಉದ್ಯೋಗಕ್ಕೆ ಸೇರಿಕೊಳ್ಳಲೇಬೇಕಾದ ಅನಿವಾರ್ಯತೆ ಇರುವ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊರೊನಾ ಬಹುದೊಡ್ಡ ಆತಂಕ ತಂದೊಡ್ಡಿದೆ.

ಕ್ಯಾಂಪಸ್‌ ಸಂದರ್ಶನ ಇಲ್ಲ
ಸಾಮಾನ್ಯವಾಗಿ ಪದವಿ ಅಥವಾ ಸ್ನಾತಕೋತ್ತರ ಪದವಿ, ವೃತ್ತಿಪರ ಕೋರ್ಸ್‌ ಗಳ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆಯಾ ಕಾಲೇಜಿನಲ್ಲಿ ಕ್ಯಾಂಪಸ್‌ ಸಂದರ್ಶನ ಇರುತ್ತದೆ. ವಿವಿಧ ಸಂಸ್ಥೆಗಳು ಕಾಲೇಜಿಗೆ ಹೋಗಿ ಸಂದರ್ಶನಗಳ ಮೂಲಕ ತಮಗೆ ಬೇಕಿರುವ ಪ್ರತಿಭೆಗಳನ್ನು ಆಯ್ಕೆ ಮಾಡಿಕೊಳ್ಳುತ್ತವೆ. ಬಹುತೇಕ ವಿದ್ಯಾರ್ಥಿಗಳು ಈ ಮೂಲಕ ಸುಲಭವಾಗಿ ಉದ್ಯೋಗ ಪಡೆದಿದ್ದಾರೆ. ಆದರೆ ಈ ವರ್ಷ ಫೆಬ್ರವರಿ, ಮಾರ್ಚ್‌ ಮತ್ತು ಎಪ್ರಿಲ್‌ ತಿಂಗಳುಗಳಲ್ಲಿ ಕ್ಯಾಂಪಸ್‌ ಸಂದರ್ಶನ ನಡೆದಿಲ್ಲ. ಇನ್ನು ಮೇ ತಿಂಗಳಲ್ಲಿಯೂ ನಡೆಯುವ ಬಗ್ಗೆಯೂ ಖಾತರಿಯಿಲ್ಲ ಎಂದು ಸ್ನಾತಕೋತ್ತರ ವಿದ್ಯಾರ್ಥಿಯೋರ್ವರು ನೋವು ತೋಡಿಕೊಂಡರು.

ಇಂಟರ್ನ್ಶಿಪ್‌ ಕಷ್ಟ
ಸಾಮಾನ್ಯವಾಗಿ ತಾಂತ್ರಿಕ ಕೋರ್ಸ್‌ ಮತ್ತು ಕೆಲವು ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ಅಂತಿಮ ಸೆಮಿಸ್ಟರ್‌ನಲ್ಲಿ ಇಂಟರ್ನ್ಶಿಪ್‌ ಇರುತ್ತದೆ. ಕೌಶಲಾಭಿವೃದ್ಧಿಗೆ ಪೂರಕವಾದ ಪರಿಕಲ್ಪನೆ ಇದಾಗಿದ್ದು, ಇಲ್ಲಿ ಸಂಸ್ಥೆಗಳಿಗೆ ಹೋಗಿ ಪ್ರಾಯೋಗಿಕ ಅಧ್ಯಯನ ಹೆಚ್ಚಿರುತ್ತದೆ. ಆದರೆ ಈ ವರ್ಷ ಕೋವಿಡ್ 19 ಆತಂಕ ಲಕ್ಷಾಂತರ ವಿದ್ಯಾರ್ಥಿಗಳ ಇಂಟರ್ನ್ಶಿಪ್‌ಗ್ೂ ಅಡ್ಡಿಪಡಿಸಿದೆ ಎಂದು ವಿವಿಗಳ ಪ್ರಾಧ್ಯಾಪಕರೇ ಹೇಳುತ್ತಿದ್ದಾರೆ.

ನಿರುದ್ಯೋಗ ಭೀತಿ
ಪ್ರತಿ ವರ್ಷ ಲಕ್ಷಾಂತರ ವಿದ್ಯಾರ್ಥಿಗಳು ಪದವಿ ಶಿಕ್ಷಣ ಮುಗಿಸಿ ಔದ್ಯೋಗಿಕ ರಂಗಕ್ಕೆ ಪ್ರವೇಶಿಸುತ್ತಾರೆ. ಅನೇಕ ಸಂಸ್ಥೆಗಳು ಸಂದರ್ಶನ ಮತ್ತು ವಿವಿಧ ಆಯ್ಕೆ ವಿಧಾನದ ಮೂಲಕ ನೇಮಕಾತಿ ಮಾಡಿಕೊಳ್ಳುತ್ತವೆ. ಆದರೆ ಈ ವರ್ಷ ನೇಮಕಾತಿ ಪ್ರಕ್ರಿಯೆ ಹಿಂದಿನ ಸಾಲಿನಂತೆ ನಡೆಯಲು ಸಾಧ್ಯವಿಲ್ಲ. ಆರ್ಥಿಕ ಹಿಂಜರಿಕೆ ಒಂದೆಡೆಯಾದರೆ ಬಹುತೇಕ ಸಂಸ್ಥೆಗಳು ನೇಮಕಾತಿ ನಿಲ್ಲಿಸಿವೆ. ಹೀಗಾಗಿ ಹೊಸದಾಗಿ ಪದವಿ ಪೂರೈಸುವ ಲಕ್ಷಾಂತರ ಅಭ್ಯರ್ಥಿಗಳು ಪರಿಣಾಮ ಎದುರಿ ಸಲಿದ್ದಾರೆ ಎಂದು ಶಿಕ್ಷಣ ತಜ್ಞರೊಬ್ಬರು ಆತಂಕ ವ್ಯಕ್ತಪಡಿಸಿದರು.

ಆನ್‌ಲೈನ್‌ ತರಗತಿ
ಕೆಲವೊಂದು ವಿಶ್ವ ವಿದ್ಯಾನಿಲಯಗಳು ಆನ್‌ಲೈನ್‌ ತರಗತಿ ಆರಂಭಿಸಿವೆ. ಈ ಮೂಲಕ ಪಠ್ಯಕ್ರಮ ಪೂರೈಸಿಕೊಳ್ಳಲು ಮುಂದಾಗಿವೆ. ಇದರಿಂದ ರಜಾ ಅವಧಿ ಮುಗಿದ ಪರಿಸ್ಥಿತಿ ಸುಧಾರಿಸಿದ ತತ್‌ಕ್ಷಣವೇ ಪರೀಕ್ಷೆ ನಡೆಸಲು ಅನುಕೂಲ ಆಗಲಿದೆ. ಆದರೆ ವಿದ್ಯಾರ್ಥಿಗಳ ಔದ್ಯೋಗಿಕ ಭವಿಷ್ಯ ಮಾತ್ರ ಇನ್ನಷ್ಟು ಚಿಂತಾಜನಕವಾಗಿರಲಿದೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.